AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಕಾರ್ಪೊರೇಟರ್ ಪತಿ ಆಯೂಬ್​​​ ಖಾನ್ ಕೊಲೆಗೆ ಟ್ವಿಸ್ಟ್: ಪೊಲೀಸರಿಗೆ ಕೊಟ್ಟ ದೂರಿನಲ್ಲಿ ಕಾರಣ ಬಹಿರಂಗ

ಮಸೀದಿಯ ಅಧ್ಯಕ್ಷ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಆಯೂಬ್ ಖಾನ್ ಅವರ ಸಹೋದರನ ಮಗ ಮತೀನ್ ಖಾನ್​ ಈ ಕೊಲೆ ಮಾಡಿದ್ದಾನೆ ಎಂದು ದೂರಲಾಗಿದೆ.

ಮಾಜಿ ಕಾರ್ಪೊರೇಟರ್ ಪತಿ ಆಯೂಬ್​​​ ಖಾನ್ ಕೊಲೆಗೆ ಟ್ವಿಸ್ಟ್: ಪೊಲೀಸರಿಗೆ ಕೊಟ್ಟ ದೂರಿನಲ್ಲಿ ಕಾರಣ ಬಹಿರಂಗ
ಮೃತ ಆಯುಬ್ ಖಾನ್ ಮತ್ತು ಆರೋಪಿ ಮತೀನ್ ಖಾನ್
TV9 Web
| Edited By: |

Updated on:Jul 14, 2022 | 10:40 AM

Share

ಬೆಂಗಳೂರು: ನಗರದ ಟಿಪ್ಪುನಗರ ವಾರ್ಡ್​​ನ ಮಾಜಿ ಕಾರ್ಪೊರೇಟರ್ ನಜೀಮಾ ಅವರ ಪತಿ ಆಯೂಬ್ ಖಾನ್ ಕೊಲೆಗೆ ಇರಬಹುದಾದ ಶಂಕಿತ ಕಾರಣವು ಪೊಲೀಸರ ದೂರಿನಲ್ಲಿ ನಮೂದಾಗಿದೆ. ನಜೀಮಾ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿರುವ ಪೊಲೀಸರು ಎಫ್​ಐಆರ್ ಹಾಕಿದ್ದಾರೆ. ಮಸೀದಿಯ ಅಧ್ಯಕ್ಷ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಆಯೂಬ್ ಖಾನ್ ಅವರ ಸಹೋದರನ ಮಗ ಮತೀನ್ ಖಾನ್​ ಈ ಕೊಲೆ ಮಾಡಿದ್ದಾನೆ ಎಂದು ದೂರಲಾಗಿದೆ.

ಟಿಪ್ಪು ನಗರದ ಖುದಾದತ್ ಮಸೀದಿಯ ಅಧ್ಯಕ್ಷಗಿರಿಗಾಗಿ ಇವರಿಬ್ಬರ ನಡುವೆ ಪೈಪೋಟಿ ನಡೆಯುತ್ತಿತ್ತು. 15 ವರ್ಷದಿಂದ ಖುದಾದತ್ ಮಸೀದಿಗೆ ಆಯೂಬ್ ಅಧ್ಯಕ್ಷರಾಗಿದ್ದರು. ಈ ಹುದ್ದೆಯನ್ನು ತನಗೆ ಬಿಟ್ಟುಕೊಡುವಂತೆ ಕಳೆದ ವರ್ಷದಿಂದ ಮತೀನ್ ಪಟ್ಟು ಹಿಡಿದ್ದರು. ಇದೇ ವಿವಾದಕ್ಕೆ ಸಂಬಂಧಿದಂತೆ 6 ತಿಂಗಳ ಹಿಂದೆಯೂ ಒಮ್ಮೆ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿದ್ದ ಎಂದು ನಜೀಮಾ ಹೇಳಿದ್ದಾರೆ.

ನೀನು ಇರುವವರೆಗೂ ನಾನು ಪ್ರೆಸಿಡೆಂಟ್ ಆಗುವುದಿಲ್ಲ ಎಂದು ಮತೀನ್ ಪಟ್ಟು ಹಿಡಿದಿದ್ದ. ಸೋದರನ ಮಗ ಎನ್ನುವ ಕಾರಣಕ್ಕೆ ಆಯೂಬ್ ಈ ವಿಷಯದಲ್ಲಿ ಪೊಲೀಸರಿಗೆ ದೂರು ನೀಡಿರಲಿಲ್ಲ. ಆದರೆ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಆಯೂಬ್ ಮನೆ ಬಳಿ ಬಂದಿದ್ದ ಮತೀನ್ ಗಲಾಟೆ ಮಾಡಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.

ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪತಿ ಆಯೂಬ್ ಖಾನ್ ಸಾವು

ಚಾಕು ಇರಿತದಿಂದ ಗಾಯಗೊಂಡಿದ್ದ ಬೆಂಗಳೂರಿನ ಟಿಪ್ಪುನಗರ ವಾರ್ಡ್​ನ ಮಾಜಿ ಕಾರ್ಪೊರೇಟರ್ ನಜೀಮಾ ಅವರ ಪತಿ ಆಯೂಬ್​​​ ಖಾನ್ ಗುರುವಾರ (ಜುಲೈ 14) ನಸುಕಿನಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟರು. ನಿನ್ನೆಯಷ್ಟೇ ಆಯೂಬ್​ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಯೂಬ್​​ ಹೊಟ್ಟೆಯ ಭಾಗದಲ್ಲಿ ತೀವ್ರ ರಕ್ತಸ್ರಾವ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಕೊಡಿಸಲಾಯಿತು. ಆದರೆ ಫಲಿಸದೆ ಆಯೂಬ್ ಅವರು ಮೃತಪಟ್ಟರು. ಆಸ್ತಿ ವಿಚಾರವಾಗಿ ಆಸ್ತಿ ವಿಚಾರವಾಗಿ ಆಯೂಬ್​ ಖಾನ್​ ಅಣ್ಣನ ಮಕ್ಕಳಿಂದ ಅಪರಾಧ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದರು. ಆಯೂಬ್ ಹೊಟ್ಟೆಯ ಭಾಗಕ್ಕೆ ದುಷ್ಕರ್ಮಿಗಳು ಇರಿದಿದ್ದರು. ಆರೋಪಿಗಳಿಗಾಗಿ ಚಾಮರಾಜಪೇಟೆ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಮೇಲ್ನೋಟಕ್ಕೆ ಆಸ್ತಿ ವಿವಾದವೇ ಜಗಳಕ್ಕೆ ಮುಖ್ಯ ಕಾರಣ ಎಂದು ಶಂಕಿಸಲಾಗಿದೆ. ರಕ್ತದ ಮಡುವಿನಲ್ಲಿದ್ದ ಅಯೂಬ್​ನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣನ‌ ಮಗನೊಂದಿಗೆ ಪದೇ ಪದೇ ಜಗಳ ನಡೆಯುತ್ತಿತ್ತು. ನಿನ್ನೆ ಸಂಜೆ ಮನೆಗೆ ಹೋಗಿದ್ದ ಅಯೂಬ್ ಅಣ್ಣನ‌ ಮಗನಿಂದ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ಹೋಗಿ ಚಾಕುವಿನಿಂದ ಹೊಟ್ಟೆಗೆ ಇರಿಯಲಾಗಿದೆ ಎಂದು ತಿಳಿದು ಬಂದಿದೆ.

ಆಸ್ಪತ್ರೆಗೆ ಶಾಸಕ ಜಮೀರ್ ಅಹಮದ್ ಭೇಟಿ

ಈ ನಡುವೆ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಚಾಮರಾಜಪೇಟೆ ಶಾಸಕ‌ ಜಮೀರ್ ಅಹಮದ್ ಖಾನ್ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಯೂಬ್ ಖಾನ್ ಮರಣೋತ್ತರ ಪರೀಕ್ಷೆ ನಡೆಯಿತು. ನಂತರ ಕುಟುಂಬ ಸದಸ್ಯರಿಗೆ ಮೃತದೇಹ ಹಸ್ತಾಂತರ ಮಾಡಲಾಯಿತು. ಈ ವೇಳೆ ಅಭಿಮಾನಿಗಳು ಕಣ್ಣೀರಿಟ್ಟರು.

Published On - 10:40 am, Thu, 14 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ