AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ

ಕಾಣೆಯಾಗಿದ್ದ ಯುವತಿಯ ಮೃತದೇಹ ಮರುದಿನ ಬೆಂಗಳೂರಿನ ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​ನ ಮನೆ ಮುಂದೆ ಪತ್ತೆಯಾಗಿದ್ದ ಪ್ರಕಣರವನ್ನು ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಕೊಲೆ ಮಾಡಿ ಆರೋಪಿ ಮನೆ ಮುಂದೆ ಶವ ಇಟ್ಟು ಹೋಗಿದ್ದಾನೆ ಎಂಬುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 12, 2023 | 8:23 AM

Share

ಬೆಂಗಳೂರು ಆ.12: ಕಾಣೆಯಾಗಿದ್ದ ಯುವತಿಯ ಮೃತದೇಹ (Dead Body) ಮರುದಿನ ಬೆಂಗಳೂರಿನ (Bengaluru) ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​ನ ಮನೆ ಮುಂದೆ ಪತ್ತೆಯಾಗಿದ್ದ ಪ್ರಕಣರವನ್ನು ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಕೊಲೆ ಮಾಡಿ ಆರೋಪಿ ಮನೆ ಮುಂದೆ ಶವ ಇಟ್ಟು ಹೋಗಿದ್ದಾನೆ ಎಂಬುವುದು ಪೊಲೀಸರ (Police) ತನಿಖೆಯಲ್ಲಿ ತಿಳಿದುಬಂದಿದೆ. ಕಲಬುರಗಿ ಮಹಾನಂದಾ (21) ಕೊಲೆಯಾದ ಯುವತಿ. ಕೊಲೆ ಆರೋಪಿ ಕೃಷ್ಣ ಚಂದ್​ ಸೇಟಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಮೂಲದ ಮಹಾನಂದಾ ಹಾಗೂ ಆಕೆಯ ಅಕ್ಕ ಇಬ್ಬರೂ ಶೆಲ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​​ನಲ್ಲಿ ವಾಸಿಸುತ್ತಿದ್ದರು. ಇವರ ಪಕ್ಕದ ಮನೆಯಲ್ಲಿ ಒಡಿಶಾ ಮೂಲದ ಕೃಷ್ಣ ಚಂದ ಸೇಟಿ ಎಂಬವನು ವಾಸವಿದ್ದಾನೆ. ಈತ ಟೆಕ್ ಪಾರ್ಕ್​​ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಮಹಾನಂದಾ ಆಗಸ್ಟ್​​ 10 ರಂದು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು.

ಹೀಗಾಗಿ ರಾತ್ರಿ ಊಟಕ್ಕೆಂದು ಸ್ಟೌ ಮೇಲೆ ಅನ್ನ ಮಾಡಲು ಪಾತ್ರೆ ಇಟ್ಟು ಮನೆಯಿಂದ ಹೊರಗೆ ಬಂದಿದ್ದಾರೆ. ಯುವತಿ ಪಕ್ಕದ ಮನೆಯ ಬಾಗಿಲ ಬಳಿ ಬಂದಾಗ ಆರೋಪಿ ಕೃಷ್ಣ ಚಂದ್​ ಸಾಟಿ ಮಹಾನಂದರನ್ನು ಮನೆಯೊಳಗೆ ಎಳೆದುಕೊಂಡು ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಯುವತಿಗೆ ಬಲವಂತವಾಗಿ ಮುತ್ತು ನೀಡಲು ಮುಂದಾಗಿದ್ದಾನೆ. ಈ ವೇಳೆ ಯುವತಿ ನಿರಾಕರಿಸಿ ಕಿರುಚಾಡಲು ಯತ್ನಿಸಿದ್ದಾರೆ.

ಇದನ್ನೂ ಓದಿ:ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು; ಬಂಧನ

ಈ ವೇಳೆ ಆರೋಪಿ ಕೃಷ್ಣ ಚಂದ್​ ಸಾಟಿ ಹಿಂಬದಿಯಿಂದ ಒಂದು ಕೈಯಿಂದ ಮಹಾನಂದರ ಮೂಗು ಬಾಯಿ ಮುಚ್ಚಿ ಮತ್ತೊಂದು ಕೈಯಿಂದ ಕುತ್ತಿಗೆ ಹಿಸುಕಿದ್ದಾನೆ. ಈ ವೇಳೆ ಕಿರುಚಾಡಲು ಸಾಧ್ಯವಾಗದೆ ಮಹಾನಂದ ಉಸಿರುಗಟ್ಟಿ ಸಾವನಪ್ಪಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿ ಕೃಷ್ಣ ಚಂದ್​ ಸಾಟಿ ಬೆಡ್ ಶೀಟ್​​ನಿಂದ ದೇಹವನ್ನು ಸುತ್ತಿ ಮೂಲೆಯೊಂದರಲ್ಲಿ ಇಟ್ಟಿದ್ದಾನೆ.

ನಂತರ ಬೆಳಗಿನ ಜಾವ 5:30 ರ ಸುಮಾರಿಗೆ ಮನೆಯೊಳಗಿದ್ದ ಶವವನ್ನು ಆರೋಪಿ ಕೃಷ್ಣ ಚಂದ್​ ಸಾಟಿ ಆಕೆಯ ಮನೆಯ ಮುಂದೆನೇ ಹಾಕಿದ್ದಾನೆ. ಸ್ವಲ್ಪ ಸಮಯದ ನಂತರ ಅಕ್ಕ-ಪಕ್ಕದ ಜನರು ಸೇರಿದ್ದಾರೆ. ಈ ವೇಳೆಯೂ ಆರೋಪಿ ಕೃಷ್ಣ ಚಂದ್​​ ಸಾಟಿ ತನಗೆ ಏನು ತಿಳಿಯದಂತೆ ಅಲ್ಲಯೇ ಇದ್ದನು. ಸದ್ಯ ಪೊಲೀಸರು ಆರೋಪಿ ಕೃಷ್ಣ ಚಂದ್​​ ಸಾಟಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಮಹದೇವಪುರ ಪೊಲೀಸ್​ ಠಾಣೆ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:23 am, Sat, 12 August 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?