AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ

ಕಾಣೆಯಾಗಿದ್ದ ಯುವತಿಯ ಮೃತದೇಹ ಮರುದಿನ ಬೆಂಗಳೂರಿನ ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​ನ ಮನೆ ಮುಂದೆ ಪತ್ತೆಯಾಗಿದ್ದ ಪ್ರಕಣರವನ್ನು ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಕೊಲೆ ಮಾಡಿ ಆರೋಪಿ ಮನೆ ಮುಂದೆ ಶವ ಇಟ್ಟು ಹೋಗಿದ್ದಾನೆ ಎಂಬುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Aug 12, 2023 | 8:23 AM

Share

ಬೆಂಗಳೂರು ಆ.12: ಕಾಣೆಯಾಗಿದ್ದ ಯುವತಿಯ ಮೃತದೇಹ (Dead Body) ಮರುದಿನ ಬೆಂಗಳೂರಿನ (Bengaluru) ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​ನ ಮನೆ ಮುಂದೆ ಪತ್ತೆಯಾಗಿದ್ದ ಪ್ರಕಣರವನ್ನು ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಕೊಲೆ ಮಾಡಿ ಆರೋಪಿ ಮನೆ ಮುಂದೆ ಶವ ಇಟ್ಟು ಹೋಗಿದ್ದಾನೆ ಎಂಬುವುದು ಪೊಲೀಸರ (Police) ತನಿಖೆಯಲ್ಲಿ ತಿಳಿದುಬಂದಿದೆ. ಕಲಬುರಗಿ ಮಹಾನಂದಾ (21) ಕೊಲೆಯಾದ ಯುವತಿ. ಕೊಲೆ ಆರೋಪಿ ಕೃಷ್ಣ ಚಂದ್​ ಸೇಟಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಮೂಲದ ಮಹಾನಂದಾ ಹಾಗೂ ಆಕೆಯ ಅಕ್ಕ ಇಬ್ಬರೂ ಶೆಲ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​​ನಲ್ಲಿ ವಾಸಿಸುತ್ತಿದ್ದರು. ಇವರ ಪಕ್ಕದ ಮನೆಯಲ್ಲಿ ಒಡಿಶಾ ಮೂಲದ ಕೃಷ್ಣ ಚಂದ ಸೇಟಿ ಎಂಬವನು ವಾಸವಿದ್ದಾನೆ. ಈತ ಟೆಕ್ ಪಾರ್ಕ್​​ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಮಹಾನಂದಾ ಆಗಸ್ಟ್​​ 10 ರಂದು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು.

ಹೀಗಾಗಿ ರಾತ್ರಿ ಊಟಕ್ಕೆಂದು ಸ್ಟೌ ಮೇಲೆ ಅನ್ನ ಮಾಡಲು ಪಾತ್ರೆ ಇಟ್ಟು ಮನೆಯಿಂದ ಹೊರಗೆ ಬಂದಿದ್ದಾರೆ. ಯುವತಿ ಪಕ್ಕದ ಮನೆಯ ಬಾಗಿಲ ಬಳಿ ಬಂದಾಗ ಆರೋಪಿ ಕೃಷ್ಣ ಚಂದ್​ ಸಾಟಿ ಮಹಾನಂದರನ್ನು ಮನೆಯೊಳಗೆ ಎಳೆದುಕೊಂಡು ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಯುವತಿಗೆ ಬಲವಂತವಾಗಿ ಮುತ್ತು ನೀಡಲು ಮುಂದಾಗಿದ್ದಾನೆ. ಈ ವೇಳೆ ಯುವತಿ ನಿರಾಕರಿಸಿ ಕಿರುಚಾಡಲು ಯತ್ನಿಸಿದ್ದಾರೆ.

ಇದನ್ನೂ ಓದಿ:ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು; ಬಂಧನ

ಈ ವೇಳೆ ಆರೋಪಿ ಕೃಷ್ಣ ಚಂದ್​ ಸಾಟಿ ಹಿಂಬದಿಯಿಂದ ಒಂದು ಕೈಯಿಂದ ಮಹಾನಂದರ ಮೂಗು ಬಾಯಿ ಮುಚ್ಚಿ ಮತ್ತೊಂದು ಕೈಯಿಂದ ಕುತ್ತಿಗೆ ಹಿಸುಕಿದ್ದಾನೆ. ಈ ವೇಳೆ ಕಿರುಚಾಡಲು ಸಾಧ್ಯವಾಗದೆ ಮಹಾನಂದ ಉಸಿರುಗಟ್ಟಿ ಸಾವನಪ್ಪಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿ ಕೃಷ್ಣ ಚಂದ್​ ಸಾಟಿ ಬೆಡ್ ಶೀಟ್​​ನಿಂದ ದೇಹವನ್ನು ಸುತ್ತಿ ಮೂಲೆಯೊಂದರಲ್ಲಿ ಇಟ್ಟಿದ್ದಾನೆ.

ನಂತರ ಬೆಳಗಿನ ಜಾವ 5:30 ರ ಸುಮಾರಿಗೆ ಮನೆಯೊಳಗಿದ್ದ ಶವವನ್ನು ಆರೋಪಿ ಕೃಷ್ಣ ಚಂದ್​ ಸಾಟಿ ಆಕೆಯ ಮನೆಯ ಮುಂದೆನೇ ಹಾಕಿದ್ದಾನೆ. ಸ್ವಲ್ಪ ಸಮಯದ ನಂತರ ಅಕ್ಕ-ಪಕ್ಕದ ಜನರು ಸೇರಿದ್ದಾರೆ. ಈ ವೇಳೆಯೂ ಆರೋಪಿ ಕೃಷ್ಣ ಚಂದ್​​ ಸಾಟಿ ತನಗೆ ಏನು ತಿಳಿಯದಂತೆ ಅಲ್ಲಯೇ ಇದ್ದನು. ಸದ್ಯ ಪೊಲೀಸರು ಆರೋಪಿ ಕೃಷ್ಣ ಚಂದ್​​ ಸಾಟಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಮಹದೇವಪುರ ಪೊಲೀಸ್​ ಠಾಣೆ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:23 am, Sat, 12 August 23

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು