AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ನೀರಿನಲ್ಲಿ ಆಟ ಆಡುತ್ತಿದ್ದಕ್ಕೆ ಕೋಪಗೊಂಡು ಮಗುವಿಗೆ ಥಳಿಸಿದ ಹೆತ್ತ ತಾಯಿ; ಗಂಭೀರ ಸ್ಥಿತಿಯಿಂದ 2 ವರ್ಷದ ಮಗು ಸಾವು

ಮಗುವಿನ ತಂದೆ ಆಟೋರಿಕ್ಷಾ ಚಾಲಕನಾಗಿದ್ದು, ಆತ ಹೊರಗಡೆ ಹೋದ ಸಮಯದಲ್ಲಿ ಘಟನೆ ನಡೆದಿದೆ. ಮಗುವಿನ ತಾಯಿ ನೇಹಾ ಸೋನಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

Crime News: ನೀರಿನಲ್ಲಿ ಆಟ ಆಡುತ್ತಿದ್ದಕ್ಕೆ ಕೋಪಗೊಂಡು ಮಗುವಿಗೆ ಥಳಿಸಿದ ಹೆತ್ತ ತಾಯಿ; ಗಂಭೀರ ಸ್ಥಿತಿಯಿಂದ 2 ವರ್ಷದ ಮಗು ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 10, 2021 | 12:24 PM

Share

ಪುಟ್ಟ ಮಗು ನೀರಿನಲ್ಲಿ ಅಟವಾಡುತ್ತಿದೆ ಎಂಬ ಮಾತ್ರಕ್ಕೆ ಹೆತ್ತ ತಾಯಿಯೇ ಥಳಿಸಿದ ಘಟನೆ ನಡೆದಿದೆ. ತಾಯಿ ಹೊಡೆದ ಏಟಿಗೆ ಮಗು ಸಾವಿಗೀಡಾಗಿರುವ ಭಯಾನಕ ಘಟನೆ ಮುಂಬೈನಲ್ಲಿ ನಡೆದಿದೆ. 22 ವರ್ಷದ ತಾಯಿ ಕೋಪಗೊಂಡು ಮಗುವಿಗೆ ಹೊಡೆದಿದ್ದಾಳೆ. 2 ವರ್ಷದ ಪುಟ್ಟ ಬಾಲಕಿ ತಲೆಗೆ ಬಿದ್ದ ಏಟಿನಿಂದ ಸಾವಿಗೀಡಾಗಿದೆ ಎಂಬುದು ವರದಿಗಳಿಂದ ತಿಳಿದು ಬಂದಿದೆ.

ಗರ್ಭಿಣಿಯಾಗಿರುವ ಮಹಿಳೆಯನ್ನು ವಿರಾರ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಶನಿವಾರ ರಾತ್ರಿ 8 ಗಂಟೆಯ ಸಮಯದಲ್ಲಿ ಘಟನೆ ನಡೆದಿದೆ ಎಂಬುದು ತಿಳಿದು ಬಂದಿದೆ. ಮಗು ನೀರಿನಲ್ಲಿ ಆಟವಾಡುತ್ತಿದ್ದಕ್ಕೆ ಕೋಪಗೊಂಡ ತಾಯಿ ನೇಹಾ ಸೋನಿ ಮಗುವಿಗೆ ಥಳಿಸಿದ್ದಾಳೆ. ಗಂಭೀರ ಏಟಿನ ಪರಿಣಾಮ ಮಗು ಸಾವಿಗೀಡಾಗಿದೆ.

ನೆರೆಯವರಿಗೆ ವಿಷಯ ತಿಳಿಯುತ್ತಿದ್ದಂತೆಯೇ ಮಗುವನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಗುವನ್ನು ನೆಲಕ್ಕೆ ಗುದ್ದಿರುವ ಪರಿಣಾಮ ಗಂಭೀರ ಸ್ಥಿತಿಯಾಗಿದ್ದು ಮಗು ಸಾವಿಗೀಡಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ. ತಲೆ ಮತ್ತು ಹೊಟ್ಟೆಯ ಭಾಗಕ್ಕೆ ಹೆಚ್ಚು ಪೆಟ್ಟು ಬಿದ್ದಿದೆ ಎಂಬುದು ಶವಪರೀಕ್ಷೆಯ ಬಳಿಕ ತಿಳಿದು ಬಂದಿದೆ.

ಮಗುವಿನ ತಂದೆ ಆಟೋರಿಕ್ಷಾ ಚಾಲಕನಾಗಿದ್ದು, ಆತ ಹೊರಗಡೆ ಹೋದ ಸಮಯದಲ್ಲಿ ಘಟನೆ ನಡೆದಿದೆ. ಮಗುವಿನ ತಾಯಿ ನೇಹಾ ಸೋನಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ:

Crime News: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಪ್ರೇಯಸಿಗೆ ಚಾಕುವಿನಿಂದ ಇರಿದು ತಾನೂ ಚುಚ್ಚಿಕೊಂಡ ಪ್ರಿಯತಮ

Crime News: ಚೆನ್ನೈನ ನರರೋಗ ತಜ್ಞ ಡಾ. ಸುಬ್ಬಯ್ಯ ಹತ್ಯೆ ಪ್ರಕರಣ; 7 ಆರೋಪಿಗಳಿಗೆ ಗಲ್ಲು ಶಿಕ್ಷೆ

(Mother angry with 2 year old daughter and beat her to death in Mumbai )

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ