Jharkhand: ನವಜಾತ ಶಿಶುವನ್ನು ರೂ. 4.5 ಲಕ್ಷಕ್ಕೆ ಮಾರಾಟ ಮಾಡಿದ ತಾಯಿ!

ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ಗಂಡು ಮಗುವನ್ನು ಹುಟ್ಟಿದ ಕೂಡಲೇ ತಾಯಿ ಮಾರಾಟ ಮಾಡಿರುವ ಪ್ರಕರಣ ಬೆಳಕಿದೆ ಬಂದಿದೆ. ಈ ಪ್ರಕರಣದಲ್ಲಿ ನವಜಾತ ಶಿಶುವಿನ ತಾಯಿ ಆಶಾದೇವಿ ಸೇರಿದಂತೆ 11 ಮಂದಿಯನ್ನು ಬಂಧಿಸಲಾಗಿದೆ

Jharkhand: ನವಜಾತ ಶಿಶುವನ್ನು ರೂ. 4.5 ಲಕ್ಷಕ್ಕೆ ಮಾರಾಟ ಮಾಡಿದ ತಾಯಿ!
Mother sells new born baby for 4.5 lakhs in Jharkhand
Follow us
|

Updated on:Mar 24, 2023 | 4:53 PM

ಜಾರ್ಖಂಡ್‌ನ ಛತ್ರಾ (Chatra) ಜಿಲ್ಲೆಯಲ್ಲಿ ಗಂಡು ಮಗುವನ್ನು ಹುಟ್ಟಿದ ಕೂಡಲೇ ತಾಯಿ ಮಾರಾಟ ಮಾಡಿರುವ ಪ್ರಕರಣ ಬೆಳಕಿದೆ ಬಂದಿದೆ. ಈ ಪ್ರಕರಣದಲ್ಲಿ ನವಜಾತ ಶಿಶುವಿನ (newborn baby) ತಾಯಿ ಆಶಾದೇವಿ ಸೇರಿದಂತೆ 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಅಬು ಇಮ್ರಾನ್ ಘಟನೆಯ ಬಗ್ಗೆ ತಿಳಿದ ನಂತರ, ಅವರು ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ರಾಕೇಶ್ ರಂಜನ್ ಅವರಿಗೆ ತಿಳಿಸಿದ್ದಾರೆ. ಪೊಲೀಸರು 24 ಗಂಟೆಗಳಲ್ಲಿ ಬೊಕಾರೊ ಜಿಲ್ಲೆಯಿಂದ ನವಜಾತ ಶಿಶುವನ್ನು ರಕ್ಷಿಸಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಅವಿನಾಶ್ ಕುಮಾರ್ ತಿಳಿಸಿದ್ದಾರೆ.

ಆಶಾದೇವಿ ಅವರು ಶನಿವಾರ (ಮಾರ್ಚ್ 18) ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಂಗಳವಾರ ನವಜಾತ ಶಿಶುವಿಲ್ಲದೆ ಛತ್ರದ ದಿಭಾ ಮೊಹಲ್ಲಾದಲ್ಲಿರುವ ಮನೆಗೆ ಬಂದರು, ಮಗು ಇಲ್ಲದ್ದನ್ನು ಕಂಡ ಸಂಬಂಧಿಕರಲ್ಲಿ ಸಂಶಯ ಮೂಡಿದೆ.

ಮಗುವಿನ ತಾಯಿ ಆಶಾ ದೇವಿಯನ್ನು ಬಂದಿಸಿದ ಪೊಲೀಸರಿಗೆ ಡಿಂಪಲ್ ದೇವಿ ಎಂದು ಗುರುತಿಸಲಾದ ‘ಸಾಹಿಯಾ ದೀದಿ’ಗೆ ಕರೆದೊಯ್ಯಿತು. ಡಿಂಪಲ್ ದೇವಿ ನೀಡಿದ ಲೀಡ್ ಆಧಾರದ ಮೇಲೆ ಪೊಲೀಸರು ಇತರ ಆರೋಪಿಗಳನ್ನು ಬಂಧಿಸಿದ್ದಾರೆ ಮತ್ತು ಬೊಕಾರೊದಿಂದ ಮಗುವನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಶಾಲೆಯ ಪ್ಯೂನ್ ಬಂಧನ

ತನಿಖೆಯಲ್ಲಿ ಹಜಾರಿಬಾಗ್ ಜಿಲ್ಲೆಯ ಬಡ್ಕಗಾಂವ್ ಗ್ರಾಮದ ದಂಪತಿಗಳು ನವಜಾತ ಶಿಶುವಿಗೆ 4.5 ಲಕ್ಷ ರೂ.ಗೆ ಚಾತ್ರಾ ಮತ್ತು ಬೊಕಾರೊದ ಇಬ್ಬರು ದಲ್ಲಾಳಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ. ಇದರಲ್ಲಿ ರೂ. 1 ಲಕ್ಷವನ್ನು ಆಶಾ ದೇವಿಗೆ ನೀಡಿ ಉಳಿದ ರೂ. 3.5 ಲಕ್ಷವನ್ನು ದಲ್ಲಾಳಿಗಳು ತೆಗೆದುಕೊಂಡಿದ್ದಾರೆ.

ಸದರ್ ಆಸ್ಪತ್ರೆಯ ಉಪ ಅಧೀಕ್ಷಕ ಡಾ.ಮನೀಷ್ ಲಾಲ್ ಹೇಳಿಕೆ ಮೇರೆಗೆ ಛತ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 4:53 pm, Fri, 24 March 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ