ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ

| Updated By: ವಿವೇಕ ಬಿರಾದಾರ

Updated on: Aug 12, 2023 | 8:23 AM

ಕಾಣೆಯಾಗಿದ್ದ ಯುವತಿಯ ಮೃತದೇಹ ಮರುದಿನ ಬೆಂಗಳೂರಿನ ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​ನ ಮನೆ ಮುಂದೆ ಪತ್ತೆಯಾಗಿದ್ದ ಪ್ರಕಣರವನ್ನು ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಕೊಲೆ ಮಾಡಿ ಆರೋಪಿ ಮನೆ ಮುಂದೆ ಶವ ಇಟ್ಟು ಹೋಗಿದ್ದಾನೆ ಎಂಬುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು ಆ.12: ಕಾಣೆಯಾಗಿದ್ದ ಯುವತಿಯ ಮೃತದೇಹ (Dead Body) ಮರುದಿನ ಬೆಂಗಳೂರಿನ (Bengaluru) ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​ನ ಮನೆ ಮುಂದೆ ಪತ್ತೆಯಾಗಿದ್ದ ಪ್ರಕಣರವನ್ನು ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಕೊಲೆ ಮಾಡಿ ಆರೋಪಿ ಮನೆ ಮುಂದೆ ಶವ ಇಟ್ಟು ಹೋಗಿದ್ದಾನೆ ಎಂಬುವುದು ಪೊಲೀಸರ (Police) ತನಿಖೆಯಲ್ಲಿ ತಿಳಿದುಬಂದಿದೆ. ಕಲಬುರಗಿ ಮಹಾನಂದಾ (21) ಕೊಲೆಯಾದ ಯುವತಿ. ಕೊಲೆ ಆರೋಪಿ ಕೃಷ್ಣ ಚಂದ್​ ಸೇಟಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಮೂಲದ ಮಹಾನಂದಾ ಹಾಗೂ ಆಕೆಯ ಅಕ್ಕ ಇಬ್ಬರೂ ಶೆಲ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​​ನಲ್ಲಿ ವಾಸಿಸುತ್ತಿದ್ದರು. ಇವರ ಪಕ್ಕದ ಮನೆಯಲ್ಲಿ ಒಡಿಶಾ ಮೂಲದ ಕೃಷ್ಣ ಚಂದ ಸೇಟಿ ಎಂಬವನು ವಾಸವಿದ್ದಾನೆ. ಈತ ಟೆಕ್ ಪಾರ್ಕ್​​ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಮಹಾನಂದಾ ಆಗಸ್ಟ್​​ 10 ರಂದು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು.

ಹೀಗಾಗಿ ರಾತ್ರಿ ಊಟಕ್ಕೆಂದು ಸ್ಟೌ ಮೇಲೆ ಅನ್ನ ಮಾಡಲು ಪಾತ್ರೆ ಇಟ್ಟು ಮನೆಯಿಂದ ಹೊರಗೆ ಬಂದಿದ್ದಾರೆ. ಯುವತಿ ಪಕ್ಕದ ಮನೆಯ ಬಾಗಿಲ ಬಳಿ ಬಂದಾಗ ಆರೋಪಿ ಕೃಷ್ಣ ಚಂದ್​ ಸಾಟಿ ಮಹಾನಂದರನ್ನು ಮನೆಯೊಳಗೆ ಎಳೆದುಕೊಂಡು ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಯುವತಿಗೆ ಬಲವಂತವಾಗಿ ಮುತ್ತು ನೀಡಲು ಮುಂದಾಗಿದ್ದಾನೆ. ಈ ವೇಳೆ ಯುವತಿ ನಿರಾಕರಿಸಿ ಕಿರುಚಾಡಲು ಯತ್ನಿಸಿದ್ದಾರೆ.

ಇದನ್ನೂ ಓದಿ:ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು; ಬಂಧನ

ಈ ವೇಳೆ ಆರೋಪಿ ಕೃಷ್ಣ ಚಂದ್​ ಸಾಟಿ ಹಿಂಬದಿಯಿಂದ ಒಂದು ಕೈಯಿಂದ ಮಹಾನಂದರ ಮೂಗು ಬಾಯಿ ಮುಚ್ಚಿ ಮತ್ತೊಂದು ಕೈಯಿಂದ ಕುತ್ತಿಗೆ ಹಿಸುಕಿದ್ದಾನೆ. ಈ ವೇಳೆ ಕಿರುಚಾಡಲು ಸಾಧ್ಯವಾಗದೆ ಮಹಾನಂದ ಉಸಿರುಗಟ್ಟಿ ಸಾವನಪ್ಪಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿ ಕೃಷ್ಣ ಚಂದ್​ ಸಾಟಿ ಬೆಡ್ ಶೀಟ್​​ನಿಂದ ದೇಹವನ್ನು ಸುತ್ತಿ ಮೂಲೆಯೊಂದರಲ್ಲಿ ಇಟ್ಟಿದ್ದಾನೆ.

ನಂತರ ಬೆಳಗಿನ ಜಾವ 5:30 ರ ಸುಮಾರಿಗೆ ಮನೆಯೊಳಗಿದ್ದ ಶವವನ್ನು ಆರೋಪಿ ಕೃಷ್ಣ ಚಂದ್​ ಸಾಟಿ ಆಕೆಯ ಮನೆಯ ಮುಂದೆನೇ ಹಾಕಿದ್ದಾನೆ. ಸ್ವಲ್ಪ ಸಮಯದ ನಂತರ ಅಕ್ಕ-ಪಕ್ಕದ ಜನರು ಸೇರಿದ್ದಾರೆ. ಈ ವೇಳೆಯೂ ಆರೋಪಿ ಕೃಷ್ಣ ಚಂದ್​​ ಸಾಟಿ ತನಗೆ ಏನು ತಿಳಿಯದಂತೆ ಅಲ್ಲಯೇ ಇದ್ದನು. ಸದ್ಯ ಪೊಲೀಸರು ಆರೋಪಿ ಕೃಷ್ಣ ಚಂದ್​​ ಸಾಟಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಮಹದೇವಪುರ ಪೊಲೀಸ್​ ಠಾಣೆ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:23 am, Sat, 12 August 23