AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಹಾಡುಹಗಲೆ ಪಿಸ್ತೂಲ್ ತೋರಿಸಿ ಚಿನ್ನಾಭರಣ ದೋಚಲು ಯತ್ನಿಸಿದ ದುಷ್ಕರ್ಮಿಗಳು

ಫೆಬ್ರವರಿ 7 ರಂದು ಬೆಳಿಗ್ಗೆ 8:45ರ ಸುಮಾರಿಗೆ ಇಬ್ಬರು ಅಪರಿಚಿತರು ಹರಿಹಂತ್ ಜ್ಯುವೆಲರ್ಸ್ ಅಂಗಡಿಗೆ ಬಂದಿದ್ದಾರೆ. ಇವರ ನಂತರ ಕೆಲ ಸಮಯದ ಬಳಿಕ ಇನ್ನಿಬ್ಬರು ಅಂಗಡಿಯೊಳಗೆ ನುಗ್ಗಿದ್ದಾರೆ. ಇವರೊಲ್ಲಬ್ಬ ಏಕಾಏಕಿ ಪ್ಯಾಂಟ್​ನಿಂದ ಪಿಸ್ತೂಲ್ ಅನ್ನು ತೆಗೆದು ಕಿರುಚಿಕೊಳ್ಳಬೇಡ ಎಂದು ಹೇಳುತ್ತಾ ವಿಷ್ಣು ಅವರನ್ನು ಹಿಡಿದುಕೊಳ್ಳಲು ಮುಂದಾದ. ಮುಂದೇನಾಯ್ತು ಈ ಸ್ಟೋರಿ ಓದಿ...

ನೆಲಮಂಗಲ: ಹಾಡುಹಗಲೆ ಪಿಸ್ತೂಲ್ ತೋರಿಸಿ ಚಿನ್ನಾಭರಣ ದೋಚಲು ಯತ್ನಿಸಿದ ದುಷ್ಕರ್ಮಿಗಳು
ದರೋಡೆಗೆ ಯತ್ನಿಸಿದ ಆರೋಪಿಗಳು
ಬಿ ಮೂರ್ತಿ, ನೆಲಮಂಗಲ
| Edited By: |

Updated on: Feb 10, 2024 | 3:10 PM

Share

ನೆಲಮಂಗಲ, ಫೆಬ್ರವರಿ 10: ನಾಲ್ವರು ದುಷ್ಕರ್ಮಿಗಳು ಹಾಡುಹಗಲೆ ಪಿಸ್ತೂಲ್ ತೋರಿಸಿ ಚಿನ್ನಭರಣ (Gold) ದೋಚಲು ಯತ್ನಿಸಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಫೆಬ್ರವರಿ 7 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ (Police) ಠಾಣೆಯಲ್ಲಿ IPC 393 ಕಲಂ 27(1) ಆರ್ಮ್ಸ್ ಆಕ್ಟ್ 1959ರ ಅಡಿ ಪ್ರಕರಣ ದಾಖಲಾಗಿದೆ.

ಫೆಬ್ರವರಿ 7 ರಂದು ಬೆಳಿಗ್ಗೆ 8:45ರ ಸುಮಾರಿಗೆ ಇಬ್ಬರು ಅಪರಿಚಿತರು ಹರಿಹಂತ್ ಜ್ಯುವೆಲರ್ಸ್ ಅಂಗಡಿಗೆ ಬಂದಿದ್ದಾರೆ. ಇದೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವಿಷ್ಣು ಅಲಿಯಾಸ್​ ಮಾಣಕ್ ರಾಮ್ (22 ವರ್ಷ) ಎಂಬ ಯುವಕನಿಗೆ ಮಾರ್ವಾಡಿ ಭಾಷೆಯಲ್ಲಿ ಯಾವ ಊರು ಎಂದು ಕೇಳಿದ್ದಾರೆ. ಅದಕ್ಕೆ ವಿಷ್ಣು ರಾಜಸ್ಥಾನದ ಅಸ್ಸಾವರಿಯವ ಎಂದು ಹೇಳಿದ್ದಾರೆ. ಬಳಿಕ ಆರೋಪಿಗಳು ವಿಷ್ಣುಗೆ ಬೆಳ್ಳಿಯ ಬ್ರೇಸ್​ ಲೆಟ್​ ತೋರಿಸು ಎಂದು ಹೇಳಿದ್ದಾರೆ. ಸರಿ ಎಂದು, ವಿಷ್ಣು ಬ್ರೇಸ್ ಲೇಟ್ ತೋರಿಸಲು ಷೋ ಕೇಸ್​ನಿಂದ ತೆಗೆಯುವ ಸಮಯದಲ್ಲಿ ಇನ್ನಿಬ್ಬರು ಅಂಗಡಿಯೊಳಗೆ ನುಗ್ಗಿದ್ದಾರೆ.

ಇದನ್ನೂ ಓದಿ: ನೀವು ಮನೆಯಲ್ಲಿ ಒಂಟಿಯಾಗಿ ಇರುತ್ತೀರಾ? ಹಾಗಿದ್ರೆ ಎಚ್ಚರ! ಹಾಡಹಗಲೇ ಮನೆಗೆ ನುಗ್ಗಿ ದರೋಡೆ, ಓರ್ವ ಅರೆಸ್ಟ್

ಇವರೊಲ್ಲಬ್ಬ ಏಕಾಏಕಿ ಪ್ಯಾಂಟ್​ನ ಸೊಂಟದ ಪಟ್ಟಿಯ ಹೊಟ್ಟೆಯ ಬಳಿ ಸಿಕ್ಕಿಸಿಕೊಂಡಿದ್ದ ಪಿಸ್ತೂಲ್ ಅನ್ನು ತೆಗೆದು ಕಿರುಚಿಕೊಳ್ಳಬೇಡ ಎಂದು ಹೇಳುತ್ತಾ ವಿಷ್ಣು ಅವರನ್ನು ಹಿಡಿದುಕೊಳ್ಳಲು ಮುಂದಾದ. ಆಗ ವಿಷ್ಣು ಲಾಕ‌ರ್ ಇರುವ ಸೇವಿ ರೂಂನೊಳಗೆ ಹೋಗಿ ಬಾಗಿಲು ಹಾಕಿಕೊಂಡರು. 2-3 ನಿಮಿಷ ಏನೂ ಶಬ್ದ ಬರದ ಕಾರಣ ವಿಷ್ಣು ಹೊರಗೆ ಬಂದು ನೋಡಿದ್ದು, ನಾಲ್ವರು ಅಪರಿಚಿತರು ಇರಲಿಲ್ಲ. ಬಳಿಕ ಅಂಗಡಿಯಲ್ಲಿನ ವಸ್ತುಗಳನ್ನು ನೋಡಿದಾಗ, ಯಾವ ವಸ್ತುಗಳು ಕಳವಾಗಿರುವುದಿಲ್ಲ. ಬಳಿಕ ವಿಷ್ಣ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿದ್ದು, ನಾಲ್ವರನ್ನು ಪತ್ತೆ ಮಾಡಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ