AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಶಿಕಾ ಹೆಸರಿನಲ್ಲಿ ವಂಚನೆ ಎಸಗಿದ ಆರೋಪಿ ನಿಶಾ ನರಸಪ್ಪ ವಿರುದ್ಧ ದಾಖಲಾದ ಮತ್ತಷ್ಟು ದೂರುಗಳು

ಮಾಸ್ಟರ್ ಆನಂದ್ ಪುತ್ರಿ ವಂಶಿಕ ಹೆಸರು ಬಳಸಿ ವಂಚನೆ ಎಸಗಿದ್ದ ಆರೋಪಿ ನಿಶಾ ನರಸಪ್ಪ ಈ ಹಿಂದೆ ಹಲವರಿಗೆ ವಂಚಿಸಿದ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ವಂಶಿಕಾ ಹೆಸರಿನಲ್ಲಿ ವಂಚನೆ ಎಸಗಿದ ಆರೋಪಿ ನಿಶಾ ನರಸಪ್ಪ ವಿರುದ್ಧ ದಾಖಲಾದ ಮತ್ತಷ್ಟು ದೂರುಗಳು
ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಿನಲ್ಲಿ ವಂಚನೆ ಎಸಗಿ ಬಂಧಿತಳಾಗಿರುವ ನಿಶಾ ನರಸಪ್ಪ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jul 15, 2023 | 10:49 AM

Share

ಬೆಂಗಳೂರು, ಜುಲೈ 15: ಮಾಸ್ಟರ್ ಆನಂದ್ (Master Anand) ಪುತ್ರಿ ವಂಶಿಕಾ ಹೆಸರು ಬಳಸಿ ವಂಚನೆ ಎಸಗಿ ಬಂಧಿತಳಾಗಿರುವ ನಿಶಾ ನರಸಪ್ಪಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈಕೆ ಅರೆಸ್ಟ್ ಆಗುತ್ತಿದ್ದಂತೆ ಹಲವು ಮಂದಿ ಸದಾಶಿವನಗರ ಠಾಣೆಗೆ ಆಗಮಿಸಿ ವಂಚನೆ ದೂರು ನೀಡಲು ಆರಂಭಿಸಿದ್ದಾರೆ.

ಕಳೆದ ತಿಂಗಳು ದಾಖಲಾದ ದೂರಿನ ಬೆನ್ನಲ್ಲೇ ಇದೀಗ ಸಾಕಷ್ಟು ಮಂದಿ ನಿಶಾ ನರಸಪ್ಪಳ ವಿರುದ್ಧ ದೂರು ನೀಡಿದ್ದಾರೆ. ಈವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ತಾರಾ ಎಂಬುವವರಿಗೆ 20 ಲಕ್ಷ ವಂಚನೆ ಎಸಗಿದ ಆರೋಪ ಸಂಬಂಧ ಕಳೆದ ತಿಂಗಳು ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೇ ರೀತಿ ಕೋಣನಕುಂಟೆ ಹಾಗೂ ಜ್ಞಾನಭಾರತಿ ಠಾಣೆಯಲ್ಲಿ ವಂಚನೆ ದೂರುಗಳು ದಾಖಲಾಗಿವೆ.

ಇದನ್ನೂ ಓದಿ: ಮಾಸ್ಟರ್ ಆನಂದ್​ಗೆ ವಂಚನೆ; ನಿವೇಶನ ಪಡೆಯಲು ಹೋಗಿ 18 ಲಕ್ಷ ರೂಪಾಯಿ ಕಳೆದುಕೊಂಡ ನಟ

ಸದಾಶಿವನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಬರೋಬ್ಬರಿ 35 ಲಕ್ಷ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಾಲದ ರೂಪದಲ್ಲಿ ಹಾಗೂ ಇನ್ವೆಸ್ಟ್ ಮಾಡಿದರೆ ಲಾಭಾಂಶ ನೀಡುವುದಾಗಿ ನಂಬಿಸಿ ವಂಚನೆ ಎಸಗುತ್ತಿದ್ದಳು. ಮೊದಲು ಲಾಭಾಂಶದ ಹಣ ಕೊಟ್ಟು ಎರಡರಷ್ಟು ಹಣ ಪಡೆದು ವಂಚನೆ ಮಾಡುತ್ತಿದ್ದಳು.

ಬೆಂಗಳೂರು ದೊಡ್ಡ ಮಾಲ್​ಗಳಲ್ಲಿ ಈವೆಂಟ್ ಮ್ಯಾನೇಜ್ಮೆಂಟ್ ಮಾಡುತ್ತಿದ್ದ ರಾಮನಗರ ಮೂಲದ ನಿಶಾ, ಬೆಂಗಳೂರು ಹೊರಹೊಲಯದಲ್ಲಿನ ರೆಸಾರ್ಟ್​ಗಳಲ್ಲಿ ಶೂಟಿಂಗ್ ಮಾಡುವ ಮೂಲಕ ಪೋಷಕರಿಗೆ ಮಕ್ಮಲ್ ಟೋಪಿ ಹಾಕಿದ್ದಾಳೆ. ಕೇವಲ ಮಕ್ಕಳಷ್ಟೇ ಅಲ್ಲ ಸಾಕಷ್ಟು ಮಂದಿಗೆ ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಲಕ್ಷಾಂತರ ಹಣ ವಂಚನೆ ಎಸಗಿದ್ದು, ಸದ್ಯ ಸದಾಶಿವನಗರ ಠಾಣೆಗೆ ಹಲವಾರು ದೂರುಗಳು ಬರುತ್ತಿವೆ. ಹೀಗಾಗಿ ದೂರುಗಳನ್ನ ತಮ್ಮ ಮನೆ ವ್ಯಾಪ್ತಿಯ ಠಾಣೆಗೆ ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?