ಕೋ ಆಪರೇಟಿವ್ ಸೊಸೈಟಿ ಹೆಸರಲ್ಲಿ ವಂಚನೆ, 5 ವರ್ಷಗಳ ಬಳಿಕ ಆರೋಪಿಗಳ ಸೆರೆ

ಬೆಂಗಳೂರು: ಕೋ ಆಪರೇಟಿವ್ ಸೊಸೈಟಿ ಹೆಸರಲ್ಲಿ ಜನರಿಗೆ ವಂಚನೆ ಮಾಡಿದ್ದ ಇಬ್ಬರು ಆರೋಪಿಗಳ‌ನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಣಿರಾಜ್ ಹಾಗೂ ಕೃಷ್ಣಕುಮಾರ್ ಬಂಧಿತ ಆರೋಪಿಗಳು. ಬೆಂಗಳೂರು ಸೇರಿದಂತೆ ಹಲವೆಡೆ ಸಾರ್ವಜನಿಕರಿಂದ ಹಣವನ್ನ ಆರೋಪಿಗಳು ಹೂಡಿಕೆ ಮಾಡಿದ್ದರು. ಅಧಿಕ ಬಡ್ಡಿಯ ಆಸೆ ತೋರಿಸಿ 12ಜನರಿಗೆ ಸುಮಾರು 8ಲಕ್ಷದವರೆಗೆ ವಂಚಿಸಿದ್ದರು. ಈ ಸಂಬಂಧ 2014ರಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಆರೋಪಿಗಳ‌ ವಿರುದ್ಧ ಪ್ರಕರಣ ದಾಖಲಾಗಿತ್ತು. ನಿನ್ನೆ ಖಚಿತ ಮಾಹಿತಿ ಮೇರೆಗೆ ನಾಗರಬಾವಿ ಬಳಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಕೋ ಆಪರೇಟಿವ್ ಸೊಸೈಟಿ ಹೆಸರಲ್ಲಿ ವಂಚನೆ, 5 ವರ್ಷಗಳ ಬಳಿಕ ಆರೋಪಿಗಳ ಸೆರೆ
ಸಾಧು ಶ್ರೀನಾಥ್​

Updated on: Dec 18, 2019 | 2:31 PM

ಬೆಂಗಳೂರು: ಕೋ ಆಪರೇಟಿವ್ ಸೊಸೈಟಿ ಹೆಸರಲ್ಲಿ ಜನರಿಗೆ ವಂಚನೆ ಮಾಡಿದ್ದ ಇಬ್ಬರು ಆರೋಪಿಗಳ‌ನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಣಿರಾಜ್ ಹಾಗೂ ಕೃಷ್ಣಕುಮಾರ್ ಬಂಧಿತ ಆರೋಪಿಗಳು.

ಬೆಂಗಳೂರು ಸೇರಿದಂತೆ ಹಲವೆಡೆ ಸಾರ್ವಜನಿಕರಿಂದ ಹಣವನ್ನ ಆರೋಪಿಗಳು ಹೂಡಿಕೆ ಮಾಡಿದ್ದರು. ಅಧಿಕ ಬಡ್ಡಿಯ ಆಸೆ ತೋರಿಸಿ 12ಜನರಿಗೆ ಸುಮಾರು 8ಲಕ್ಷದವರೆಗೆ ವಂಚಿಸಿದ್ದರು. ಈ ಸಂಬಂಧ 2014ರಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಆರೋಪಿಗಳ‌ ವಿರುದ್ಧ ಪ್ರಕರಣ ದಾಖಲಾಗಿತ್ತು. ನಿನ್ನೆ ಖಚಿತ ಮಾಹಿತಿ ಮೇರೆಗೆ ನಾಗರಬಾವಿ ಬಳಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us