AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 39 ದಿನಗಳ ಶಿಶುವನ್ನು 14ನೇ ಮಹಡಿಯಿಂದ ಕೆಳಗೆಸೆದು ಕೊಂದ ತಾಯಿ!

ಮಗುವಿನ ತಾಯಿಗೆ ಕಿವಿ ಕೇಳಿಸುತ್ತಿರಲಿಲ್ಲ. ಆ ತಾಯಿ 14ನೇ ಮಹಡಿಯಿಂದ ತನ್ನ ಮಗುವನ್ನು ಹೊರಗೆ ಎಸೆದಿದ್ದಾರೆ. ಮಗುವಿನ ತಾಯಿಯ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ. ಆದರೆ, ಈ ಕೃತ್ಯದ ಹಿಂದಿನ ಉದ್ದೇಶ ಇನ್ನೂ ಖಚಿತವಾಗಿಲ್ಲ.

Crime News: 39 ದಿನಗಳ ಶಿಶುವನ್ನು 14ನೇ ಮಹಡಿಯಿಂದ ಕೆಳಗೆಸೆದು ಕೊಂದ ತಾಯಿ!
ಸಾಂದರ್ಭಿಕ ಚಿತ್ರImage Credit source: pexels.com
ಸುಷ್ಮಾ ಚಕ್ರೆ
|

Updated on: Sep 23, 2023 | 12:28 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ ಅಪಾರ್ಟ್​ವೊಂದರ 14ನೇ ಮಹಡಿಯಿಂದ ತಾಯಿಯೊಬ್ಬರು ತನ್ನ 39 ದಿನಗಳ ಶಿಶುವನ್ನು ಕೆಳಗೆ ಬಿಸಾಡಿರುವ ಭಯಾನಕ ಘಟನೆ ನಡೆದಿದೆ. ಮುಂಬೈ ಉಪನಗರ ಮುಲುಂಡ್‌ನಲ್ಲಿರುವ ಅಪಾರ್ಟ್​ಮೆಂಟ್​ನ 14ನೇ ಮಹಡಿಯಲ್ಲಿ ವಾಸವಾಗಿದ್ದ ಅಂಗವಿಕಲ ತಾಯಿ ತನ್ನನ್ನು ತನ್ನ ಗಂಡನ ಮನೆಯವರು ಮನೆಯಿಂದ ಹೊರಹಾಕಿದ ಹಿನ್ನೆಲೆಯಲ್ಲಿ 39 ದಿನಗಳ ಹೆಣ್ಣು ಮಗುವನ್ನು ಕೆಳಗೆ ಎಸೆದು ಕೊಂದಿದ್ದಾರೆ.

ಗುರುವಾರ ಸಂಜೆ ಮುಲುಂಡ್ ವೆಸ್ಟ್‌ನ ಜಾವೆರ್ ರಸ್ತೆಯಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆ ಮಗುವಿನ ತಾಯಿಗೆ ಕಿವಿ ಕೇಳಿಸುತ್ತಿರಲಿಲ್ಲ. ಕಿವುಡುತನದಿಂದ ಬಳಲುತ್ತಿದ್ದ ಆ ತಾಯಿ ತನ್ನ ಮಗುವನ್ನು ಬಾಲ್ಕನಿಯ ಕಿಟಕಿಯಿಂದ ಹೊರಗೆ ಎಸೆದಿದ್ದಾರೆ. ತಕ್ಷಣ ಕೆಳಗೆ ಓಡಿದ ಆ ಮಗುವಿನ ಚಿಕ್ಕಪ್ಪ ಆ ಶಿಶುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಆಸ್ಪತ್ರೆಗೆ ಬರುವ ಮುನ್ನವೇ ಆ ಮಗು ಮೃತಪಟ್ಟಿತ್ತು.

ಇದನ್ನೂ ಓದಿ: ಗಂಡ, ಮಕ್ಕಳೆದುರೇ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ಮಗುವಿನ ತಾಯಿಯ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ. ಆದರೆ, ಈ ಕೃತ್ಯದ ಹಿಂದಿನ ಉದ್ದೇಶ ಇನ್ನೂ ಖಚಿತವಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ವಿಚಿತ್ರ ಸಂಗತಿಯೆಂದರೆ, ಅದೇ ಮಹಿಳೆಯ 7 ತಿಂಗಳ ಮಗ 2022ರ ಜುಲೈನಲ್ಲಿ ಊಟ ಮಾಡುವಾಗ ಉಸಿರುಗಟ್ಟಿ ಸಾವನ್ನಪ್ಪಿದ್ದ. ಇದೀಗ ಆ ಪ್ರಕರಣವನ್ನು ಕೂಡ ಪೊಲೀಸರು ಮರುತನಿಖೆ ಮಾಡುವ ಸಾಧ್ಯತೆಯಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!