10 ತಿಂಗಳ ಮಗುವನ್ನ ಕೊಂದು, ತಾಯಿಯೂ ಆತ್ಮಹತ್ಯೆಗೆ ಶರಣು!

ಚಿತ್ರದುರ್ಗ: ಹತ್ತು ತಿಂಗಳ ಹೆಣ್ಣು ಮಗುವನ್ನು ಸಾಯಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಳಲ್ಕೆರೆ ತಾಲೂಕಿನ ಐನಳ್ಳಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ನೀರಿನ ಟಬ್​ನಲ್ಲಿ ಮುಳುಗಿಸಿ ಹತ್ಯೆ ಮಾಡಿ ಬಳಿಕ ತಾಯಿ ಆಶಾಬಾಯಿ ನೇಣಿಗೆ ಶರಣಾಗಿದ್ದಾಳೆ. ಎರಡು ವರ್ಷದ ಹಿಂದಷ್ಟೇ ಹೊಳಲ್ಕೆರೆಯ ಲಂಬಾಣಿಹಟ್ಟಿ ನಿವಾಸಿ ಹೇಮಂತ್ ಜತೆ ಪ್ರೇಮವಿವಾಹವಾಗಿದ್ದರು. ಹೆರಿಗೆ ಬಳಿಕ ಆಶಾಬಾಯಿ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹೀಗಾಗಿ ನೋವು, ಅನಾರೋಗ್ಯ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್​ ಬರೆದಿದ್ದಾರೆ. ತಾನು ಸತ್ತ ಮೇಲೆ ಮಗು […]

10 ತಿಂಗಳ ಮಗುವನ್ನ ಕೊಂದು, ತಾಯಿಯೂ ಆತ್ಮಹತ್ಯೆಗೆ ಶರಣು!
ಸಾಧು ಶ್ರೀನಾಥ್​

Updated on: Feb 25, 2020 | 10:25 AM

ಚಿತ್ರದುರ್ಗ: ಹತ್ತು ತಿಂಗಳ ಹೆಣ್ಣು ಮಗುವನ್ನು ಸಾಯಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಳಲ್ಕೆರೆ ತಾಲೂಕಿನ ಐನಳ್ಳಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ನೀರಿನ ಟಬ್​ನಲ್ಲಿ ಮುಳುಗಿಸಿ ಹತ್ಯೆ ಮಾಡಿ ಬಳಿಕ ತಾಯಿ ಆಶಾಬಾಯಿ ನೇಣಿಗೆ ಶರಣಾಗಿದ್ದಾಳೆ.

ಎರಡು ವರ್ಷದ ಹಿಂದಷ್ಟೇ ಹೊಳಲ್ಕೆರೆಯ ಲಂಬಾಣಿಹಟ್ಟಿ ನಿವಾಸಿ ಹೇಮಂತ್ ಜತೆ ಪ್ರೇಮವಿವಾಹವಾಗಿದ್ದರು. ಹೆರಿಗೆ ಬಳಿಕ ಆಶಾಬಾಯಿ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹೀಗಾಗಿ ನೋವು, ಅನಾರೋಗ್ಯ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್​ ಬರೆದಿದ್ದಾರೆ.

ತಾನು ಸತ್ತ ಮೇಲೆ ಮಗು ಅನಾಥ ಆಗುತ್ತದೆಂಬ ಕಾರಣಕ್ಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗುವನ್ನು ಹತ್ಯೆ ಮಾಡಿ ಬಳಿಕ ಆಶಾಬಾಯಿ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ್ದಾಳೆ. ಘಟನೆ ಸಂಬಂಧ ಚಿಕ್ಕಜಾಜೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:41 am, Tue, 25 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us