AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 39 ದಿನಗಳ ಶಿಶುವನ್ನು 14ನೇ ಮಹಡಿಯಿಂದ ಕೆಳಗೆಸೆದು ಕೊಂದ ತಾಯಿ!

ಮಗುವಿನ ತಾಯಿಗೆ ಕಿವಿ ಕೇಳಿಸುತ್ತಿರಲಿಲ್ಲ. ಆ ತಾಯಿ 14ನೇ ಮಹಡಿಯಿಂದ ತನ್ನ ಮಗುವನ್ನು ಹೊರಗೆ ಎಸೆದಿದ್ದಾರೆ. ಮಗುವಿನ ತಾಯಿಯ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ. ಆದರೆ, ಈ ಕೃತ್ಯದ ಹಿಂದಿನ ಉದ್ದೇಶ ಇನ್ನೂ ಖಚಿತವಾಗಿಲ್ಲ.

Crime News: 39 ದಿನಗಳ ಶಿಶುವನ್ನು 14ನೇ ಮಹಡಿಯಿಂದ ಕೆಳಗೆಸೆದು ಕೊಂದ ತಾಯಿ!
ಸಾಂದರ್ಭಿಕ ಚಿತ್ರImage Credit source: pexels.com
ಸುಷ್ಮಾ ಚಕ್ರೆ
|

Updated on: Sep 23, 2023 | 12:28 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ ಅಪಾರ್ಟ್​ವೊಂದರ 14ನೇ ಮಹಡಿಯಿಂದ ತಾಯಿಯೊಬ್ಬರು ತನ್ನ 39 ದಿನಗಳ ಶಿಶುವನ್ನು ಕೆಳಗೆ ಬಿಸಾಡಿರುವ ಭಯಾನಕ ಘಟನೆ ನಡೆದಿದೆ. ಮುಂಬೈ ಉಪನಗರ ಮುಲುಂಡ್‌ನಲ್ಲಿರುವ ಅಪಾರ್ಟ್​ಮೆಂಟ್​ನ 14ನೇ ಮಹಡಿಯಲ್ಲಿ ವಾಸವಾಗಿದ್ದ ಅಂಗವಿಕಲ ತಾಯಿ ತನ್ನನ್ನು ತನ್ನ ಗಂಡನ ಮನೆಯವರು ಮನೆಯಿಂದ ಹೊರಹಾಕಿದ ಹಿನ್ನೆಲೆಯಲ್ಲಿ 39 ದಿನಗಳ ಹೆಣ್ಣು ಮಗುವನ್ನು ಕೆಳಗೆ ಎಸೆದು ಕೊಂದಿದ್ದಾರೆ.

ಗುರುವಾರ ಸಂಜೆ ಮುಲುಂಡ್ ವೆಸ್ಟ್‌ನ ಜಾವೆರ್ ರಸ್ತೆಯಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆ ಮಗುವಿನ ತಾಯಿಗೆ ಕಿವಿ ಕೇಳಿಸುತ್ತಿರಲಿಲ್ಲ. ಕಿವುಡುತನದಿಂದ ಬಳಲುತ್ತಿದ್ದ ಆ ತಾಯಿ ತನ್ನ ಮಗುವನ್ನು ಬಾಲ್ಕನಿಯ ಕಿಟಕಿಯಿಂದ ಹೊರಗೆ ಎಸೆದಿದ್ದಾರೆ. ತಕ್ಷಣ ಕೆಳಗೆ ಓಡಿದ ಆ ಮಗುವಿನ ಚಿಕ್ಕಪ್ಪ ಆ ಶಿಶುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಆಸ್ಪತ್ರೆಗೆ ಬರುವ ಮುನ್ನವೇ ಆ ಮಗು ಮೃತಪಟ್ಟಿತ್ತು.

ಇದನ್ನೂ ಓದಿ: ಗಂಡ, ಮಕ್ಕಳೆದುರೇ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ಮಗುವಿನ ತಾಯಿಯ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ. ಆದರೆ, ಈ ಕೃತ್ಯದ ಹಿಂದಿನ ಉದ್ದೇಶ ಇನ್ನೂ ಖಚಿತವಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ವಿಚಿತ್ರ ಸಂಗತಿಯೆಂದರೆ, ಅದೇ ಮಹಿಳೆಯ 7 ತಿಂಗಳ ಮಗ 2022ರ ಜುಲೈನಲ್ಲಿ ಊಟ ಮಾಡುವಾಗ ಉಸಿರುಗಟ್ಟಿ ಸಾವನ್ನಪ್ಪಿದ್ದ. ಇದೀಗ ಆ ಪ್ರಕರಣವನ್ನು ಕೂಡ ಪೊಲೀಸರು ಮರುತನಿಖೆ ಮಾಡುವ ಸಾಧ್ಯತೆಯಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ