AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ ನೈತಿಕ ಪೊಲೀಸ್​ಗಿರಿ: ಲಾಡ್ಜ್​ನಲ್ಲಿ ಅನ್ಯಕೋಮಿನ ಮಹಿಳೆಯೊಂದಿಗೆ ಸಿಕ್ಕಿಬಿದ್ದ ವ್ಯಕ್ತಿಗೆ ಥಳಿತ

ಅನ್ಯಕೋಮಿನ ವಿವಾಹಿತ ಮಹಿಳೆಯೊಂದಿಗೆ ಪುರುಷ ಸಿಕ್ಕಿಬಿದಿದ್ದು, ಇದರಿಂದ ರೊಚ್ಚಿಗೆದ್ದ ಯುವತಿ ಪತಿಚಯಸ್ಥ ಯುವಕರ ಗುಂಪು ಪುರುಷನ ಮೇಲೆ ಹಲ್ಲೆ ಮಾಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ನೈತಿಕ ಪೊಲೀಸ್​ಗಿರಿ ಕೇಸ್ ತಡವಾಗಿ ಬೆಳಕಿಗೆ ಬಂದಿದೆ. ಹಾನಗಲ್ ಪಟ್ಟಣದ ನಾಲ್ಕರ ಕ್ರಾಸ್ ಬಳಿ ಇರುವ ಖಾಸಗಿ ಹೊಟೇಲ್​​ನಲ್ಲಿ ಘಟನೆ ನಡೆದಿದೆ.

ಹಾವೇರಿಯಲ್ಲಿ ನೈತಿಕ ಪೊಲೀಸ್​ಗಿರಿ: ಲಾಡ್ಜ್​ನಲ್ಲಿ ಅನ್ಯಕೋಮಿನ ಮಹಿಳೆಯೊಂದಿಗೆ ಸಿಕ್ಕಿಬಿದ್ದ ವ್ಯಕ್ತಿಗೆ ಥಳಿತ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 10, 2024 | 11:08 PM

ಹಾವೇರಿ, ಜನವರಿ 10: ಅನ್ಯಕೋಮಿನ ವಿವಾಹಿತ ಮಹಿಳೆಯೊಂದಿಗೆ ಪುರುಷ ಸಿಕ್ಕಿಬಿದಿದ್ದು, ಇದರಿಂದ ರೊಚ್ಚಿಗೆದ್ದ ಯುವತಿ ಪತಿಚಯಸ್ಥ ಯುವಕರ ಗುಂಪು ಪುರುಷನ ಮೇಲೆ ಹಲ್ಲೆ ಮಾಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ನೈತಿಕ ಪೊಲೀಸ್​ಗಿರಿ (Moral policing) ಕೇಸ್ ತಡವಾಗಿ ಬೆಳಕಿಗೆ ಬಂದಿದೆ. ಬುರ್ಖಾ ಧರಿಸಿಕೊಂಡು ಬಂದಿದ್ದೀಯಾ ಎಂದು ವ್ಯಕ್ತಿ ಜೊತೆಗಿದ್ದ ಮಹಿಳೆಯನ್ನೂ ಥಳಿಸಿದ್ದಾರೆ. ಘಟನೆ ಸಂಬಂಧ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಾನಗಲ್ ಪಟ್ಟಣದ ನಾಲ್ಕರ ಕ್ರಾಸ್ ಬಳಿ ಇರುವ ಖಾಸಗಿ ಹೊಟೇಲ್​​ನಲ್ಲಿ ಘಟನೆ ನಡೆದಿದೆ. ರೂಂ​ನಲ್ಲಿ ನೀರು ಬರುತ್ತಿದೆಯಾ ಎಂದು ಬಾಗಿಲು ತೆರೆಸಿದ್ದಾರೆ. ಬಾಗಿಲು ಓಪನ್​ ಮಾಡುತ್ತಿದ್ದಂತೆ ಯುವತಿ ಮೇಲೆ ಹಲ್ಲೆ ಮಾಡಿದ್ದಾರೆ. ನಮ್ಮ ಹುಡುಗಿನೇ ಬೇಕಿತ್ತಾ ನಿಂಗೆ ಅಂತ ವ್ಯಕ್ತಿ ಮೇಲೂ ಹಲ್ಲೆ ಮಾಡಿದ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ:  ಬೆಳಗಾವಿ: ಅನ್ಯಕೋಮಿನ ಯುವಕರಿಂದ ನೈತಿಕ​ ಪೊಲೀಸ್​ಗಿರಿ: 7 ಆರೋಪಿಗಳ ಬಂಧನ, 17 ಜನರ ವಿರುದ್ಧ ಎಫ್​​ಐಆರ್

ಸದ್ಯ ಮಹಿಳೆ ಮೇಲೆ ಬೇರೆ ದೌರ್ಜನ್ಯ ನಡೆದಿದೆಯಾ ಎಂಬ ಬಗ್ಗೆ ತನಿಖೆ ಪೊಲೀಸರು ನಡೆಸುತ್ತಿದ್ದಾರೆ. ಮಹಿಳೆ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಮಹಿಳೆಗೆ ಹಾನಗಲ್ ತಾಲೂಕ ಆಸ್ಪತ್ರೆಯಲ್ಲಿ ಪೊಲೀಸರು ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ.

ಇದನ್ನೂ ಪದಿ: ಮಂಗಳೂರು ಮೂಡಾ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿಯಿಂದ ಲೈಂಗಿಕ‌ ದೌರ್ಜನ್ಯ ಆರೋಪ: ದೂರು ದಾಖಲು

ಲಾಡ್ಜ್​ನಿಂದ ಎಳೆತಂದು ಬಳಿಕ ಸಂತ್ರಸ್ಥೆಯನ್ನು ಬೈಕ್ ಮೇಲೆ ಅಜ್ಞಾತ ಸ್ಥಳಕ್ಕೆ ಕರೆದೊಯಲಾಗಿದೆ. ಸಂತ್ರಸ್ಥೆ ಜೊತೆಗಿದ್ದ ಬಸ್ ಡ್ರೈವರ್ ಸೋಮಶೇಖರ್​ ನನ್ನ ಥಳಿಸಿ ಎಳೆದು ಬೈಕ್ ಮೇಲೆ ಕೂರಿಸಿಕೊಂಡು ಆರೋಪಿಗಳು ಹೋಗಿದ್ದಾರೆ. ಸದ್ಯ ಹಲ್ಲೆಗೊಳಗಾದ ಬಸ್ ಡ್ರೈವರ್ ಸೋಮಶೇಖರ್ ನಾಪತ್ತೆಯಾಗಿದ್ದು, ಹಾನಗಲ್ ಪೊಲೀಸರು ಹುಡುಕಾಟದಲ್ಲಿದ್ದಾರೆ. ಹಲವು ಅನುಮಾನಗಳಿಗೆ ಪ್ರಕರಣ ಎಡೆಮಾಡಿಕೊಟ್ಟಿದೆ.

ಇಬ್ಬರನ್ನ ಬಂಧಿನ: ಎಸ್ ಪಿ ಅಂಶುಕುಮಾರ

ಎಸ್ ಪಿ ಅಂಶುಕುಮಾರ ಪ್ರತಿಕ್ರಿಯಿಸಿದ್ದು, ಜನವರಿ 8 ರಂದು 1 ರಿಂದ 2 ಗಂಟೆಗೆ ಘಟನೆ ನಡೆದಿದೆ. ಹೊಟೇಲ್​ಗೆ ಮಹಿಳೆ ಮತ್ತು ಪುರುಷ ಹೋಗಿದ್ದರು. ಈ ವೇಳೆ ಮಹಿಳೆ ಮತ್ತು ಪುರುಷನ ಮೇಲೆ ಹಲ್ಲೆ ಮಾಡಿದ್ದಾರೆ. ಪ್ರಕರಣದಲ್ಲಿ 5 ರಿಂದ 6 ಜನರಿದ್ದಾರೆ. ಸದ್ಯ ಇಬ್ಬರನ್ನ ಬಂಧಿಸಲಾಗಿದೆ. ಇನ್ನುಳಿದವರ ಬಂಧನಕ್ಕೆ ತಂಡ ರಚಿಸಲಾಗಿದೆ. ಗ್ಯಾಂಗ್ ರೇಪ್ ಬಗ್ಗೆ ಕಂಪ್ಲೇಂಟ್ ಕೊಟ್ಟಿಲ್ಲ. ಆರೋಪಿಗಳು ಈ ಮುಂಚೆ ಇಂತಹ ಪ್ರಕರಣದಲ್ಲಿ ಭಾಗಿಯಾದ್ದರಾ ಎನ್ನುವುದನ್ನು ತನಿಖೆ ಮಾಡುತ್ತೇವೆ ಎಂದಿದ್ದಾರೆ.

ವರದಿ: ರವಿ ಹೂಗಾರ, ಟಿವಿ9 ಹಾವೇರಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:47 pm, Wed, 10 January 24

ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?