AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand: ನವಜಾತ ಶಿಶುವನ್ನು ರೂ. 4.5 ಲಕ್ಷಕ್ಕೆ ಮಾರಾಟ ಮಾಡಿದ ತಾಯಿ!

ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ಗಂಡು ಮಗುವನ್ನು ಹುಟ್ಟಿದ ಕೂಡಲೇ ತಾಯಿ ಮಾರಾಟ ಮಾಡಿರುವ ಪ್ರಕರಣ ಬೆಳಕಿದೆ ಬಂದಿದೆ. ಈ ಪ್ರಕರಣದಲ್ಲಿ ನವಜಾತ ಶಿಶುವಿನ ತಾಯಿ ಆಶಾದೇವಿ ಸೇರಿದಂತೆ 11 ಮಂದಿಯನ್ನು ಬಂಧಿಸಲಾಗಿದೆ

Jharkhand: ನವಜಾತ ಶಿಶುವನ್ನು ರೂ. 4.5 ಲಕ್ಷಕ್ಕೆ ಮಾರಾಟ ಮಾಡಿದ ತಾಯಿ!
Mother sells new born baby for 4.5 lakhs in Jharkhand
ನಯನಾ ಎಸ್​ಪಿ
|

Updated on:Mar 24, 2023 | 4:53 PM

Share

ಜಾರ್ಖಂಡ್‌ನ ಛತ್ರಾ (Chatra) ಜಿಲ್ಲೆಯಲ್ಲಿ ಗಂಡು ಮಗುವನ್ನು ಹುಟ್ಟಿದ ಕೂಡಲೇ ತಾಯಿ ಮಾರಾಟ ಮಾಡಿರುವ ಪ್ರಕರಣ ಬೆಳಕಿದೆ ಬಂದಿದೆ. ಈ ಪ್ರಕರಣದಲ್ಲಿ ನವಜಾತ ಶಿಶುವಿನ (newborn baby) ತಾಯಿ ಆಶಾದೇವಿ ಸೇರಿದಂತೆ 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಅಬು ಇಮ್ರಾನ್ ಘಟನೆಯ ಬಗ್ಗೆ ತಿಳಿದ ನಂತರ, ಅವರು ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ರಾಕೇಶ್ ರಂಜನ್ ಅವರಿಗೆ ತಿಳಿಸಿದ್ದಾರೆ. ಪೊಲೀಸರು 24 ಗಂಟೆಗಳಲ್ಲಿ ಬೊಕಾರೊ ಜಿಲ್ಲೆಯಿಂದ ನವಜಾತ ಶಿಶುವನ್ನು ರಕ್ಷಿಸಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಅವಿನಾಶ್ ಕುಮಾರ್ ತಿಳಿಸಿದ್ದಾರೆ.

ಆಶಾದೇವಿ ಅವರು ಶನಿವಾರ (ಮಾರ್ಚ್ 18) ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಂಗಳವಾರ ನವಜಾತ ಶಿಶುವಿಲ್ಲದೆ ಛತ್ರದ ದಿಭಾ ಮೊಹಲ್ಲಾದಲ್ಲಿರುವ ಮನೆಗೆ ಬಂದರು, ಮಗು ಇಲ್ಲದ್ದನ್ನು ಕಂಡ ಸಂಬಂಧಿಕರಲ್ಲಿ ಸಂಶಯ ಮೂಡಿದೆ.

ಮಗುವಿನ ತಾಯಿ ಆಶಾ ದೇವಿಯನ್ನು ಬಂದಿಸಿದ ಪೊಲೀಸರಿಗೆ ಡಿಂಪಲ್ ದೇವಿ ಎಂದು ಗುರುತಿಸಲಾದ ‘ಸಾಹಿಯಾ ದೀದಿ’ಗೆ ಕರೆದೊಯ್ಯಿತು. ಡಿಂಪಲ್ ದೇವಿ ನೀಡಿದ ಲೀಡ್ ಆಧಾರದ ಮೇಲೆ ಪೊಲೀಸರು ಇತರ ಆರೋಪಿಗಳನ್ನು ಬಂಧಿಸಿದ್ದಾರೆ ಮತ್ತು ಬೊಕಾರೊದಿಂದ ಮಗುವನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಶಾಲೆಯ ಪ್ಯೂನ್ ಬಂಧನ

ತನಿಖೆಯಲ್ಲಿ ಹಜಾರಿಬಾಗ್ ಜಿಲ್ಲೆಯ ಬಡ್ಕಗಾಂವ್ ಗ್ರಾಮದ ದಂಪತಿಗಳು ನವಜಾತ ಶಿಶುವಿಗೆ 4.5 ಲಕ್ಷ ರೂ.ಗೆ ಚಾತ್ರಾ ಮತ್ತು ಬೊಕಾರೊದ ಇಬ್ಬರು ದಲ್ಲಾಳಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ. ಇದರಲ್ಲಿ ರೂ. 1 ಲಕ್ಷವನ್ನು ಆಶಾ ದೇವಿಗೆ ನೀಡಿ ಉಳಿದ ರೂ. 3.5 ಲಕ್ಷವನ್ನು ದಲ್ಲಾಳಿಗಳು ತೆಗೆದುಕೊಂಡಿದ್ದಾರೆ.

ಸದರ್ ಆಸ್ಪತ್ರೆಯ ಉಪ ಅಧೀಕ್ಷಕ ಡಾ.ಮನೀಷ್ ಲಾಲ್ ಹೇಳಿಕೆ ಮೇರೆಗೆ ಛತ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 4:53 pm, Fri, 24 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ