AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಹಾಡುಹಗಲೆ ಪಿಸ್ತೂಲ್ ತೋರಿಸಿ ಚಿನ್ನಾಭರಣ ದೋಚಲು ಯತ್ನಿಸಿದ ದುಷ್ಕರ್ಮಿಗಳು

ಫೆಬ್ರವರಿ 7 ರಂದು ಬೆಳಿಗ್ಗೆ 8:45ರ ಸುಮಾರಿಗೆ ಇಬ್ಬರು ಅಪರಿಚಿತರು ಹರಿಹಂತ್ ಜ್ಯುವೆಲರ್ಸ್ ಅಂಗಡಿಗೆ ಬಂದಿದ್ದಾರೆ. ಇವರ ನಂತರ ಕೆಲ ಸಮಯದ ಬಳಿಕ ಇನ್ನಿಬ್ಬರು ಅಂಗಡಿಯೊಳಗೆ ನುಗ್ಗಿದ್ದಾರೆ. ಇವರೊಲ್ಲಬ್ಬ ಏಕಾಏಕಿ ಪ್ಯಾಂಟ್​ನಿಂದ ಪಿಸ್ತೂಲ್ ಅನ್ನು ತೆಗೆದು ಕಿರುಚಿಕೊಳ್ಳಬೇಡ ಎಂದು ಹೇಳುತ್ತಾ ವಿಷ್ಣು ಅವರನ್ನು ಹಿಡಿದುಕೊಳ್ಳಲು ಮುಂದಾದ. ಮುಂದೇನಾಯ್ತು ಈ ಸ್ಟೋರಿ ಓದಿ...

ನೆಲಮಂಗಲ: ಹಾಡುಹಗಲೆ ಪಿಸ್ತೂಲ್ ತೋರಿಸಿ ಚಿನ್ನಾಭರಣ ದೋಚಲು ಯತ್ನಿಸಿದ ದುಷ್ಕರ್ಮಿಗಳು
ದರೋಡೆಗೆ ಯತ್ನಿಸಿದ ಆರೋಪಿಗಳು
ಬಿ ಮೂರ್ತಿ, ನೆಲಮಂಗಲ
| Edited By: |

Updated on: Feb 10, 2024 | 3:10 PM

Share

ನೆಲಮಂಗಲ, ಫೆಬ್ರವರಿ 10: ನಾಲ್ವರು ದುಷ್ಕರ್ಮಿಗಳು ಹಾಡುಹಗಲೆ ಪಿಸ್ತೂಲ್ ತೋರಿಸಿ ಚಿನ್ನಭರಣ (Gold) ದೋಚಲು ಯತ್ನಿಸಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಫೆಬ್ರವರಿ 7 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ (Police) ಠಾಣೆಯಲ್ಲಿ IPC 393 ಕಲಂ 27(1) ಆರ್ಮ್ಸ್ ಆಕ್ಟ್ 1959ರ ಅಡಿ ಪ್ರಕರಣ ದಾಖಲಾಗಿದೆ.

ಫೆಬ್ರವರಿ 7 ರಂದು ಬೆಳಿಗ್ಗೆ 8:45ರ ಸುಮಾರಿಗೆ ಇಬ್ಬರು ಅಪರಿಚಿತರು ಹರಿಹಂತ್ ಜ್ಯುವೆಲರ್ಸ್ ಅಂಗಡಿಗೆ ಬಂದಿದ್ದಾರೆ. ಇದೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವಿಷ್ಣು ಅಲಿಯಾಸ್​ ಮಾಣಕ್ ರಾಮ್ (22 ವರ್ಷ) ಎಂಬ ಯುವಕನಿಗೆ ಮಾರ್ವಾಡಿ ಭಾಷೆಯಲ್ಲಿ ಯಾವ ಊರು ಎಂದು ಕೇಳಿದ್ದಾರೆ. ಅದಕ್ಕೆ ವಿಷ್ಣು ರಾಜಸ್ಥಾನದ ಅಸ್ಸಾವರಿಯವ ಎಂದು ಹೇಳಿದ್ದಾರೆ. ಬಳಿಕ ಆರೋಪಿಗಳು ವಿಷ್ಣುಗೆ ಬೆಳ್ಳಿಯ ಬ್ರೇಸ್​ ಲೆಟ್​ ತೋರಿಸು ಎಂದು ಹೇಳಿದ್ದಾರೆ. ಸರಿ ಎಂದು, ವಿಷ್ಣು ಬ್ರೇಸ್ ಲೇಟ್ ತೋರಿಸಲು ಷೋ ಕೇಸ್​ನಿಂದ ತೆಗೆಯುವ ಸಮಯದಲ್ಲಿ ಇನ್ನಿಬ್ಬರು ಅಂಗಡಿಯೊಳಗೆ ನುಗ್ಗಿದ್ದಾರೆ.

ಇದನ್ನೂ ಓದಿ: ನೀವು ಮನೆಯಲ್ಲಿ ಒಂಟಿಯಾಗಿ ಇರುತ್ತೀರಾ? ಹಾಗಿದ್ರೆ ಎಚ್ಚರ! ಹಾಡಹಗಲೇ ಮನೆಗೆ ನುಗ್ಗಿ ದರೋಡೆ, ಓರ್ವ ಅರೆಸ್ಟ್

ಇವರೊಲ್ಲಬ್ಬ ಏಕಾಏಕಿ ಪ್ಯಾಂಟ್​ನ ಸೊಂಟದ ಪಟ್ಟಿಯ ಹೊಟ್ಟೆಯ ಬಳಿ ಸಿಕ್ಕಿಸಿಕೊಂಡಿದ್ದ ಪಿಸ್ತೂಲ್ ಅನ್ನು ತೆಗೆದು ಕಿರುಚಿಕೊಳ್ಳಬೇಡ ಎಂದು ಹೇಳುತ್ತಾ ವಿಷ್ಣು ಅವರನ್ನು ಹಿಡಿದುಕೊಳ್ಳಲು ಮುಂದಾದ. ಆಗ ವಿಷ್ಣು ಲಾಕ‌ರ್ ಇರುವ ಸೇವಿ ರೂಂನೊಳಗೆ ಹೋಗಿ ಬಾಗಿಲು ಹಾಕಿಕೊಂಡರು. 2-3 ನಿಮಿಷ ಏನೂ ಶಬ್ದ ಬರದ ಕಾರಣ ವಿಷ್ಣು ಹೊರಗೆ ಬಂದು ನೋಡಿದ್ದು, ನಾಲ್ವರು ಅಪರಿಚಿತರು ಇರಲಿಲ್ಲ. ಬಳಿಕ ಅಂಗಡಿಯಲ್ಲಿನ ವಸ್ತುಗಳನ್ನು ನೋಡಿದಾಗ, ಯಾವ ವಸ್ತುಗಳು ಕಳವಾಗಿರುವುದಿಲ್ಲ. ಬಳಿಕ ವಿಷ್ಣ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿದ್ದು, ನಾಲ್ವರನ್ನು ಪತ್ತೆ ಮಾಡಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು