AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊಟ್ಟಿಲಲ್ಲಿದ್ದ ಒಂದೂವರೆ ತಿಂಗಳ ಹಸುಗೂಸು ಸಿಂಟೆಕ್ಸ್​ನಲ್ಲಿ ಶವವಾಗಿ ಪತ್ತೆ

ಅದು ಏಳು ತಿಂಗಳಿಗೆ ಜನಿಸಿದ್ದ ಅವಧಿ ಪೂರ್ವ ಒಂದೂವರೆ ತಿಂಗಳ ಹಸುಗೂಸು. ಬರೋಬ್ಬರಿ ಒಂದು ತಿಂಗಳು ಜೀವನ್ಮರಣದ ಬಳಿಕ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿ ವಾರದ ಹಿಂದೆ ಮನೆಗೆ ಕರೆತರಲಾಗಿತ್ತು. ಆದ್ರೆ ನಿನ್ನೆ ಮಧ್ಯಾಹ್ನ ತೊಟ್ಟಿಲಲ್ಲಿದ್ದ ಮಗು ನಿಗೂಢವಾಗಿ ನಾಪತ್ತೆಯಾಗಿ ಮನೆ ಮೇಲಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಹತ್ತಿರದ ಸಂಬಂಧಿಕರಿಂದಲೇ ಕೊಲೆ ಶಂಕೆ ವ್ಯಕ್ತವಾಗಿದೆ. ಅಷ್ಟಕ್ಕೂ ಒಂದೂವರೆ ತಿಂಗಳ ಹಸುಗೂಸನ್ನು ಕೊಂದ ಅಮಾನವೀಯ ಘಟನೆ ನಡೆದಿದ್ದಾದರೂ ಎಲ್ಲಿ ಅಂತೀರಾ? ಈ ಸ್ಟೋರಿ ನೋಡಿ.

ತೊಟ್ಟಿಲಲ್ಲಿದ್ದ ಒಂದೂವರೆ ತಿಂಗಳ ಹಸುಗೂಸು ಸಿಂಟೆಕ್ಸ್​ನಲ್ಲಿ ಶವವಾಗಿ ಪತ್ತೆ
ರಾಮು, ಆನೇಕಲ್​
| Edited By: |

Updated on: Nov 05, 2024 | 8:00 PM

Share

ತೊಟ್ಟಿಲಲ್ಲಿ ಹಾಯಾಗಿ ಮಲಗಿದ್ದ ಮಗು ನಿಗೂಡವಾಗಿ ಕಾಣೆಯಾಗಿ ಅದೇ ಮನೆಯ ಮೇಲಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಇಗ್ಗಲೂರಿನಲ್ಲಿ ನಡೆದಿದೆ. ಹರ್ಷಿತಾ ಮತ್ತು ಮನು ದಂಪತಿಯ ಒಂದೂವರೆ ತಿಂಗಳಿನ ಕಂದಮ್ಮ ಅಮಾನವೀಯವಾಗಿ ಸಾವನ್ನಪ್ಪಿದ ಕಂದಮ್ಮ. ಒಂದೂವರೆ ವರ್ಷದ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ ಈ ದಂಪತಿಗೆ ಏಳು ತಿಂಗಳಿಗೆ ಅವಧಿ ಪೂರ್ವ ಮಗು ಜನನವಾಗಿತ್ತು. ಸಿಜೇರಿಯನ್ ಮೂಲಕ ಮಗು ಜನನ ಆಗಿದ್ದು, ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಒಂದು ತಿಂಗಳು ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಗುಣಮುಖವಾದ ಹಿನ್ನೆಲೆ ವಾರದ ಹಿಂದೆ ಮನೆಗೆ ಕರೆತರಲಾಗಿತ್ತು. ಮಹಾಲಕ್ಷ್ಮಿ ಮನೆಗೆ ಬಂದಿದ್ದರಿಂದ ಎರಡು ಕುಟುಂಬದವರು ಖುಷಿಯಾಗಿದ್ದರು. ಆದ್ರೆ, ನಿನ್ನೆ(ನವೆಂಬರ್ 04) ತೊಟ್ಟಿಲಲ್ಲಿದ್ದ ಮಗು ನಿಗೂಢವಾಗಿ ನಾಪತ್ತೆಯಾಗಿ ಮನೆ ಮೇಲಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಹತ್ತಿರದ ಸಂಬಂಧಿಕರಿಂದಲೇ ಕೊಲೆ ಶಂಕೆ ವ್ಯಕ್ತವಾಗಿದೆ.

ಇನ್ನೂ ಅಂತರ್ಜಾತಿ ವಿವಾಹ ಆದ್ದರಿಂದ ತಾಯಿ ಮತ್ತು ಮಗುವಿಗೆ ತವರು ಮನೆಯಲ್ಲೇ ಹಾರೈಕೆ ಮಾಡಲಾಗುತ್ತಿತ್ತು. ಪತಿ ಮನು ಮಾತ್ರ ಆಗಾಗ ಬಂದು ಹೋಗುತ್ತಿದ್ದ. ನಿನ್ನೆ ಸಹ ಮನೆಗೆ ಬಂದಿದ್ದ ಮನು ಮಗಳ ಜೊತೆ ಕೆಲಹೊತ್ತು ಆಟವಾಡಿ ಕೆಲಸಕ್ಕೆ ತೆರಳಿದ್ದಾನೆ. ಮಧ್ಯಾಹ್ನ 12:30 ರ ಸುಮಾರಿಗೆ ಕರೆ ಮಾಡಿದ ಪತ್ನಿ ಹರ್ಷಿತಾ ತಾನು ಶೌಚಾಲಯಕ್ಕೆ ಹೋಗಿ ಬರುವಷ್ಟರಲ್ಲಿ ತೊಟ್ಟಿಲಲ್ಲಿದ್ದ ಮಗು ಕಾಣುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾಳೆ. ಬಳಿಕ ಎರಡು ಕಡೆ ಕುಟುಂಬದವರು ಎಲ್ಲಾ ಕಡೆ ಹುಡುಕಾಡಿದರು ಮಗುವಿನ ಸುಳಿವಿಲ್ಲ. ಕೊನೆಗೆ ಆತಂಕಗೊಂಡು ಸೂರ್ಯನಗರ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರ ಪರಿಶೀಲನೆ ವೇಳೆ ಮನೆ ಮೇಲಿನ ನೀರಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಪತ್ತೆಯಾಗಿದೆ.

ತೊಟ್ಟಿಲಲ್ಲಿ ಬೆಚ್ಚಗೆ ಮಲಗಿದ್ದ ಮಗು ಸಿಂಟೆಕ್ಸ್ ಟ್ಯಾಂಕ್ ನಲ್ಲಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಈಗಾಗಲೇ ಬೆರಳಚ್ಚು, ಶ್ವಾನದಳ, ಸೋಕೋ ಟೀಮ್ ನಿಂದ ಸಾಕ್ಷ್ಯ ಕಲೆ ಹಾಕಿದೆ. ಮರಣೋತ್ತರ ಪರೀಕ್ಷೆ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ಬಂದ ಬಳಿಕ ಮಗುವಿನ ಸಾವಿನ ರಹಸ್ಯ ಜೊತೆ ಆರೋಪಿಗಳ ಸುಳಿವು ಸಿಗಲಿದೆ.

ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಮಗುವನ್ನು ಹಾಕುವ ಮುನ್ನ ಉಸಿರುಗಟ್ಟಿಸಿ ಕೊಂದಿರುವ ಸಾಧ್ಯತೆ ಇದ್ದು, ತೀರ ಹತ್ತಿರದ ಸಂಬಂಧಿಕರಿಂದಲೇ ಮಗು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ