AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bekal Fort: ಬೇಕಲ ಕೋಟೆ ಬಳಿ ನೈತಿಕ ಪೊಲೀಸ್ ಗಿರಿ, ಪ್ರವಾಸಿಗರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ನಾಲ್ವರ ಬಂಧನ

ಯುವಕ ಯುವತಿಯರ ತಂಡವು ಮೇಲ್ಪರಂಬದಲ್ಲಿ ಹೋಟೆಲ್‌ಗೆ ಊಟ ಮಾಡಲು ಹೋದಾಗ ನಾಲ್ವರ ತಂಡ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದೆ. ಆಮೇಲೆ ಹಲ್ಲೆ ನಡೆಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Bekal Fort: ಬೇಕಲ ಕೋಟೆ ಬಳಿ ನೈತಿಕ ಪೊಲೀಸ್ ಗಿರಿ, ಪ್ರವಾಸಿಗರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ನಾಲ್ವರ ಬಂಧನ
ಬೇಕಲ ಕೋಟೆ
ಗಣಪತಿ ಶರ್ಮಾ
|

Updated on:Jul 24, 2023 | 8:01 PM

Share

ಕಾಸರಗೋಡು, ಜುಲೈ 24: ಕಾಸರಗೋಡಿನ ಪ್ರಸಿದ್ಧ ಪ್ರವಾಸಿ ತಾಣ ಬೇಕಲ ಕೋಟೆಯಲ್ಲಿ (Bekal Fort) ನೈತಿಕ ಪೊಲೀಸ್​ಗಿರಿ (Moral Policing) ನಡೆದಿರುವ ಬಗ್ಗೆ ವರದಿಯಾಗಿದೆ. ಬೇಕಲ ಕೋಟೆಗೆ ತೆರಳಿದ್ದ ಆರು ಮಂದಿಯ ತಂಡದ ಮೇಲೆ ನಾಲ್ವರ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭಾನುವಾರ ಸಂಜೆ ಮೇಲ್ಪರಂಬದಲ್ಲಿ ನಡೆದಿದೆ. ಘಟನೆ ಸಂಬಂಧ ಅಬ್ದುಲ್ ಮನ್ಸೂರ್ (41), ಅಬ್ದುಲ್ ಖಾದರ್ ಅಫೀಕ್ (37), ಮೊಹಮ್ಮದ್ ನಿಸಾರ್ (38), ಮತ್ತು ಬಿಕೆ ಆರಿಫ್ (32) ಎಂಬವರನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಆರು ಮಂದಿ ಪ್ರವಾಸಿಗಳ ತಂಡ ಬೇಕಲ ಕೋಟೆಗೆ ತೆರಳಿತ್ತು. ಅವರ ಪೈಕಿ ಒಬ್ಬರ ಹುಟ್ಟುಹಬ್ಬವಾಗಿತ್ತು. ಬೇಕಲ ಕೋಟೆ ವೀಕ್ಷಣೆಯ ನಂತರ ತಂಡವು ಹಿಂತಿರುಗುತ್ತಿದ್ದಾಗ, ಮೇಲ್ಪರಂಬ ಬಳಿ ಗ್ಯಾಂಗ್ ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದೆ. ಆರು ಮಂದಿಯ ತಂಡದಲ್ಲಿ ಮೂವರು ಹುಡುಗರು ಮತ್ತು ಮೂವರು ಹುಡುಗಿಯರು ಇದ್ದರು.

ಯುವಕ ಯುವತಿಯರ ತಂಡವು ಮೇಲ್ಪರಂಬದಲ್ಲಿ ಹೋಟೆಲ್‌ಗೆ ಊಟ ಮಾಡಲು ಹೋದಾಗ ನಾಲ್ವರ ತಂಡ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದೆ. ಆಮೇಲೆ ಹಲ್ಲೆ ನಡೆಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸ್ಥಳೀಯರು ಮಾಹಿತಿ ನೀಡಿದ ನಂತರ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಳಿಕ ಪೋಷಕರಿಗೆ ಕರೆ ಮಾಡಿ ಕಾರಿನಲ್ಲಿದ್ದ ಯುವತಿಯರನ್ನು ಕಳುಹಿಸಿಕೊಡಲಾಗಿದೆ. ಬಂಧಿತರ ಮೇಲೆ ಭಾರತೀಯ ದಂಡಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: Mangaluru Rains: ಭಾರೀ ಮಳೆ; ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟಕ್ಕೆ ತೆರಳದಂತೆ ಭಕ್ತರಿಗೆ ಎಚ್ಚರಿಕೆ

ಬೇಕಲ ಕೋಟೆಯು ಕೇರಳದ ಕಾಸರಗೋಡು ಜಿಲ್ಲೆಯ ಸಮೀಪ ಇರುವ ಪ್ರಮುಖ ಪ್ರವಾಸಿ ಸ್ಥಳವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಕರ್ನಾಟಕದ ಅನೇಕ ಪ್ರವಾಸಿಗರು ಈ ಐತಿಹಾಸಿಕ ಕೋಟೆಗೆ ಭೇಟಿ ನೀಡುತ್ತಾರೆ. ಈ ಕೋಟೆ ಸುಮಾರು 15ನೇ ಶತಮಾನದಲ್ಲಿ ನಿರ್ಮಾಣವಾಗಿದೆ ಎಂದು ಭಾವಿಸಲಾಗಿದೆ. ವೆಂಕಟಪ್ಪ ನಾಯಕ ಹಾಗೂ ಶಿವಪ್ಪ ನಾಯಕ ರಾಜರ ಕಾಲದಲ್ಲಿ ನಿರ್ಮಾಣವಾಗಿದ್ದ ಈ ಕೋಟೆಯನ್ನು ನಂತರ ಟಿಪ್ಪು ಸುಲ್ತಾನ್ ವಶಪಡಿಸಿಕೊಂಡಿದ್ದ ಎನ್ನಲಾಗಿದೆ. ಟಿಪ್ಪು ಮರಣದ ನಂತರ ಬ್ರಿಟಿಷರ ಈಸ್ಟ್ ಇಂಡಿಯಾ ಕಂಪನಿ ಈ ಕೋಟೆಯನ್ನು ವಶಪಡಿಸಿಕೊಂಡಿತ್ತು. ಪ್ರಸ್ತುತ ಭಾರತೀಯ ಪುರಾತತ್ವ ಇಲಾಖೆಯ ಅಧೀನದಲ್ಲಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:28 pm, Mon, 24 July 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ