AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ: ತಾಯಿಯ ಜೊತೆ 2 ವರ್ಷದ ಮಗುವನ್ನೂ ಹೊರದಬ್ಬಿದ ಕಿರಾತಕರು..

ಬೆಂಗಳೂರು: 2 ವರ್ಷದ ಮಗುವಿನ ಜೊತೆ ಮಹಿಳೆಯನ್ನು ಹೊರಹಾಕಿ ಪತಿ ವರದಕ್ಷಿಣೆ ಕಿರುಕುಳ ನೀಡಿರುವ ಅಮಾನವೀಯ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಪತಿಯ ಕುಟುಂಬಸ್ಥರ ವಿರುದ್ಧ ಪತ್ನಿ ವಾದಿಕಾ ಜತ್ಲಾ ದೂರು ನೀಡಿದ್ದಾರೆ. ನಿನ್ನೆ ಇದೇ ರೀತಿ ವರದಕ್ಷಿಣೆಗಾಗಿ ಪತ್ನಿಯನ್ನೇ ಸುಡಲು ಯತ್ನಿಸಿದ್ದ ಪತಿ ಬಗ್ಗೆ ಕೇಳಿದ್ವಿ. ಈಗ ಇಂತಹದ್ದೇ ಮತ್ತೊಂದು ಘಟನೆ ಮರುಕಳಿಸಿದೆ. ಪತಿರಾಯ ಚಳಿ, ಮಳೆಯನ್ನು ಲೆಕ್ಕಿಸದೆ ತನ್ನ 2 ವರ್ಷದ ಪುಟ್ಟ ಕಂದಮ್ಮನ ಜೊತೆ ತಾಯಿಯನ್ನೂ ಮನೆಯಿಂದ ಆಚೆ ಹಾಕಿದ್ದಾನೆ. ಹೈದರಾಬಾದ್ ಮೂಲದ ಈ […]

ವರದಕ್ಷಿಣೆ ಕಿರುಕುಳ: ತಾಯಿಯ ಜೊತೆ 2 ವರ್ಷದ ಮಗುವನ್ನೂ ಹೊರದಬ್ಬಿದ ಕಿರಾತಕರು..
ಆಯೇಷಾ ಬಾನು
|

Updated on:Oct 11, 2020 | 7:03 AM

Share

ಬೆಂಗಳೂರು: 2 ವರ್ಷದ ಮಗುವಿನ ಜೊತೆ ಮಹಿಳೆಯನ್ನು ಹೊರಹಾಕಿ ಪತಿ ವರದಕ್ಷಿಣೆ ಕಿರುಕುಳ ನೀಡಿರುವ ಅಮಾನವೀಯ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಪತಿಯ ಕುಟುಂಬಸ್ಥರ ವಿರುದ್ಧ ಪತ್ನಿ ವಾದಿಕಾ ಜತ್ಲಾ ದೂರು ನೀಡಿದ್ದಾರೆ.

ನಿನ್ನೆ ಇದೇ ರೀತಿ ವರದಕ್ಷಿಣೆಗಾಗಿ ಪತ್ನಿಯನ್ನೇ ಸುಡಲು ಯತ್ನಿಸಿದ್ದ ಪತಿ ಬಗ್ಗೆ ಕೇಳಿದ್ವಿ. ಈಗ ಇಂತಹದ್ದೇ ಮತ್ತೊಂದು ಘಟನೆ ಮರುಕಳಿಸಿದೆ. ಪತಿರಾಯ ಚಳಿ, ಮಳೆಯನ್ನು ಲೆಕ್ಕಿಸದೆ ತನ್ನ 2 ವರ್ಷದ ಪುಟ್ಟ ಕಂದಮ್ಮನ ಜೊತೆ ತಾಯಿಯನ್ನೂ ಮನೆಯಿಂದ ಆಚೆ ಹಾಕಿದ್ದಾನೆ. ಹೈದರಾಬಾದ್ ಮೂಲದ ಈ ಕುಟುಂಬ ಬೆಂಗಳೂರಲ್ಲಿ ನೆಲೆಸಿದೆ. ಕೆಲ ವರ್ಷಗಳ ಹಿಂದಷ್ಟೇ ಹರಿಪ್ರಸಾದ್ ತೋಟಾ ಜತೆಗೆ ವಾದಿಕಾ ಜತ್ಲಾ ವಿವಾಹವಾಗಿತ್ತು. ಕೆಲ ತಿಂಗಳ ಬಳಿಕ ಈ ಕುಟುಂಬ ಅಮೆರಿಕದಿಂದ ಬೆಂಗಳೂರಿಗೆ ಬಂದು ನೆಲೆಸಿತ್ತು.

ಇವರಿಗೆ 2 ವರ್ಷದ ಮಗುವಿದೆ. ಆದರೆ ವಾದಿಕಾ ಜತ್ಲಾಗೆ ಪತಿ ಹಾಗೂ ಅವನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಅಲ್ಲದೆ ಪತಿ ಹರಿಪ್ರಸಾದ್ ಪತ್ನಿಯನ್ನು ಅನುಮಾನಿಸುತ್ತಿದ್ದ. 3 ತಿಂಗಳ ಹಿಂದೆ ಪತ್ನಿ ಮತ್ತು ಮಗುವನ್ನು ಬಿಟ್ಟುಹೋಗಿದ್ದ. ಆದರೆ ಈಗ ತಾಯಿ, ಮಗುವಿಗೆ ಆಹಾರ ನೀಡದೆ ಮನೆಯಿಂದ ಹೊರ ಹಾಕಿ ಅಮಾನವೀಯವಾಗಿ ವರ್ತಿಸಿದ್ದಾರೆ. ಕೊರೆಯುವ ಚಳಿಯಲ್ಲಿ ಮನೆ ಹೊರಭಾಗದ ಕಾರಿಡಾರ್ ನಲ್ಲೆ ಮಗು ಸಮೇತ ಟೆಕ್ಕಿ ಪತ್ನಿ ರಾತ್ರಿ ಕಳೆದಿದ್ದಾರೆ. ಮಾವ ಸುದರ್ಶನ್ ತೋಟಾ, ಅತ್ತೆ ಸುಗುತಾದೇವಿ ಸೇರಿದಂತೆ ನಾಲ್ವರ ವಿರುದ್ಧ ವಾದಿಕಾ ರಾಮಮೂರ್ತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ವರದಕ್ಷಿಣೆ ಕಿರುಕುಳ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ

Published On - 7:01 am, Sun, 11 October 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ