AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮಿತಿಮೀರಿದ ಕಿಡಿಗೇಡಿಗಳ ಅಟ್ಟಹಾಸ; ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮಹಾನಗರದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವಸಂತನಗರದಲ್ಲಿ ಬೆಳಗಿನ ಜಾವ 5 ಗಂಟೆ ವೇಳೆಗೆ ನಡೆದಿದೆ.

ಬೆಂಗಳೂರಿನಲ್ಲಿ ಮಿತಿಮೀರಿದ ಕಿಡಿಗೇಡಿಗಳ ಅಟ್ಟಹಾಸ; ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಬೆಂಗಳೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ರಾಚಪ್ಪಾಜಿ ನಾಯ್ಕ್
| Edited By: |

Updated on:Aug 06, 2023 | 11:47 AM

Share

ಬೆಂಗಳೂರು, ಆ.6: ಮಹಾನಗರದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದಂತೆ ಕಾಣುತ್ತದೆ. ದಿನವೂ ಒಂದಿಲ್ಲೊಂದು ಅಪರಾಧ ಕೃತ್ಯಗಳು ನಡೆಯುತ್ತಲೇ ಇದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಹೌದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್(Bike)​ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವಸಂತನಗರ(Vasanthanagar)ದಲ್ಲಿ ಬೆಳಗಿನ ಜಾವ 5 ಗಂಟೆ ವೇಳೆಗೆ ನಡೆದಿದೆ. ಇನ್ನು ಮೂವರು ಕಿಡಿಗೇಡಿಗಳು ಸೇರಿ ಬೆಂಕಿ ಹಚ್ಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಕುರಿತು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬ್ಯಾಟರಿ ಸ್ಫೋಟಗೊಂಡು ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್

ಚಾಮರಾಜನಗರ: ಬ್ಯಾಟರಿ ಸ್ಫೋಟಗೊಂಡು ಎಲೆಕ್ಟ್ರಿಕ್ ಬೈಕ್ ಹೊತ್ತಿ ಉರಿದ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ. ಒಂದು ವರ್ಷದ ಹಿಂದೆ ಬಸವರಾಜಪ್ಪ ಎನ್ನುವವರು ಅಕಿನೋವ್ ಬೈಕ್ ಖರೀದಿಸಿದ್ದರು. ಇದೀಗ ಓವರ್ ಹೀಟ್​ನಿಂದಾಗಿ ಬೈಕ್​ನ ಬ್ಯಾಟರಿ ಸ್ಫೋಟಗೊಂಡ ಕುರಿತು ಮಾಹಿತಿ ಸಿಕ್ಕಿದೆ. ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಎಲೆಕ್ಟ್ರಾನಿಕ್ ವಾಹನದ  ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವೃದ್ಧ ಸಾವು, ಮೂವರಿಗೆ ಗಾಯ

ಚಾರ್ಜ್​ಗೆ ಹಾಕಿದ ಹತ್ತೆ ನಿಮಿಷದಲ್ಲಿ ಸ್ಪೋಟಗೊಂಡ ಬೈಕ್ ಬ್ಯಾಟರಿ

ಇನ್ನು ಬೈಕ್​ ಚಾರ್ಜ್​ಗೆ ಹಾಕಿದ ಹತ್ತೆ ನಿಮಿಷದಲ್ಲಿ ಬೈಕ್ ಬ್ಯಾಟರಿ ಸ್ಪೋಟಗೊಂಡು, ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ. ಬೈಕ್ ಹೊತ್ತಿ ಉರಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಬ್ಯಾಟರಿ ಓವರ್ ಹೀಟ್ ಆದ ಪರಿಣಾಮದಿಂದ ಸ್ಪೋಟವಾಗಿದೆಯೆಂದು ಬೆಳಕಿಗೆ ಬಂದಿದೆ. ಇನ್ನು ಬ್ಯಾಟರಿ ಸ್ಪೋಟಗೊಳ್ಳುವ ವಿಡಿಯೋ ಮೊಬೈಲ್ ಕ್ಯಾಮರದಲ್ಲಿ ಸೆರೆಯಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:46 am, Sun, 6 August 23

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ