AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಹಾಡುಹಗಲೆ ಪಿಸ್ತೂಲ್ ತೋರಿಸಿ ಚಿನ್ನಾಭರಣ ದೋಚಲು ಯತ್ನಿಸಿದ ದುಷ್ಕರ್ಮಿಗಳು

ಫೆಬ್ರವರಿ 7 ರಂದು ಬೆಳಿಗ್ಗೆ 8:45ರ ಸುಮಾರಿಗೆ ಇಬ್ಬರು ಅಪರಿಚಿತರು ಹರಿಹಂತ್ ಜ್ಯುವೆಲರ್ಸ್ ಅಂಗಡಿಗೆ ಬಂದಿದ್ದಾರೆ. ಇವರ ನಂತರ ಕೆಲ ಸಮಯದ ಬಳಿಕ ಇನ್ನಿಬ್ಬರು ಅಂಗಡಿಯೊಳಗೆ ನುಗ್ಗಿದ್ದಾರೆ. ಇವರೊಲ್ಲಬ್ಬ ಏಕಾಏಕಿ ಪ್ಯಾಂಟ್​ನಿಂದ ಪಿಸ್ತೂಲ್ ಅನ್ನು ತೆಗೆದು ಕಿರುಚಿಕೊಳ್ಳಬೇಡ ಎಂದು ಹೇಳುತ್ತಾ ವಿಷ್ಣು ಅವರನ್ನು ಹಿಡಿದುಕೊಳ್ಳಲು ಮುಂದಾದ. ಮುಂದೇನಾಯ್ತು ಈ ಸ್ಟೋರಿ ಓದಿ...

ನೆಲಮಂಗಲ: ಹಾಡುಹಗಲೆ ಪಿಸ್ತೂಲ್ ತೋರಿಸಿ ಚಿನ್ನಾಭರಣ ದೋಚಲು ಯತ್ನಿಸಿದ ದುಷ್ಕರ್ಮಿಗಳು
ದರೋಡೆಗೆ ಯತ್ನಿಸಿದ ಆರೋಪಿಗಳು
ಬಿ ಮೂರ್ತಿ, ನೆಲಮಂಗಲ
| Edited By: |

Updated on: Feb 10, 2024 | 3:10 PM

Share

ನೆಲಮಂಗಲ, ಫೆಬ್ರವರಿ 10: ನಾಲ್ವರು ದುಷ್ಕರ್ಮಿಗಳು ಹಾಡುಹಗಲೆ ಪಿಸ್ತೂಲ್ ತೋರಿಸಿ ಚಿನ್ನಭರಣ (Gold) ದೋಚಲು ಯತ್ನಿಸಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಫೆಬ್ರವರಿ 7 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ (Police) ಠಾಣೆಯಲ್ಲಿ IPC 393 ಕಲಂ 27(1) ಆರ್ಮ್ಸ್ ಆಕ್ಟ್ 1959ರ ಅಡಿ ಪ್ರಕರಣ ದಾಖಲಾಗಿದೆ.

ಫೆಬ್ರವರಿ 7 ರಂದು ಬೆಳಿಗ್ಗೆ 8:45ರ ಸುಮಾರಿಗೆ ಇಬ್ಬರು ಅಪರಿಚಿತರು ಹರಿಹಂತ್ ಜ್ಯುವೆಲರ್ಸ್ ಅಂಗಡಿಗೆ ಬಂದಿದ್ದಾರೆ. ಇದೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವಿಷ್ಣು ಅಲಿಯಾಸ್​ ಮಾಣಕ್ ರಾಮ್ (22 ವರ್ಷ) ಎಂಬ ಯುವಕನಿಗೆ ಮಾರ್ವಾಡಿ ಭಾಷೆಯಲ್ಲಿ ಯಾವ ಊರು ಎಂದು ಕೇಳಿದ್ದಾರೆ. ಅದಕ್ಕೆ ವಿಷ್ಣು ರಾಜಸ್ಥಾನದ ಅಸ್ಸಾವರಿಯವ ಎಂದು ಹೇಳಿದ್ದಾರೆ. ಬಳಿಕ ಆರೋಪಿಗಳು ವಿಷ್ಣುಗೆ ಬೆಳ್ಳಿಯ ಬ್ರೇಸ್​ ಲೆಟ್​ ತೋರಿಸು ಎಂದು ಹೇಳಿದ್ದಾರೆ. ಸರಿ ಎಂದು, ವಿಷ್ಣು ಬ್ರೇಸ್ ಲೇಟ್ ತೋರಿಸಲು ಷೋ ಕೇಸ್​ನಿಂದ ತೆಗೆಯುವ ಸಮಯದಲ್ಲಿ ಇನ್ನಿಬ್ಬರು ಅಂಗಡಿಯೊಳಗೆ ನುಗ್ಗಿದ್ದಾರೆ.

ಇದನ್ನೂ ಓದಿ: ನೀವು ಮನೆಯಲ್ಲಿ ಒಂಟಿಯಾಗಿ ಇರುತ್ತೀರಾ? ಹಾಗಿದ್ರೆ ಎಚ್ಚರ! ಹಾಡಹಗಲೇ ಮನೆಗೆ ನುಗ್ಗಿ ದರೋಡೆ, ಓರ್ವ ಅರೆಸ್ಟ್

ಇವರೊಲ್ಲಬ್ಬ ಏಕಾಏಕಿ ಪ್ಯಾಂಟ್​ನ ಸೊಂಟದ ಪಟ್ಟಿಯ ಹೊಟ್ಟೆಯ ಬಳಿ ಸಿಕ್ಕಿಸಿಕೊಂಡಿದ್ದ ಪಿಸ್ತೂಲ್ ಅನ್ನು ತೆಗೆದು ಕಿರುಚಿಕೊಳ್ಳಬೇಡ ಎಂದು ಹೇಳುತ್ತಾ ವಿಷ್ಣು ಅವರನ್ನು ಹಿಡಿದುಕೊಳ್ಳಲು ಮುಂದಾದ. ಆಗ ವಿಷ್ಣು ಲಾಕ‌ರ್ ಇರುವ ಸೇವಿ ರೂಂನೊಳಗೆ ಹೋಗಿ ಬಾಗಿಲು ಹಾಕಿಕೊಂಡರು. 2-3 ನಿಮಿಷ ಏನೂ ಶಬ್ದ ಬರದ ಕಾರಣ ವಿಷ್ಣು ಹೊರಗೆ ಬಂದು ನೋಡಿದ್ದು, ನಾಲ್ವರು ಅಪರಿಚಿತರು ಇರಲಿಲ್ಲ. ಬಳಿಕ ಅಂಗಡಿಯಲ್ಲಿನ ವಸ್ತುಗಳನ್ನು ನೋಡಿದಾಗ, ಯಾವ ವಸ್ತುಗಳು ಕಳವಾಗಿರುವುದಿಲ್ಲ. ಬಳಿಕ ವಿಷ್ಣ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿದ್ದು, ನಾಲ್ವರನ್ನು ಪತ್ತೆ ಮಾಡಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ