ಮನೆ ಮಾಲೀಕ ಆಸ್ಪತ್ರೆಗೆ, ನಡುರಾತ್ರಿ ಮನೆಯಲ್ಲಿ ಪೆಟ್ಟಿಗೆ ಕಳ್ಳತನ, ಕಬ್ಬಿಣದ ಪೆಟ್ಟಿಗೆಯಲ್ಲೇನಿತ್ತು?

ಆನೇಕಲ್: ಮನೆಯ ಬೀಗ ಒಡೆದು ಮನೆಯಲ್ಲಿದ್ದ ಕಬ್ಬಿಣದ ಪೆಟ್ಟಿಗೆ, ಅದರಲ್ಲಿದ್ದ ಹಣ ಹಾಗೂ ದಾಖಲೆ ಪತ್ರಗಳನ್ನ ಕದ್ದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ಲಿನ ಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಮನೆ ಮಾಲೀಕ ಮುನಿರೆಡ್ಡಿ ಎಂಬುವವರು ಬೆಂಗಳೂರಿಗೆ ಆಸ್ಪತ್ರೆ ಎಂದು ಹೋಗಿದ್ದಾರೆ. ಬೆಳಗ್ಗೆ ಮನೆಗೆ ವಾಪಸಾದಾಗ ದೊಡ್ಡ ಶಾಕ್ ಕಾದಿತ್ತು. ಅವರ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಕಳೆದ ರಾತ್ರಿ 12 ಗಂಟೆಯಿಂದ 3ಗಂಟೆಯ ಸಮಯದಲ್ಲಿ ಮನೆಗೆ ಬಂದ ಖದೀಮರು ಬಾಗಿಲು ಮುರಿದು ದಾಖಲೆಗಳು ಹಾಗೂ ಹಣ ಇಟ್ಟಿದ್ದ ಕಬ್ಬಿಣದ ಪೆಟ್ಟಿಗೆಯನ್ನು […]

ಮನೆ ಮಾಲೀಕ ಆಸ್ಪತ್ರೆಗೆ, ನಡುರಾತ್ರಿ ಮನೆಯಲ್ಲಿ ಪೆಟ್ಟಿಗೆ ಕಳ್ಳತನ, ಕಬ್ಬಿಣದ ಪೆಟ್ಟಿಗೆಯಲ್ಲೇನಿತ್ತು?
ಸಾಧು ಶ್ರೀನಾಥ್​

Updated on: Feb 06, 2020 | 12:15 PM

ಆನೇಕಲ್: ಮನೆಯ ಬೀಗ ಒಡೆದು ಮನೆಯಲ್ಲಿದ್ದ ಕಬ್ಬಿಣದ ಪೆಟ್ಟಿಗೆ, ಅದರಲ್ಲಿದ್ದ ಹಣ ಹಾಗೂ ದಾಖಲೆ ಪತ್ರಗಳನ್ನ ಕದ್ದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ಲಿನ ಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಮನೆ ಮಾಲೀಕ ಮುನಿರೆಡ್ಡಿ ಎಂಬುವವರು ಬೆಂಗಳೂರಿಗೆ ಆಸ್ಪತ್ರೆ ಎಂದು ಹೋಗಿದ್ದಾರೆ. ಬೆಳಗ್ಗೆ ಮನೆಗೆ ವಾಪಸಾದಾಗ ದೊಡ್ಡ ಶಾಕ್ ಕಾದಿತ್ತು.

ಅವರ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಕಳೆದ ರಾತ್ರಿ 12 ಗಂಟೆಯಿಂದ 3ಗಂಟೆಯ ಸಮಯದಲ್ಲಿ ಮನೆಗೆ ಬಂದ ಖದೀಮರು ಬಾಗಿಲು ಮುರಿದು ದಾಖಲೆಗಳು ಹಾಗೂ ಹಣ ಇಟ್ಟಿದ್ದ ಕಬ್ಬಿಣದ ಪೆಟ್ಟಿಗೆಯನ್ನು ಕದ್ದಿದ್ದಾರೆ. ಪೆಟ್ಟಿಗೆಯಲ್ಲಿ ಅಪಾರ ಪ್ರಮಾಣದ ಜಮೀನು ದಾಖಲೆ ಹಾಗೂ ಎರಡು ಲಕ್ಷ ಹಣ ದೋಚಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 12:14 pm, Thu, 6 February 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us