AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಂಡರ ಅಟ್ಟಹಾಸ: ಸೀದಾ ಜೇಬಿಗೆ ಕೈಹಾಕಿ ದರೋಡೆ! ಜನರಿದ್ರೂ ಡೋಂಟ್​ ಕೇರ್​, ಎಲ್ಲಿ?

ಬೆಂಗಳೂರು: ನಗರದಲ್ಲಿ ಕೊರೊನಾ ಅಟ್ಟಹಾಸಕ್ಕೆ ಕೊನೆಯೇ ಇಲ್ಲ ಎಂಬಂತಾಗಿದೆ. ಈ ಮಧ್ಯೆ ಸಿಲಿಕಾನ್ ಸಿಟಿಯ ಕೆಲವು ಪೊಲೀಸರಿಗೂ ಸೋಂಕು ತಗಲುತ್ತಿದ್ದು ನಗರದ ಹಲವು ಠಾಣೆಗಳು ಸಹ ಸೀಲ್​ಡೌನ್​ ಆಗುತ್ತಿವೆ. ಹಾಗಾಗಿ ನಮ್ಮ ಖಾಕಿ ಪಡೆ ಈ ಮಹಾಮಾರಿಯಿಂದ ಕೊಂಚ ನಲುಗಿ ಹೋಗಿದ್ದಾರೆ. ಇದರಿಂದ ನಗರದ ಪುಂಡರು ಮತ್ತು ಕಳ್ಳಕಾಕರಿಗೆ ಎಂದಿಲ್ಲದ ಧೈರ್ಯ ಬಂದಂತಾಗಿದೆ. ಇದಕ್ಕೆ ಸಾಕ್ಷಿಯೆಂಬಂತೆ ಕಳೆದ ಕೆಲವು ದಿನಗಳಿಂದ ಹೆಣ್ಣೂರು ಹಾಗೂ ಹೆಬ್ಬಾಳದ ಸುತ್ತಮುತ್ತಲಿನ ಏರಿಯಾಗಳಲ್ಲಿ ಪುಂಡರ ಗ್ಯಾಂಗ್​ ಒಂದು ಜನರನ್ನು ಬೆದರಿಸಿ ಹಣ ಕಿತ್ತುಕೊಳ್ಳೋಕೆ […]

ಪುಂಡರ ಅಟ್ಟಹಾಸ: ಸೀದಾ ಜೇಬಿಗೆ ಕೈಹಾಕಿ ದರೋಡೆ! ಜನರಿದ್ರೂ ಡೋಂಟ್​ ಕೇರ್​, ಎಲ್ಲಿ?
KUSHAL V
| Edited By: |

Updated on: Jun 22, 2020 | 5:12 PM

Share

ಬೆಂಗಳೂರು: ನಗರದಲ್ಲಿ ಕೊರೊನಾ ಅಟ್ಟಹಾಸಕ್ಕೆ ಕೊನೆಯೇ ಇಲ್ಲ ಎಂಬಂತಾಗಿದೆ. ಈ ಮಧ್ಯೆ ಸಿಲಿಕಾನ್ ಸಿಟಿಯ ಕೆಲವು ಪೊಲೀಸರಿಗೂ ಸೋಂಕು ತಗಲುತ್ತಿದ್ದು ನಗರದ ಹಲವು ಠಾಣೆಗಳು ಸಹ ಸೀಲ್​ಡೌನ್​ ಆಗುತ್ತಿವೆ. ಹಾಗಾಗಿ ನಮ್ಮ ಖಾಕಿ ಪಡೆ ಈ ಮಹಾಮಾರಿಯಿಂದ ಕೊಂಚ ನಲುಗಿ ಹೋಗಿದ್ದಾರೆ.

ಇದರಿಂದ ನಗರದ ಪುಂಡರು ಮತ್ತು ಕಳ್ಳಕಾಕರಿಗೆ ಎಂದಿಲ್ಲದ ಧೈರ್ಯ ಬಂದಂತಾಗಿದೆ. ಇದಕ್ಕೆ ಸಾಕ್ಷಿಯೆಂಬಂತೆ ಕಳೆದ ಕೆಲವು ದಿನಗಳಿಂದ ಹೆಣ್ಣೂರು ಹಾಗೂ ಹೆಬ್ಬಾಳದ ಸುತ್ತಮುತ್ತಲಿನ ಏರಿಯಾಗಳಲ್ಲಿ ಪುಂಡರ ಗ್ಯಾಂಗ್​ ಒಂದು ಜನರನ್ನು ಬೆದರಿಸಿ ಹಣ ಕಿತ್ತುಕೊಳ್ಳೋಕೆ ಶುರುಮಾಡಿದ್ದಾರೆ.

ಸೀದಾ ಜೇಬಿಗೆ ಕೈಹಾಕಿ ದರೋಡೆ..! ಕೊರೊನಾ ಮಹಾಮಾರಿಗೆ ನಲುಗಿ ಜನರನ್ನೇ ಮುಟ್ಟಲು ಬೆಂಗಳೂರಿಗರು ಹಿಂದೆಮುಂದೆ ಯೋಚಿಸುತ್ತಿರುವ ಈ ಸಂದರ್ಭದಲ್ಲಿ ಸೀದಾ ಜೇಬಿಗೇ ಕೈಹಾಕಿ ಹಣ ದೋಚುತ್ತಿದ್ದಾರಂತೆ. ಹಣ ತಗೊಳ್ಳಲು ಬಿಟ್ರೆ ಬಚಾವ್​. ಇಲ್ಲಾಂದ್ರೆ ಚಾಕು, ಮಚ್ಚು ತೋರಿಸಿ ಕಿತ್ತುಕೊಳ್ತಾರೆ. ಜಾಸ್ತಿ ಮಾತಾಡ್ರೆ ಎರಡೇಟು ಕೂಡ ಬೀಳುತ್ತೆ.

ಅಂದ ಹಾಗೆ ಇವರೇನು ದೊಡ್ಡ ಪಂಟರ್​ಗಳಲ್ಲ. ಸಣ್ಣ ವಯಸ್ಸಿನ ಹುಡುಗರು. ಸ್ಕೂಟರ್​, ಬೈಕ್​ಗಳ ಮೇಲೆ ಗುಂಪುಗುಂಪಾಗಿ ಪೆಟ್ಟಿ, ಸಿಗರೇಟ್​ ಅಂಗಡಿಗಳ ಬಳಿ ಅಡ್ಡಾಡೋ ಈ ಗ್ಯಾಂಗ್​ ಎಲ್ಲಿ ಟಾರ್ಗೆಟ್​ ಕಂಡರೇ ಅಲ್ಲೇ ಸ್ಕೆಚ್​. ಸುತ್ತಲೂ ಜನರಿದ್ರೂ ಡೋಂಟ್​ ಕೇರ್​. ಬರೀ ಗ್ರಾಹಕರಲ್ಲದೆ ಅಂಗಡಿ ಮಾಲೀಕರನ್ನು ದೋಚುತ್ತಿದ್ದಾರೆ.

ಈ ಏರಿಯಾಗಳಲ್ಲಿ ಕಳೆದ ಕೆಲವು ದಿನಗಳಿಂದ ಇಂಥ ಹತ್ತಕ್ಕು ಹೆಚ್ಚು ಪ್ರಕರಣಗಳು ವರದಿಯಾಗಿದೆ. ಇನ್ನಾದರೂ ಪೊಲೀಸರು ಈ ಪುಂಡರ ಗ್ಯಾಂಗ್​ನ ಹೆಡೆಮುರಿ ಕಟ್ಟಬೇಕು ಎಂಬುದು ಸ್ಥಳೀಯರ ಮನವಿ.

Follow Us
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್