AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಮೇಲೆ ಹಲ್ಲೆ ಮಾಡಿದ್ದೇವೆ ಎಂದು ತಪ್ಪೊಪ್ಪಿಕೊಂಡ MLC ನಾಸಿರ್ ಅಹ್ಮದ್ ಪುತ್ರ

ಪೊಲೀಸರು ಮತ್ತು ಯುವಕರ ನಡುವೆ ಮಾತಿನ ಚಕಮಕಿ ಬೆಳೆದಿದೆ. ಆರೋಪಿಗಳು ಪೊಲೀಸರ ಜೊತೆ ಜಗಳವಾಡಿ ಹಲ್ಲೆ ಮಾಡಿದ್ದಾರೆ. ಘಟನೆ ಹಿಂದಿನ ಸಂಪೂರ್ಣ ವಿವರ ಟಿವಿ9ಗೆ ಲಭ್ಯವಾಗಿದೆ.

ಪೊಲೀಸರ ಮೇಲೆ ಹಲ್ಲೆ ಮಾಡಿದ್ದೇವೆ ಎಂದು ತಪ್ಪೊಪ್ಪಿಕೊಂಡ MLC ನಾಸಿರ್ ಅಹ್ಮದ್ ಪುತ್ರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 07, 2022 | 5:32 PM

Share

ಬೆಂಗಳೂರು: MLC ನಾಸಿರ್ ಅಹ್ಮದ್ ಪುತ್ರ ಹಾಗೂ ಗ್ಯಾಂಗ್‌ನಿಂದ ನಡೆದ ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ವಿಚಾರಣೆ ವೇಳೆ ಆರೋಪಿಗಳಾದ ಫಯಾಜ್ ಅಹ್ಮದ್, ಇಮ್ರಾನ್ ಷರೀಫ್, ಜೇನ್ ಷರೀಫ್‌ ತಪ್ಪೊಪ್ಪಿಗೆ ಮಾಡಿಕೊಂಡಿದ್ದಾರೆ. ಪೊಲೀಸರ ವಿರುದ್ಧ ನಾವೇ ಜಗಳ ಮಾಡಿ ಹಲ್ಲೆ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಪೊಲೀಸರ ಮೇಲಿನ ಹಲ್ಲೆ ಪ್ರಕರಣದಲ್ಲಿಆರು ಮಂದಿ ಆರೋಪಿಗಳಿದ್ದಾರೆ. ಅವರಲ್ಲಿ ಮೂವರು ಈಗ ಪೊಲೀಸ್ ವಶದಲ್ಲಿದ್ದಾರೆ. ಉಳಿದ ಮೂರು ಆರೋಪಿಗಳು ಮೊಬೈಲ್ ಆಫ್ ಮಾಡಿಕೊಂಡು ಪರಾರಿಯಾಗಿದ್ದು, ಅಮೃತಹಳ್ಳಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.

MLC ನಾಸಿರ್ ಅಹ್ಮದ್ ಪುತ್ರ ಫಯಾಜ್ ಅಹಮದ್ ಹಾಗೂ ಇನ್ನಿಬ್ಬರು ಈಗಾಗಲೇ ಅರೆಸ್ಟ್ ಅಗಿದ್ದಾರೆ. ನಾಸಿರ್ ಅಹ್ಮದ್ ಮತ್ತೋರ್ವ ಮಗನಿಗಾಗಿಯೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಘಟನೆ ಹಿಂದಿನ ಸಂಪೂರ್ಣ ವಿವರ ಟಿವಿ9 ಗೆ ಲಭ್ಯವಾಗಿದೆ. ಅಂದು ರಾತ್ರಿ ಎಂಜಿ ರೋಡ್ ಹಾಗು ಬ್ರಿಗೇಡ್ ರೋಡ್​ಗೆ ಬಂದಿದ್ದ ಫಯಾಜ್ ಅಹಮದ್ ಮತ್ತು ತಂಡ, ಬ್ರಿಗೇಡ್ ರೋಡ್ ರಸ್ತೆ ಬಳಿಯ ಪಬ್ ಒಂದರಲ್ಲಿ ಭರ್ಜರಿ ಪಾರ್ಟಿ ಮಾಡಿದ್ದರು. ಪಾರ್ಟಿ ಬಳಿಕ ಅಮೃತಹಳ್ಳಿ ಕಡೆಗೆ ತೆರಳಿದ್ದರು. ರಸ್ತೆ ಬದಿಯಲ್ಲಿ ಸಿಗರೇಟ್ ಸೇದುತ್ತಾ ಜೋರಾಗಿ ಕೂಗಾಡುತಿದ್ದರು. ಈ ವೇಳೆ ಗಲಾಟೆ ಮಾಡದೆ ಮನೆಗೆ ಹೋಗುವಂತೆ ಅಮೃತಹಳ್ಳಿ ಪೊಲೀಸರು ತಿಳಿಸಿದ್ದರು.

ಒಂದು ಬಾರಿ ತಿಳಿಹೇಳಿದ ನಂತರವೂ ಮತ್ತೆ ಎರಡನೇ ಬಾರಿ ಫಯಾಜ್ ಅಹಮದ್ ತಂಡ ಪೊಲೀಸರಿಗೆ ಸಿಕ್ಕಿಬಿದ್ದಿದೆ. ಅವರಿಗೆ ವಾರ್ನ್ ಮಾಡಲು ಪೊಲೀಸರು ತೆರಳಿದ್ದರು. ಆಗ, ನಾನು ಯಾರು ಗೊತ್ತಾ? ನಿಮ್ಮನ್ನು ಟ್ರಾನ್ಸ್​ಫರ್ ಮಾಡಿಸುತ್ತೇನೆ ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು. ಅಷ್ಟೇ ಅಲ್ಲದೆ, ಪೊಲೀಸರಿಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದರು.

ಮದ್ಯ ಸೇವಿಸಿ ಕಾರು ಚಾಲನೆ ಪ್ರಶ್ನಿಸಿದ್ದಕ್ಕೆ MLC ಪುತ್ರ, ಸ್ನೇಹಿತರಿಂದ ಪೊಲೀಸರ ಮೇಲೆ ಹಲ್ಲೆ..

Published On - 3:00 pm, Wed, 9 December 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ