Bekal Fort: ಬೇಕಲ ಕೋಟೆ ಬಳಿ ನೈತಿಕ ಪೊಲೀಸ್ ಗಿರಿ, ಪ್ರವಾಸಿಗರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ನಾಲ್ವರ ಬಂಧನ

ಯುವಕ ಯುವತಿಯರ ತಂಡವು ಮೇಲ್ಪರಂಬದಲ್ಲಿ ಹೋಟೆಲ್‌ಗೆ ಊಟ ಮಾಡಲು ಹೋದಾಗ ನಾಲ್ವರ ತಂಡ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದೆ. ಆಮೇಲೆ ಹಲ್ಲೆ ನಡೆಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Bekal Fort: ಬೇಕಲ ಕೋಟೆ ಬಳಿ ನೈತಿಕ ಪೊಲೀಸ್ ಗಿರಿ, ಪ್ರವಾಸಿಗರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ನಾಲ್ವರ ಬಂಧನ
ಬೇಕಲ ಕೋಟೆ
Follow us
|

Updated on:Jul 24, 2023 | 8:01 PM

ಕಾಸರಗೋಡು, ಜುಲೈ 24: ಕಾಸರಗೋಡಿನ ಪ್ರಸಿದ್ಧ ಪ್ರವಾಸಿ ತಾಣ ಬೇಕಲ ಕೋಟೆಯಲ್ಲಿ (Bekal Fort) ನೈತಿಕ ಪೊಲೀಸ್​ಗಿರಿ (Moral Policing) ನಡೆದಿರುವ ಬಗ್ಗೆ ವರದಿಯಾಗಿದೆ. ಬೇಕಲ ಕೋಟೆಗೆ ತೆರಳಿದ್ದ ಆರು ಮಂದಿಯ ತಂಡದ ಮೇಲೆ ನಾಲ್ವರ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭಾನುವಾರ ಸಂಜೆ ಮೇಲ್ಪರಂಬದಲ್ಲಿ ನಡೆದಿದೆ. ಘಟನೆ ಸಂಬಂಧ ಅಬ್ದುಲ್ ಮನ್ಸೂರ್ (41), ಅಬ್ದುಲ್ ಖಾದರ್ ಅಫೀಕ್ (37), ಮೊಹಮ್ಮದ್ ನಿಸಾರ್ (38), ಮತ್ತು ಬಿಕೆ ಆರಿಫ್ (32) ಎಂಬವರನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಆರು ಮಂದಿ ಪ್ರವಾಸಿಗಳ ತಂಡ ಬೇಕಲ ಕೋಟೆಗೆ ತೆರಳಿತ್ತು. ಅವರ ಪೈಕಿ ಒಬ್ಬರ ಹುಟ್ಟುಹಬ್ಬವಾಗಿತ್ತು. ಬೇಕಲ ಕೋಟೆ ವೀಕ್ಷಣೆಯ ನಂತರ ತಂಡವು ಹಿಂತಿರುಗುತ್ತಿದ್ದಾಗ, ಮೇಲ್ಪರಂಬ ಬಳಿ ಗ್ಯಾಂಗ್ ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದೆ. ಆರು ಮಂದಿಯ ತಂಡದಲ್ಲಿ ಮೂವರು ಹುಡುಗರು ಮತ್ತು ಮೂವರು ಹುಡುಗಿಯರು ಇದ್ದರು.

ಯುವಕ ಯುವತಿಯರ ತಂಡವು ಮೇಲ್ಪರಂಬದಲ್ಲಿ ಹೋಟೆಲ್‌ಗೆ ಊಟ ಮಾಡಲು ಹೋದಾಗ ನಾಲ್ವರ ತಂಡ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದೆ. ಆಮೇಲೆ ಹಲ್ಲೆ ನಡೆಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸ್ಥಳೀಯರು ಮಾಹಿತಿ ನೀಡಿದ ನಂತರ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಳಿಕ ಪೋಷಕರಿಗೆ ಕರೆ ಮಾಡಿ ಕಾರಿನಲ್ಲಿದ್ದ ಯುವತಿಯರನ್ನು ಕಳುಹಿಸಿಕೊಡಲಾಗಿದೆ. ಬಂಧಿತರ ಮೇಲೆ ಭಾರತೀಯ ದಂಡಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: Mangaluru Rains: ಭಾರೀ ಮಳೆ; ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟಕ್ಕೆ ತೆರಳದಂತೆ ಭಕ್ತರಿಗೆ ಎಚ್ಚರಿಕೆ

ಬೇಕಲ ಕೋಟೆಯು ಕೇರಳದ ಕಾಸರಗೋಡು ಜಿಲ್ಲೆಯ ಸಮೀಪ ಇರುವ ಪ್ರಮುಖ ಪ್ರವಾಸಿ ಸ್ಥಳವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಕರ್ನಾಟಕದ ಅನೇಕ ಪ್ರವಾಸಿಗರು ಈ ಐತಿಹಾಸಿಕ ಕೋಟೆಗೆ ಭೇಟಿ ನೀಡುತ್ತಾರೆ. ಈ ಕೋಟೆ ಸುಮಾರು 15ನೇ ಶತಮಾನದಲ್ಲಿ ನಿರ್ಮಾಣವಾಗಿದೆ ಎಂದು ಭಾವಿಸಲಾಗಿದೆ. ವೆಂಕಟಪ್ಪ ನಾಯಕ ಹಾಗೂ ಶಿವಪ್ಪ ನಾಯಕ ರಾಜರ ಕಾಲದಲ್ಲಿ ನಿರ್ಮಾಣವಾಗಿದ್ದ ಈ ಕೋಟೆಯನ್ನು ನಂತರ ಟಿಪ್ಪು ಸುಲ್ತಾನ್ ವಶಪಡಿಸಿಕೊಂಡಿದ್ದ ಎನ್ನಲಾಗಿದೆ. ಟಿಪ್ಪು ಮರಣದ ನಂತರ ಬ್ರಿಟಿಷರ ಈಸ್ಟ್ ಇಂಡಿಯಾ ಕಂಪನಿ ಈ ಕೋಟೆಯನ್ನು ವಶಪಡಿಸಿಕೊಂಡಿತ್ತು. ಪ್ರಸ್ತುತ ಭಾರತೀಯ ಪುರಾತತ್ವ ಇಲಾಖೆಯ ಅಧೀನದಲ್ಲಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:28 pm, Mon, 24 July 23

ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ