AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮಿತಿಮೀರಿದ ಕಿಡಿಗೇಡಿಗಳ ಅಟ್ಟಹಾಸ; ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮಹಾನಗರದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವಸಂತನಗರದಲ್ಲಿ ಬೆಳಗಿನ ಜಾವ 5 ಗಂಟೆ ವೇಳೆಗೆ ನಡೆದಿದೆ.

ಬೆಂಗಳೂರಿನಲ್ಲಿ ಮಿತಿಮೀರಿದ ಕಿಡಿಗೇಡಿಗಳ ಅಟ್ಟಹಾಸ; ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಬೆಂಗಳೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ರಾಚಪ್ಪಾಜಿ ನಾಯ್ಕ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 06, 2023 | 11:47 AM

Share

ಬೆಂಗಳೂರು, ಆ.6: ಮಹಾನಗರದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದಂತೆ ಕಾಣುತ್ತದೆ. ದಿನವೂ ಒಂದಿಲ್ಲೊಂದು ಅಪರಾಧ ಕೃತ್ಯಗಳು ನಡೆಯುತ್ತಲೇ ಇದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಹೌದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್(Bike)​ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವಸಂತನಗರ(Vasanthanagar)ದಲ್ಲಿ ಬೆಳಗಿನ ಜಾವ 5 ಗಂಟೆ ವೇಳೆಗೆ ನಡೆದಿದೆ. ಇನ್ನು ಮೂವರು ಕಿಡಿಗೇಡಿಗಳು ಸೇರಿ ಬೆಂಕಿ ಹಚ್ಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಕುರಿತು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬ್ಯಾಟರಿ ಸ್ಫೋಟಗೊಂಡು ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್

ಚಾಮರಾಜನಗರ: ಬ್ಯಾಟರಿ ಸ್ಫೋಟಗೊಂಡು ಎಲೆಕ್ಟ್ರಿಕ್ ಬೈಕ್ ಹೊತ್ತಿ ಉರಿದ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ. ಒಂದು ವರ್ಷದ ಹಿಂದೆ ಬಸವರಾಜಪ್ಪ ಎನ್ನುವವರು ಅಕಿನೋವ್ ಬೈಕ್ ಖರೀದಿಸಿದ್ದರು. ಇದೀಗ ಓವರ್ ಹೀಟ್​ನಿಂದಾಗಿ ಬೈಕ್​ನ ಬ್ಯಾಟರಿ ಸ್ಫೋಟಗೊಂಡ ಕುರಿತು ಮಾಹಿತಿ ಸಿಕ್ಕಿದೆ. ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಎಲೆಕ್ಟ್ರಾನಿಕ್ ವಾಹನದ  ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವೃದ್ಧ ಸಾವು, ಮೂವರಿಗೆ ಗಾಯ

ಚಾರ್ಜ್​ಗೆ ಹಾಕಿದ ಹತ್ತೆ ನಿಮಿಷದಲ್ಲಿ ಸ್ಪೋಟಗೊಂಡ ಬೈಕ್ ಬ್ಯಾಟರಿ

ಇನ್ನು ಬೈಕ್​ ಚಾರ್ಜ್​ಗೆ ಹಾಕಿದ ಹತ್ತೆ ನಿಮಿಷದಲ್ಲಿ ಬೈಕ್ ಬ್ಯಾಟರಿ ಸ್ಪೋಟಗೊಂಡು, ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ. ಬೈಕ್ ಹೊತ್ತಿ ಉರಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಬ್ಯಾಟರಿ ಓವರ್ ಹೀಟ್ ಆದ ಪರಿಣಾಮದಿಂದ ಸ್ಪೋಟವಾಗಿದೆಯೆಂದು ಬೆಳಕಿಗೆ ಬಂದಿದೆ. ಇನ್ನು ಬ್ಯಾಟರಿ ಸ್ಪೋಟಗೊಳ್ಳುವ ವಿಡಿಯೋ ಮೊಬೈಲ್ ಕ್ಯಾಮರದಲ್ಲಿ ಸೆರೆಯಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:46 am, Sun, 6 August 23

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ