AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ

ಕಾಣೆಯಾಗಿದ್ದ ಯುವತಿಯ ಮೃತದೇಹ ಮರುದಿನ ಬೆಂಗಳೂರಿನ ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​ನ ಮನೆ ಮುಂದೆ ಪತ್ತೆಯಾಗಿದ್ದ ಪ್ರಕಣರವನ್ನು ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಕೊಲೆ ಮಾಡಿ ಆರೋಪಿ ಮನೆ ಮುಂದೆ ಶವ ಇಟ್ಟು ಹೋಗಿದ್ದಾನೆ ಎಂಬುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Aug 12, 2023 | 8:23 AM

Share

ಬೆಂಗಳೂರು ಆ.12: ಕಾಣೆಯಾಗಿದ್ದ ಯುವತಿಯ ಮೃತದೇಹ (Dead Body) ಮರುದಿನ ಬೆಂಗಳೂರಿನ (Bengaluru) ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​ನ ಮನೆ ಮುಂದೆ ಪತ್ತೆಯಾಗಿದ್ದ ಪ್ರಕಣರವನ್ನು ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಕೊಲೆ ಮಾಡಿ ಆರೋಪಿ ಮನೆ ಮುಂದೆ ಶವ ಇಟ್ಟು ಹೋಗಿದ್ದಾನೆ ಎಂಬುವುದು ಪೊಲೀಸರ (Police) ತನಿಖೆಯಲ್ಲಿ ತಿಳಿದುಬಂದಿದೆ. ಕಲಬುರಗಿ ಮಹಾನಂದಾ (21) ಕೊಲೆಯಾದ ಯುವತಿ. ಕೊಲೆ ಆರೋಪಿ ಕೃಷ್ಣ ಚಂದ್​ ಸೇಟಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಮೂಲದ ಮಹಾನಂದಾ ಹಾಗೂ ಆಕೆಯ ಅಕ್ಕ ಇಬ್ಬರೂ ಶೆಲ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​​ನಲ್ಲಿ ವಾಸಿಸುತ್ತಿದ್ದರು. ಇವರ ಪಕ್ಕದ ಮನೆಯಲ್ಲಿ ಒಡಿಶಾ ಮೂಲದ ಕೃಷ್ಣ ಚಂದ ಸೇಟಿ ಎಂಬವನು ವಾಸವಿದ್ದಾನೆ. ಈತ ಟೆಕ್ ಪಾರ್ಕ್​​ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಮಹಾನಂದಾ ಆಗಸ್ಟ್​​ 10 ರಂದು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು.

ಹೀಗಾಗಿ ರಾತ್ರಿ ಊಟಕ್ಕೆಂದು ಸ್ಟೌ ಮೇಲೆ ಅನ್ನ ಮಾಡಲು ಪಾತ್ರೆ ಇಟ್ಟು ಮನೆಯಿಂದ ಹೊರಗೆ ಬಂದಿದ್ದಾರೆ. ಯುವತಿ ಪಕ್ಕದ ಮನೆಯ ಬಾಗಿಲ ಬಳಿ ಬಂದಾಗ ಆರೋಪಿ ಕೃಷ್ಣ ಚಂದ್​ ಸಾಟಿ ಮಹಾನಂದರನ್ನು ಮನೆಯೊಳಗೆ ಎಳೆದುಕೊಂಡು ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಯುವತಿಗೆ ಬಲವಂತವಾಗಿ ಮುತ್ತು ನೀಡಲು ಮುಂದಾಗಿದ್ದಾನೆ. ಈ ವೇಳೆ ಯುವತಿ ನಿರಾಕರಿಸಿ ಕಿರುಚಾಡಲು ಯತ್ನಿಸಿದ್ದಾರೆ.

ಇದನ್ನೂ ಓದಿ:ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು; ಬಂಧನ

ಈ ವೇಳೆ ಆರೋಪಿ ಕೃಷ್ಣ ಚಂದ್​ ಸಾಟಿ ಹಿಂಬದಿಯಿಂದ ಒಂದು ಕೈಯಿಂದ ಮಹಾನಂದರ ಮೂಗು ಬಾಯಿ ಮುಚ್ಚಿ ಮತ್ತೊಂದು ಕೈಯಿಂದ ಕುತ್ತಿಗೆ ಹಿಸುಕಿದ್ದಾನೆ. ಈ ವೇಳೆ ಕಿರುಚಾಡಲು ಸಾಧ್ಯವಾಗದೆ ಮಹಾನಂದ ಉಸಿರುಗಟ್ಟಿ ಸಾವನಪ್ಪಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿ ಕೃಷ್ಣ ಚಂದ್​ ಸಾಟಿ ಬೆಡ್ ಶೀಟ್​​ನಿಂದ ದೇಹವನ್ನು ಸುತ್ತಿ ಮೂಲೆಯೊಂದರಲ್ಲಿ ಇಟ್ಟಿದ್ದಾನೆ.

ನಂತರ ಬೆಳಗಿನ ಜಾವ 5:30 ರ ಸುಮಾರಿಗೆ ಮನೆಯೊಳಗಿದ್ದ ಶವವನ್ನು ಆರೋಪಿ ಕೃಷ್ಣ ಚಂದ್​ ಸಾಟಿ ಆಕೆಯ ಮನೆಯ ಮುಂದೆನೇ ಹಾಕಿದ್ದಾನೆ. ಸ್ವಲ್ಪ ಸಮಯದ ನಂತರ ಅಕ್ಕ-ಪಕ್ಕದ ಜನರು ಸೇರಿದ್ದಾರೆ. ಈ ವೇಳೆಯೂ ಆರೋಪಿ ಕೃಷ್ಣ ಚಂದ್​​ ಸಾಟಿ ತನಗೆ ಏನು ತಿಳಿಯದಂತೆ ಅಲ್ಲಯೇ ಇದ್ದನು. ಸದ್ಯ ಪೊಲೀಸರು ಆರೋಪಿ ಕೃಷ್ಣ ಚಂದ್​​ ಸಾಟಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಮಹದೇವಪುರ ಪೊಲೀಸ್​ ಠಾಣೆ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:23 am, Sat, 12 August 23

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್