AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾಥ ವೃದ್ದನ ತಲೆ ಮೇಲೆ ಕಲ್ಲು ಎತ್ತಾಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ನೈಸ್​ ರಸ್ತೆ ಬಳಿ ಒಂದು ಚಿಕ್ಕದಾದ ಪೇಪರ್​ ಶೆಡ್​​ ಹಾಕಿಕೊಂಡು ಜೀವನ ಸಾಗಿಸುತ್ತಿದ್ದ ವೃದ್ಧನ ಮೇಲೆ ದುಷ್ಕರ್ಮಿಗಳು ಏಕಾಎಕಿ ಬಂದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ನಲಮಂಗಲದ ನೈಸ್​ ರಸ್ತೆಯಲ್ಲಿ ನಡೆದಿದೆ.

ಅನಾಥ ವೃದ್ದನ ತಲೆ ಮೇಲೆ ಕಲ್ಲು ಎತ್ತಾಕಿ ಹತ್ಯೆ ಮಾಡಿದ ದುಷ್ಕರ್ಮಿಗಳು
ಪ್ರಾತಿನಿಧಿಕ ಚಿತ್ರ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Oct 10, 2023 | 2:52 PM

Share

ಬೆಂಗಳೂರು ಗ್ರಾಮಾಂತರ, ಅ.10: ಅನಾಥ ವೃದ್ದನ ತಲೆ ಮೇಲೆ ಕಲ್ಲು ಎತ್ತು ಹಾಕಿ ಹತ್ಯೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ(Nelamangala)ದ ನೈಸ್ ರಸ್ತೆ ಬಳಿ ನಡೆದಿದೆ. ಅಂಚೆಪಾಳ್ಯದ ನರಸಿಂಹಯ್ಯ(85) ಮೃತ ವ್ಯಕ್ತಿ. ಸಾವನ್ನಪ್ಪಿದ ನರಸಿಂಹಯ್ಯ ಅನಾಥವಾಗಿ ರಸ್ತೆ ಪಕ್ಕದಲ್ಲಿ ಜೀವನ ಮಾಡುತ್ತಿದ್ದ. ನೈಸ್​ ರಸ್ತೆ ಬಳಿ ಒಂದು ಚಿಕ್ಕದಾದ ಪೇಪರ್​ ಶೆಡ್​​ ಹಾಕಿಕೊಂಡು ಜೀವನ ಸಾಗಿಸುತ್ತಿದ್ದ. ಇದೀಗ ವೃದ್ದನ ಮೇಲೆ ದಿಢೀರ್​ ಕಲ್ಲು ಎತ್ತು ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಕುರಿತು ಲಾರಿ ಚಾಲಕ ನೀಡಿದ ದೂರಿನ ಮೇರೆಗೆ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಂತಕರಿಗಾಗಿ ಬಲೆ ಬೀಸಿದ್ದಾರೆ.

ರಸ್ತೆ ದಾಟುತಿದ್ದ ವ್ಯಕ್ತಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ, ಪಾದಚಾರಿ ಸ್ಥಳದಲ್ಲೇ ಸಾವು

ಕಲಬುರಗಿ: ಚಿಂಚೋಳಿ ತಾಲೂಕಿನ ಯಂಪಳ್ಳಿ ಗ್ರಾಮದ ಬಳಿ ಸಾರಿಗೆ ಬಸ್​ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ ಘಟನೆ ನಡೆದಿದೆ. ಬಕ್ಕಯ್ಯಾ(68) ಮೃತ ರ್ದುದೈವಿ. ಇಂದು ಮುಂಜಾನೆ ಬಹಿರ್ದೆಸೆಗೆ ತೆರಳುತ್ತಿದ್ದಾಗ ಬಸ್ ಡಿಕ್ಕಿಯಾಗಿದೆ. ಪರಿಣಾಮ ಬಕ್ಕಯ್ಯಾ  ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ರಾಜಸ್ಥಾನ: ಸಿಕಾರ್​ನಲ್ಲಿ ನೀಟ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ, 3 ದಿನಗಳಲ್ಲಿ ಎರಡನೇ ಸಾವು

ಜೈನ ಮಂದಿರದಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು: ಜೈನ ಮಂದಿರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಗಳನ್ನು ಅಶೋಕ್​ನಗರದ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಅಶೋಕ್​​ನಗರದ ಜೈನ್ ದೇವಾಲಯದಲ್ಲಿ ಕಳ್ಳತನ ನಡೆದಿತ್ತು. 14 ಕೆಜಿ ದೇವರ ಬೆಳ್ಳಿಯ ಆಭರಣ ಸೇರಿದಂತೆ ಇನ್ನಿತರ ದೇವಾಲಯದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರು. ಈ ಕುರಿತು ಇದೀಗ  6 ಜನ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇವರುಗಳ ಪೈಕಿ ಓರ್ವ ದೇವಾಲಯದ ಟೈಲ್ಸ್ ಕೆಲಸ ಕೂಡ ಮಾಡಿದ್ದ ಎನ್ನಲಾಗಿದೆ. ಇದಾದ ಎರಡು ತಿಂಗಳ ಬಳಿಕ ಕೃತ್ಯ ಎಸಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!