AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಮೇಲೆ ಹಲ್ಲೆ ಮಾಡಿದ್ದೇವೆ ಎಂದು ತಪ್ಪೊಪ್ಪಿಕೊಂಡ MLC ನಾಸಿರ್ ಅಹ್ಮದ್ ಪುತ್ರ

ಪೊಲೀಸರು ಮತ್ತು ಯುವಕರ ನಡುವೆ ಮಾತಿನ ಚಕಮಕಿ ಬೆಳೆದಿದೆ. ಆರೋಪಿಗಳು ಪೊಲೀಸರ ಜೊತೆ ಜಗಳವಾಡಿ ಹಲ್ಲೆ ಮಾಡಿದ್ದಾರೆ. ಘಟನೆ ಹಿಂದಿನ ಸಂಪೂರ್ಣ ವಿವರ ಟಿವಿ9ಗೆ ಲಭ್ಯವಾಗಿದೆ.

ಪೊಲೀಸರ ಮೇಲೆ ಹಲ್ಲೆ ಮಾಡಿದ್ದೇವೆ ಎಂದು ತಪ್ಪೊಪ್ಪಿಕೊಂಡ MLC ನಾಸಿರ್ ಅಹ್ಮದ್ ಪುತ್ರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 07, 2022 | 5:32 PM

Share

ಬೆಂಗಳೂರು: MLC ನಾಸಿರ್ ಅಹ್ಮದ್ ಪುತ್ರ ಹಾಗೂ ಗ್ಯಾಂಗ್‌ನಿಂದ ನಡೆದ ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ವಿಚಾರಣೆ ವೇಳೆ ಆರೋಪಿಗಳಾದ ಫಯಾಜ್ ಅಹ್ಮದ್, ಇಮ್ರಾನ್ ಷರೀಫ್, ಜೇನ್ ಷರೀಫ್‌ ತಪ್ಪೊಪ್ಪಿಗೆ ಮಾಡಿಕೊಂಡಿದ್ದಾರೆ. ಪೊಲೀಸರ ವಿರುದ್ಧ ನಾವೇ ಜಗಳ ಮಾಡಿ ಹಲ್ಲೆ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಪೊಲೀಸರ ಮೇಲಿನ ಹಲ್ಲೆ ಪ್ರಕರಣದಲ್ಲಿಆರು ಮಂದಿ ಆರೋಪಿಗಳಿದ್ದಾರೆ. ಅವರಲ್ಲಿ ಮೂವರು ಈಗ ಪೊಲೀಸ್ ವಶದಲ್ಲಿದ್ದಾರೆ. ಉಳಿದ ಮೂರು ಆರೋಪಿಗಳು ಮೊಬೈಲ್ ಆಫ್ ಮಾಡಿಕೊಂಡು ಪರಾರಿಯಾಗಿದ್ದು, ಅಮೃತಹಳ್ಳಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.

MLC ನಾಸಿರ್ ಅಹ್ಮದ್ ಪುತ್ರ ಫಯಾಜ್ ಅಹಮದ್ ಹಾಗೂ ಇನ್ನಿಬ್ಬರು ಈಗಾಗಲೇ ಅರೆಸ್ಟ್ ಅಗಿದ್ದಾರೆ. ನಾಸಿರ್ ಅಹ್ಮದ್ ಮತ್ತೋರ್ವ ಮಗನಿಗಾಗಿಯೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಘಟನೆ ಹಿಂದಿನ ಸಂಪೂರ್ಣ ವಿವರ ಟಿವಿ9 ಗೆ ಲಭ್ಯವಾಗಿದೆ. ಅಂದು ರಾತ್ರಿ ಎಂಜಿ ರೋಡ್ ಹಾಗು ಬ್ರಿಗೇಡ್ ರೋಡ್​ಗೆ ಬಂದಿದ್ದ ಫಯಾಜ್ ಅಹಮದ್ ಮತ್ತು ತಂಡ, ಬ್ರಿಗೇಡ್ ರೋಡ್ ರಸ್ತೆ ಬಳಿಯ ಪಬ್ ಒಂದರಲ್ಲಿ ಭರ್ಜರಿ ಪಾರ್ಟಿ ಮಾಡಿದ್ದರು. ಪಾರ್ಟಿ ಬಳಿಕ ಅಮೃತಹಳ್ಳಿ ಕಡೆಗೆ ತೆರಳಿದ್ದರು. ರಸ್ತೆ ಬದಿಯಲ್ಲಿ ಸಿಗರೇಟ್ ಸೇದುತ್ತಾ ಜೋರಾಗಿ ಕೂಗಾಡುತಿದ್ದರು. ಈ ವೇಳೆ ಗಲಾಟೆ ಮಾಡದೆ ಮನೆಗೆ ಹೋಗುವಂತೆ ಅಮೃತಹಳ್ಳಿ ಪೊಲೀಸರು ತಿಳಿಸಿದ್ದರು.

ಒಂದು ಬಾರಿ ತಿಳಿಹೇಳಿದ ನಂತರವೂ ಮತ್ತೆ ಎರಡನೇ ಬಾರಿ ಫಯಾಜ್ ಅಹಮದ್ ತಂಡ ಪೊಲೀಸರಿಗೆ ಸಿಕ್ಕಿಬಿದ್ದಿದೆ. ಅವರಿಗೆ ವಾರ್ನ್ ಮಾಡಲು ಪೊಲೀಸರು ತೆರಳಿದ್ದರು. ಆಗ, ನಾನು ಯಾರು ಗೊತ್ತಾ? ನಿಮ್ಮನ್ನು ಟ್ರಾನ್ಸ್​ಫರ್ ಮಾಡಿಸುತ್ತೇನೆ ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು. ಅಷ್ಟೇ ಅಲ್ಲದೆ, ಪೊಲೀಸರಿಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದರು.

ಮದ್ಯ ಸೇವಿಸಿ ಕಾರು ಚಾಲನೆ ಪ್ರಶ್ನಿಸಿದ್ದಕ್ಕೆ MLC ಪುತ್ರ, ಸ್ನೇಹಿತರಿಂದ ಪೊಲೀಸರ ಮೇಲೆ ಹಲ್ಲೆ..

Published On - 3:00 pm, Wed, 9 December 20

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!