AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಶಿಕಾ ಹೆಸರಿನಲ್ಲಿ ವಂಚನೆ ಎಸಗಿದ ಆರೋಪಿ ನಿಶಾ ನರಸಪ್ಪ ವಿರುದ್ಧ ದಾಖಲಾದ ಮತ್ತಷ್ಟು ದೂರುಗಳು

ಮಾಸ್ಟರ್ ಆನಂದ್ ಪುತ್ರಿ ವಂಶಿಕ ಹೆಸರು ಬಳಸಿ ವಂಚನೆ ಎಸಗಿದ್ದ ಆರೋಪಿ ನಿಶಾ ನರಸಪ್ಪ ಈ ಹಿಂದೆ ಹಲವರಿಗೆ ವಂಚಿಸಿದ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ವಂಶಿಕಾ ಹೆಸರಿನಲ್ಲಿ ವಂಚನೆ ಎಸಗಿದ ಆರೋಪಿ ನಿಶಾ ನರಸಪ್ಪ ವಿರುದ್ಧ ದಾಖಲಾದ ಮತ್ತಷ್ಟು ದೂರುಗಳು
ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಿನಲ್ಲಿ ವಂಚನೆ ಎಸಗಿ ಬಂಧಿತಳಾಗಿರುವ ನಿಶಾ ನರಸಪ್ಪ
Follow us
Prajwal Kumar NY
| Updated By: Rakesh Nayak Manchi

Updated on: Jul 15, 2023 | 10:49 AM

ಬೆಂಗಳೂರು, ಜುಲೈ 15: ಮಾಸ್ಟರ್ ಆನಂದ್ (Master Anand) ಪುತ್ರಿ ವಂಶಿಕಾ ಹೆಸರು ಬಳಸಿ ವಂಚನೆ ಎಸಗಿ ಬಂಧಿತಳಾಗಿರುವ ನಿಶಾ ನರಸಪ್ಪಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈಕೆ ಅರೆಸ್ಟ್ ಆಗುತ್ತಿದ್ದಂತೆ ಹಲವು ಮಂದಿ ಸದಾಶಿವನಗರ ಠಾಣೆಗೆ ಆಗಮಿಸಿ ವಂಚನೆ ದೂರು ನೀಡಲು ಆರಂಭಿಸಿದ್ದಾರೆ.

ಕಳೆದ ತಿಂಗಳು ದಾಖಲಾದ ದೂರಿನ ಬೆನ್ನಲ್ಲೇ ಇದೀಗ ಸಾಕಷ್ಟು ಮಂದಿ ನಿಶಾ ನರಸಪ್ಪಳ ವಿರುದ್ಧ ದೂರು ನೀಡಿದ್ದಾರೆ. ಈವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ತಾರಾ ಎಂಬುವವರಿಗೆ 20 ಲಕ್ಷ ವಂಚನೆ ಎಸಗಿದ ಆರೋಪ ಸಂಬಂಧ ಕಳೆದ ತಿಂಗಳು ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೇ ರೀತಿ ಕೋಣನಕುಂಟೆ ಹಾಗೂ ಜ್ಞಾನಭಾರತಿ ಠಾಣೆಯಲ್ಲಿ ವಂಚನೆ ದೂರುಗಳು ದಾಖಲಾಗಿವೆ.

ಇದನ್ನೂ ಓದಿ: ಮಾಸ್ಟರ್ ಆನಂದ್​ಗೆ ವಂಚನೆ; ನಿವೇಶನ ಪಡೆಯಲು ಹೋಗಿ 18 ಲಕ್ಷ ರೂಪಾಯಿ ಕಳೆದುಕೊಂಡ ನಟ

ಸದಾಶಿವನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಬರೋಬ್ಬರಿ 35 ಲಕ್ಷ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಾಲದ ರೂಪದಲ್ಲಿ ಹಾಗೂ ಇನ್ವೆಸ್ಟ್ ಮಾಡಿದರೆ ಲಾಭಾಂಶ ನೀಡುವುದಾಗಿ ನಂಬಿಸಿ ವಂಚನೆ ಎಸಗುತ್ತಿದ್ದಳು. ಮೊದಲು ಲಾಭಾಂಶದ ಹಣ ಕೊಟ್ಟು ಎರಡರಷ್ಟು ಹಣ ಪಡೆದು ವಂಚನೆ ಮಾಡುತ್ತಿದ್ದಳು.

ಬೆಂಗಳೂರು ದೊಡ್ಡ ಮಾಲ್​ಗಳಲ್ಲಿ ಈವೆಂಟ್ ಮ್ಯಾನೇಜ್ಮೆಂಟ್ ಮಾಡುತ್ತಿದ್ದ ರಾಮನಗರ ಮೂಲದ ನಿಶಾ, ಬೆಂಗಳೂರು ಹೊರಹೊಲಯದಲ್ಲಿನ ರೆಸಾರ್ಟ್​ಗಳಲ್ಲಿ ಶೂಟಿಂಗ್ ಮಾಡುವ ಮೂಲಕ ಪೋಷಕರಿಗೆ ಮಕ್ಮಲ್ ಟೋಪಿ ಹಾಕಿದ್ದಾಳೆ. ಕೇವಲ ಮಕ್ಕಳಷ್ಟೇ ಅಲ್ಲ ಸಾಕಷ್ಟು ಮಂದಿಗೆ ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಲಕ್ಷಾಂತರ ಹಣ ವಂಚನೆ ಎಸಗಿದ್ದು, ಸದ್ಯ ಸದಾಶಿವನಗರ ಠಾಣೆಗೆ ಹಲವಾರು ದೂರುಗಳು ಬರುತ್ತಿವೆ. ಹೀಗಾಗಿ ದೂರುಗಳನ್ನ ತಮ್ಮ ಮನೆ ವ್ಯಾಪ್ತಿಯ ಠಾಣೆಗೆ ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್