AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಮೇಲೆ ಹಲ್ಲೆ ಮಾಡಿದ್ದೇವೆ ಎಂದು ತಪ್ಪೊಪ್ಪಿಕೊಂಡ MLC ನಾಸಿರ್ ಅಹ್ಮದ್ ಪುತ್ರ

ಪೊಲೀಸರು ಮತ್ತು ಯುವಕರ ನಡುವೆ ಮಾತಿನ ಚಕಮಕಿ ಬೆಳೆದಿದೆ. ಆರೋಪಿಗಳು ಪೊಲೀಸರ ಜೊತೆ ಜಗಳವಾಡಿ ಹಲ್ಲೆ ಮಾಡಿದ್ದಾರೆ. ಘಟನೆ ಹಿಂದಿನ ಸಂಪೂರ್ಣ ವಿವರ ಟಿವಿ9ಗೆ ಲಭ್ಯವಾಗಿದೆ.

ಪೊಲೀಸರ ಮೇಲೆ ಹಲ್ಲೆ ಮಾಡಿದ್ದೇವೆ ಎಂದು ತಪ್ಪೊಪ್ಪಿಕೊಂಡ MLC ನಾಸಿರ್ ಅಹ್ಮದ್ ಪುತ್ರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 07, 2022 | 5:32 PM

Share

ಬೆಂಗಳೂರು: MLC ನಾಸಿರ್ ಅಹ್ಮದ್ ಪುತ್ರ ಹಾಗೂ ಗ್ಯಾಂಗ್‌ನಿಂದ ನಡೆದ ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ವಿಚಾರಣೆ ವೇಳೆ ಆರೋಪಿಗಳಾದ ಫಯಾಜ್ ಅಹ್ಮದ್, ಇಮ್ರಾನ್ ಷರೀಫ್, ಜೇನ್ ಷರೀಫ್‌ ತಪ್ಪೊಪ್ಪಿಗೆ ಮಾಡಿಕೊಂಡಿದ್ದಾರೆ. ಪೊಲೀಸರ ವಿರುದ್ಧ ನಾವೇ ಜಗಳ ಮಾಡಿ ಹಲ್ಲೆ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಪೊಲೀಸರ ಮೇಲಿನ ಹಲ್ಲೆ ಪ್ರಕರಣದಲ್ಲಿಆರು ಮಂದಿ ಆರೋಪಿಗಳಿದ್ದಾರೆ. ಅವರಲ್ಲಿ ಮೂವರು ಈಗ ಪೊಲೀಸ್ ವಶದಲ್ಲಿದ್ದಾರೆ. ಉಳಿದ ಮೂರು ಆರೋಪಿಗಳು ಮೊಬೈಲ್ ಆಫ್ ಮಾಡಿಕೊಂಡು ಪರಾರಿಯಾಗಿದ್ದು, ಅಮೃತಹಳ್ಳಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.

MLC ನಾಸಿರ್ ಅಹ್ಮದ್ ಪುತ್ರ ಫಯಾಜ್ ಅಹಮದ್ ಹಾಗೂ ಇನ್ನಿಬ್ಬರು ಈಗಾಗಲೇ ಅರೆಸ್ಟ್ ಅಗಿದ್ದಾರೆ. ನಾಸಿರ್ ಅಹ್ಮದ್ ಮತ್ತೋರ್ವ ಮಗನಿಗಾಗಿಯೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಘಟನೆ ಹಿಂದಿನ ಸಂಪೂರ್ಣ ವಿವರ ಟಿವಿ9 ಗೆ ಲಭ್ಯವಾಗಿದೆ. ಅಂದು ರಾತ್ರಿ ಎಂಜಿ ರೋಡ್ ಹಾಗು ಬ್ರಿಗೇಡ್ ರೋಡ್​ಗೆ ಬಂದಿದ್ದ ಫಯಾಜ್ ಅಹಮದ್ ಮತ್ತು ತಂಡ, ಬ್ರಿಗೇಡ್ ರೋಡ್ ರಸ್ತೆ ಬಳಿಯ ಪಬ್ ಒಂದರಲ್ಲಿ ಭರ್ಜರಿ ಪಾರ್ಟಿ ಮಾಡಿದ್ದರು. ಪಾರ್ಟಿ ಬಳಿಕ ಅಮೃತಹಳ್ಳಿ ಕಡೆಗೆ ತೆರಳಿದ್ದರು. ರಸ್ತೆ ಬದಿಯಲ್ಲಿ ಸಿಗರೇಟ್ ಸೇದುತ್ತಾ ಜೋರಾಗಿ ಕೂಗಾಡುತಿದ್ದರು. ಈ ವೇಳೆ ಗಲಾಟೆ ಮಾಡದೆ ಮನೆಗೆ ಹೋಗುವಂತೆ ಅಮೃತಹಳ್ಳಿ ಪೊಲೀಸರು ತಿಳಿಸಿದ್ದರು.

ಒಂದು ಬಾರಿ ತಿಳಿಹೇಳಿದ ನಂತರವೂ ಮತ್ತೆ ಎರಡನೇ ಬಾರಿ ಫಯಾಜ್ ಅಹಮದ್ ತಂಡ ಪೊಲೀಸರಿಗೆ ಸಿಕ್ಕಿಬಿದ್ದಿದೆ. ಅವರಿಗೆ ವಾರ್ನ್ ಮಾಡಲು ಪೊಲೀಸರು ತೆರಳಿದ್ದರು. ಆಗ, ನಾನು ಯಾರು ಗೊತ್ತಾ? ನಿಮ್ಮನ್ನು ಟ್ರಾನ್ಸ್​ಫರ್ ಮಾಡಿಸುತ್ತೇನೆ ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು. ಅಷ್ಟೇ ಅಲ್ಲದೆ, ಪೊಲೀಸರಿಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದರು.

ಮದ್ಯ ಸೇವಿಸಿ ಕಾರು ಚಾಲನೆ ಪ್ರಶ್ನಿಸಿದ್ದಕ್ಕೆ MLC ಪುತ್ರ, ಸ್ನೇಹಿತರಿಂದ ಪೊಲೀಸರ ಮೇಲೆ ಹಲ್ಲೆ..

Published On - 3:00 pm, Wed, 9 December 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ