ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ

ಕಾಣೆಯಾಗಿದ್ದ ಯುವತಿಯ ಮೃತದೇಹ ಮರುದಿನ ಬೆಂಗಳೂರಿನ ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​ನ ಮನೆ ಮುಂದೆ ಪತ್ತೆಯಾಗಿದ್ದ ಪ್ರಕಣರವನ್ನು ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಕೊಲೆ ಮಾಡಿ ಆರೋಪಿ ಮನೆ ಮುಂದೆ ಶವ ಇಟ್ಟು ಹೋಗಿದ್ದಾನೆ ಎಂಬುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on:Aug 12, 2023 | 8:23 AM

ಬೆಂಗಳೂರು ಆ.12: ಕಾಣೆಯಾಗಿದ್ದ ಯುವತಿಯ ಮೃತದೇಹ (Dead Body) ಮರುದಿನ ಬೆಂಗಳೂರಿನ (Bengaluru) ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​ನ ಮನೆ ಮುಂದೆ ಪತ್ತೆಯಾಗಿದ್ದ ಪ್ರಕಣರವನ್ನು ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಕೊಲೆ ಮಾಡಿ ಆರೋಪಿ ಮನೆ ಮುಂದೆ ಶವ ಇಟ್ಟು ಹೋಗಿದ್ದಾನೆ ಎಂಬುವುದು ಪೊಲೀಸರ (Police) ತನಿಖೆಯಲ್ಲಿ ತಿಳಿದುಬಂದಿದೆ. ಕಲಬುರಗಿ ಮಹಾನಂದಾ (21) ಕೊಲೆಯಾದ ಯುವತಿ. ಕೊಲೆ ಆರೋಪಿ ಕೃಷ್ಣ ಚಂದ್​ ಸೇಟಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಮೂಲದ ಮಹಾನಂದಾ ಹಾಗೂ ಆಕೆಯ ಅಕ್ಕ ಇಬ್ಬರೂ ಶೆಲ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​​ನಲ್ಲಿ ವಾಸಿಸುತ್ತಿದ್ದರು. ಇವರ ಪಕ್ಕದ ಮನೆಯಲ್ಲಿ ಒಡಿಶಾ ಮೂಲದ ಕೃಷ್ಣ ಚಂದ ಸೇಟಿ ಎಂಬವನು ವಾಸವಿದ್ದಾನೆ. ಈತ ಟೆಕ್ ಪಾರ್ಕ್​​ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಮಹಾನಂದಾ ಆಗಸ್ಟ್​​ 10 ರಂದು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು.

ಹೀಗಾಗಿ ರಾತ್ರಿ ಊಟಕ್ಕೆಂದು ಸ್ಟೌ ಮೇಲೆ ಅನ್ನ ಮಾಡಲು ಪಾತ್ರೆ ಇಟ್ಟು ಮನೆಯಿಂದ ಹೊರಗೆ ಬಂದಿದ್ದಾರೆ. ಯುವತಿ ಪಕ್ಕದ ಮನೆಯ ಬಾಗಿಲ ಬಳಿ ಬಂದಾಗ ಆರೋಪಿ ಕೃಷ್ಣ ಚಂದ್​ ಸಾಟಿ ಮಹಾನಂದರನ್ನು ಮನೆಯೊಳಗೆ ಎಳೆದುಕೊಂಡು ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಯುವತಿಗೆ ಬಲವಂತವಾಗಿ ಮುತ್ತು ನೀಡಲು ಮುಂದಾಗಿದ್ದಾನೆ. ಈ ವೇಳೆ ಯುವತಿ ನಿರಾಕರಿಸಿ ಕಿರುಚಾಡಲು ಯತ್ನಿಸಿದ್ದಾರೆ.

ಇದನ್ನೂ ಓದಿ:ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು; ಬಂಧನ

ಈ ವೇಳೆ ಆರೋಪಿ ಕೃಷ್ಣ ಚಂದ್​ ಸಾಟಿ ಹಿಂಬದಿಯಿಂದ ಒಂದು ಕೈಯಿಂದ ಮಹಾನಂದರ ಮೂಗು ಬಾಯಿ ಮುಚ್ಚಿ ಮತ್ತೊಂದು ಕೈಯಿಂದ ಕುತ್ತಿಗೆ ಹಿಸುಕಿದ್ದಾನೆ. ಈ ವೇಳೆ ಕಿರುಚಾಡಲು ಸಾಧ್ಯವಾಗದೆ ಮಹಾನಂದ ಉಸಿರುಗಟ್ಟಿ ಸಾವನಪ್ಪಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿ ಕೃಷ್ಣ ಚಂದ್​ ಸಾಟಿ ಬೆಡ್ ಶೀಟ್​​ನಿಂದ ದೇಹವನ್ನು ಸುತ್ತಿ ಮೂಲೆಯೊಂದರಲ್ಲಿ ಇಟ್ಟಿದ್ದಾನೆ.

ನಂತರ ಬೆಳಗಿನ ಜಾವ 5:30 ರ ಸುಮಾರಿಗೆ ಮನೆಯೊಳಗಿದ್ದ ಶವವನ್ನು ಆರೋಪಿ ಕೃಷ್ಣ ಚಂದ್​ ಸಾಟಿ ಆಕೆಯ ಮನೆಯ ಮುಂದೆನೇ ಹಾಕಿದ್ದಾನೆ. ಸ್ವಲ್ಪ ಸಮಯದ ನಂತರ ಅಕ್ಕ-ಪಕ್ಕದ ಜನರು ಸೇರಿದ್ದಾರೆ. ಈ ವೇಳೆಯೂ ಆರೋಪಿ ಕೃಷ್ಣ ಚಂದ್​​ ಸಾಟಿ ತನಗೆ ಏನು ತಿಳಿಯದಂತೆ ಅಲ್ಲಯೇ ಇದ್ದನು. ಸದ್ಯ ಪೊಲೀಸರು ಆರೋಪಿ ಕೃಷ್ಣ ಚಂದ್​​ ಸಾಟಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಮಹದೇವಪುರ ಪೊಲೀಸ್​ ಠಾಣೆ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:23 am, Sat, 12 August 23

ತಾಜಾ ಸುದ್ದಿ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ