ಬೆಂಗಳೂರಿನಲ್ಲಿ ಮಿತಿಮೀರಿದ ಕಿಡಿಗೇಡಿಗಳ ಅಟ್ಟಹಾಸ; ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮಹಾನಗರದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವಸಂತನಗರದಲ್ಲಿ ಬೆಳಗಿನ ಜಾವ 5 ಗಂಟೆ ವೇಳೆಗೆ ನಡೆದಿದೆ.

ಬೆಂಗಳೂರಿನಲ್ಲಿ ಮಿತಿಮೀರಿದ ಕಿಡಿಗೇಡಿಗಳ ಅಟ್ಟಹಾಸ; ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಬೆಂಗಳೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 06, 2023 | 11:47 AM

ಬೆಂಗಳೂರು, ಆ.6: ಮಹಾನಗರದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದಂತೆ ಕಾಣುತ್ತದೆ. ದಿನವೂ ಒಂದಿಲ್ಲೊಂದು ಅಪರಾಧ ಕೃತ್ಯಗಳು ನಡೆಯುತ್ತಲೇ ಇದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಹೌದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್(Bike)​ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವಸಂತನಗರ(Vasanthanagar)ದಲ್ಲಿ ಬೆಳಗಿನ ಜಾವ 5 ಗಂಟೆ ವೇಳೆಗೆ ನಡೆದಿದೆ. ಇನ್ನು ಮೂವರು ಕಿಡಿಗೇಡಿಗಳು ಸೇರಿ ಬೆಂಕಿ ಹಚ್ಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಕುರಿತು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬ್ಯಾಟರಿ ಸ್ಫೋಟಗೊಂಡು ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್

ಚಾಮರಾಜನಗರ: ಬ್ಯಾಟರಿ ಸ್ಫೋಟಗೊಂಡು ಎಲೆಕ್ಟ್ರಿಕ್ ಬೈಕ್ ಹೊತ್ತಿ ಉರಿದ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ. ಒಂದು ವರ್ಷದ ಹಿಂದೆ ಬಸವರಾಜಪ್ಪ ಎನ್ನುವವರು ಅಕಿನೋವ್ ಬೈಕ್ ಖರೀದಿಸಿದ್ದರು. ಇದೀಗ ಓವರ್ ಹೀಟ್​ನಿಂದಾಗಿ ಬೈಕ್​ನ ಬ್ಯಾಟರಿ ಸ್ಫೋಟಗೊಂಡ ಕುರಿತು ಮಾಹಿತಿ ಸಿಕ್ಕಿದೆ. ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಎಲೆಕ್ಟ್ರಾನಿಕ್ ವಾಹನದ  ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವೃದ್ಧ ಸಾವು, ಮೂವರಿಗೆ ಗಾಯ

ಚಾರ್ಜ್​ಗೆ ಹಾಕಿದ ಹತ್ತೆ ನಿಮಿಷದಲ್ಲಿ ಸ್ಪೋಟಗೊಂಡ ಬೈಕ್ ಬ್ಯಾಟರಿ

ಇನ್ನು ಬೈಕ್​ ಚಾರ್ಜ್​ಗೆ ಹಾಕಿದ ಹತ್ತೆ ನಿಮಿಷದಲ್ಲಿ ಬೈಕ್ ಬ್ಯಾಟರಿ ಸ್ಪೋಟಗೊಂಡು, ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ. ಬೈಕ್ ಹೊತ್ತಿ ಉರಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಬ್ಯಾಟರಿ ಓವರ್ ಹೀಟ್ ಆದ ಪರಿಣಾಮದಿಂದ ಸ್ಪೋಟವಾಗಿದೆಯೆಂದು ಬೆಳಕಿಗೆ ಬಂದಿದೆ. ಇನ್ನು ಬ್ಯಾಟರಿ ಸ್ಪೋಟಗೊಳ್ಳುವ ವಿಡಿಯೋ ಮೊಬೈಲ್ ಕ್ಯಾಮರದಲ್ಲಿ ಸೆರೆಯಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:46 am, Sun, 6 August 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ