AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hangal: ಮೆಕ್ಕೆಜೋಳ ರಾಶಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು: 3 ಲಕ್ಷಕ್ಕೂ ಅಧಿಕ ಮೌಲ್ಯದ ತೆನೆರಾಶಿ ಬೆಂಕಿಗಾಹುತಿ

4 ಮೆಕ್ಕೆಜೋಳ ತೆನೆ ರಾಶಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿರುವಂತಹ ಘಟನೆ ಜಿಲ್ಲೆಯ ಹಾನಗಲ್ ತಾಲೂಕು ಕೆಲವರಕೊಪ್ಪ ಗ್ರಾಮದಲ್ಲಿ ನಡೆದಿದೆ.

Hangal: ಮೆಕ್ಕೆಜೋಳ ರಾಶಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು: 3 ಲಕ್ಷಕ್ಕೂ ಅಧಿಕ ಮೌಲ್ಯದ ತೆನೆರಾಶಿ ಬೆಂಕಿಗಾಹುತಿ
ಸುಟ್ಟು ಕರಕಲಾದ ತೆನೆ ರಾಶಿ
TV9 Web
| Edited By: |

Updated on:Jan 11, 2023 | 9:06 PM

Share

ಹಾವೇರಿ: 4 ಮೆಕ್ಕೆಜೋಳ ತೆನೆ ರಾಶಿಗೆ ದುಷ್ಕರ್ಮಿಗಳು ಬೆಂಕಿ (fire) ಇಟ್ಟಿರುವಂತಹ ಘಟನೆ ಜಿಲ್ಲೆಯ ಹಾನಗಲ್ ತಾಲೂಕು ಕೆಲವರಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಕೊಗಲ್ಲಿ ಎಂಬ ರೈತನಿಗೆ ಸೇರಿದ ತೆನೆಯ ರಾಶಿ ಎನ್ನಲಾಗಿದೆ. ಅಂದಾಜು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ತೆನೆರಾಶಿ ಬೆಂಕಿಗಾಹುತಿಯಾಗಿದೆ. ರಾತ್ರಿಯ ವೇಳೆ ಜಮೀನಿನಲ್ಲಿ ಮೆಕ್ಕೆಜೋಳ ತೆನೆಯ ರಾಶಿ ಹಾಕಲಾಗಿತ್ತು. ಈ ವೇಳೆ ದ್ವೇಷದಿಂದ ಅಪರಿಚತರು ರಾಶಿಗೆ ಬೆಂಕಿ ಹಾಕಿದ್ದಾರೆ ಎನ್ನಲಾಗಿದೆ. ಬೆಂಕಿ ನಂದಿಸಲು ಎಷ್ಟೇ ಹರಸಾಹಸ ಪಟ್ಟರು ರಾಶಿಗಳು ಸುಟ್ಟು ಹೋಗಿವೆ. ಆಡೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಕಿಯ ತಾಪಮಾನದಿಂದ ಸಿಲಿಂಡರ್ ಸ್ಫೋಟ: ತಪ್ಪಿದ ಭಾರಿ ಅನಾಹುತ

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕ್ಲೋಸ್‌‌ಬರ್ನ್ ಗ್ರಾಮದಲ್ಲಿ ಬೆಂಕಿಯ ತಾಪಮಾನದಿಂದ ಸಿಲಿಂಡರ್ ಸ್ಫೋಟಗೊಂಡಿದ್ದು, ಶಿವಕುಮಾರ್ ಎಂಬುವರ ಮನೆ ಬೆಂಕಿಗಾಹುತಿಯಾಗಿರುವಂತಹ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಸಿಲಿಂಡರ್ ಸ್ಪೋಟದ ಸದ್ದಿಗೆ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ.

ಇದನ್ನೂ ಓದಿ: ಮಗಳು-ಅಳಿಯನನ್ನು ನೋಡಿಕೊಂಡು ಹೋಗಲು ಬಂದವ ಮನೆ ಮಾಲಕಿಯ ಐಶ್ವರ್ಯಕ್ಕೆ ಮರುಳಾದ; ಮುಂದೇನಾಯ್ತು ನೋಡಿ

ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಬೂದಿಯಾದ ಹಾಸಿಗೆ ತಯಾರಿಕಾ ಘಟಕ 

ತುಮಕೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ಹಾಸಿಗೆ ತಯಾರಿಕಾ ಘಟಕ ಸುಟ್ಟು ಬೂದಿಯಾದಂತಹ ಘಟನೆ ಜಿಲ್ಲೆ ತುರುವೇಕೆರೆ ಪಟ್ಟಣದ ಹೊರವಲಯದಲ್ಲಿರುವ ಸೂಳೆಕೆರೆ ಬಳಿ ನಡೆದಿದೆ. ಅಪಾರ ಪ್ರಮಾಣದ ಹತ್ತಿ, ನಾರು, ಯಂತ್ರೋಪಕರಣಗಳು ಭಸ್ಮವಾಗಿವೆ. ವಲೀಭಾಷಾ ಎಂಬುವರಿಗೆ ಹಾಸಿಗೆ ತಯಾರಿಕಾ ಘಟಕ ಸೇರಿದೆ. ಸುಮಾರು 18 ಲಕ್ಷ ರೂ. ಮೌಲ್ಯದ ವಸ್ತುಗಳು ನಷ್ಟ ಸಾಧ್ಯತೆ ಎನ್ನಲಾಗುತ್ತಿದೆ. ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೀದಿ ನಾಯಿಗಳ ದಾಳಿಗೆ ಅಮಾಯಕ ಭಿಕ್ಷುಕಿ ಸಾವು

ಧಾರವಾಡ: ಭಿಕ್ಷೆ ಬೇಡುತ್ತ, ಜನ ಕೊಟ್ಟಿದ್ದನ್ನು ತಿಂದು, ಎಲ್ಲೆಂದರಲ್ಲಿ ಮಲಗಿ ಅನಾಥವಾಗಿ ಜೀವನ ಸಾಗಿಸುತ್ತಿದ್ದ ಭಿಕ್ಷುಕಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಕೊಂದು ಹಾಕಿರುವ ಅಮಾನವೀಯ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ಮಲಗಿದ್ದ ಭಿಕ್ಷುಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಈ ಪರಿಣಾಮ ಭಿಕ್ಷುಕಿ ಪ್ರಾಣಬಿಟ್ಟಿದ್ದಾರೆ.

ಇದನ್ನೂ ಓದಿ: ಪಿಚ್ಚನಕೆರೆ ಏರಿ ಮೇಲೆ ಚಲಿಸುತ್ತಿದ್ದ ಶಾಲಾ ಬಸ್ಸಿನಿಂದ ಚಕ್ರದಡಿಗೆ ಬಿದ್ದು ಯುಕೆಜಿ ವಿದ್ಯಾರ್ಥಿನಿ ಸಾವು

ಧಾರವಾಡದಲ್ಲಿ ಬೀದಿ ನಾಯಿಗಳ ಆವಳಿಗೆ ಜನ ಬೆಚ್ಚಿಬಿದ್ದಿದ್ದಾರೆ. ಎಂದಿನಂತೆ ರಸ್ತೆ ಬದಿ ರಾತ್ರಿ ನಿದ್ದೆಗೆ ಜಾರಿದ್ದ ಭಿಕ್ಷುಕಿ ಮೇಲೆ ಬೀದಿ ನಾಯಿಗಳು ಎರಗಿವೆ. ಭಿಕ್ಷುಕಿಯನ್ನು ಕಚ್ಚಿ ಎಳೆದಾಡಿವೆ. ನಾಯಿ ದಾಳಿಯಿಂದ ಭಿಕ್ಷುಕಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಗ್ರಾಮದ ಖಬರಸ್ತಾನ್ ಬಳಿ ಶವ ಪತ್ತೆಯಾಗಿದ್ದು ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಯಿ ದಾಳಿಗೆ ಮೃತಪಟ್ಟ ಭಿಕ್ಷುಕಿ ಹೆಸರು, ವಿಳಾಸ ಪತ್ತೆಯಾಗಿಲ್ಲ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:48 pm, Wed, 11 January 23

Follow Us
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್