AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ: ತಾಯಿಯ ಜೊತೆ 2 ವರ್ಷದ ಮಗುವನ್ನೂ ಹೊರದಬ್ಬಿದ ಕಿರಾತಕರು..

ಬೆಂಗಳೂರು: 2 ವರ್ಷದ ಮಗುವಿನ ಜೊತೆ ಮಹಿಳೆಯನ್ನು ಹೊರಹಾಕಿ ಪತಿ ವರದಕ್ಷಿಣೆ ಕಿರುಕುಳ ನೀಡಿರುವ ಅಮಾನವೀಯ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಪತಿಯ ಕುಟುಂಬಸ್ಥರ ವಿರುದ್ಧ ಪತ್ನಿ ವಾದಿಕಾ ಜತ್ಲಾ ದೂರು ನೀಡಿದ್ದಾರೆ. ನಿನ್ನೆ ಇದೇ ರೀತಿ ವರದಕ್ಷಿಣೆಗಾಗಿ ಪತ್ನಿಯನ್ನೇ ಸುಡಲು ಯತ್ನಿಸಿದ್ದ ಪತಿ ಬಗ್ಗೆ ಕೇಳಿದ್ವಿ. ಈಗ ಇಂತಹದ್ದೇ ಮತ್ತೊಂದು ಘಟನೆ ಮರುಕಳಿಸಿದೆ. ಪತಿರಾಯ ಚಳಿ, ಮಳೆಯನ್ನು ಲೆಕ್ಕಿಸದೆ ತನ್ನ 2 ವರ್ಷದ ಪುಟ್ಟ ಕಂದಮ್ಮನ ಜೊತೆ ತಾಯಿಯನ್ನೂ ಮನೆಯಿಂದ ಆಚೆ ಹಾಕಿದ್ದಾನೆ. ಹೈದರಾಬಾದ್ ಮೂಲದ ಈ […]

ವರದಕ್ಷಿಣೆ ಕಿರುಕುಳ: ತಾಯಿಯ ಜೊತೆ 2 ವರ್ಷದ ಮಗುವನ್ನೂ ಹೊರದಬ್ಬಿದ ಕಿರಾತಕರು..
ಆಯೇಷಾ ಬಾನು
|

Updated on:Oct 11, 2020 | 7:03 AM

Share

ಬೆಂಗಳೂರು: 2 ವರ್ಷದ ಮಗುವಿನ ಜೊತೆ ಮಹಿಳೆಯನ್ನು ಹೊರಹಾಕಿ ಪತಿ ವರದಕ್ಷಿಣೆ ಕಿರುಕುಳ ನೀಡಿರುವ ಅಮಾನವೀಯ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಪತಿಯ ಕುಟುಂಬಸ್ಥರ ವಿರುದ್ಧ ಪತ್ನಿ ವಾದಿಕಾ ಜತ್ಲಾ ದೂರು ನೀಡಿದ್ದಾರೆ.

ನಿನ್ನೆ ಇದೇ ರೀತಿ ವರದಕ್ಷಿಣೆಗಾಗಿ ಪತ್ನಿಯನ್ನೇ ಸುಡಲು ಯತ್ನಿಸಿದ್ದ ಪತಿ ಬಗ್ಗೆ ಕೇಳಿದ್ವಿ. ಈಗ ಇಂತಹದ್ದೇ ಮತ್ತೊಂದು ಘಟನೆ ಮರುಕಳಿಸಿದೆ. ಪತಿರಾಯ ಚಳಿ, ಮಳೆಯನ್ನು ಲೆಕ್ಕಿಸದೆ ತನ್ನ 2 ವರ್ಷದ ಪುಟ್ಟ ಕಂದಮ್ಮನ ಜೊತೆ ತಾಯಿಯನ್ನೂ ಮನೆಯಿಂದ ಆಚೆ ಹಾಕಿದ್ದಾನೆ. ಹೈದರಾಬಾದ್ ಮೂಲದ ಈ ಕುಟುಂಬ ಬೆಂಗಳೂರಲ್ಲಿ ನೆಲೆಸಿದೆ. ಕೆಲ ವರ್ಷಗಳ ಹಿಂದಷ್ಟೇ ಹರಿಪ್ರಸಾದ್ ತೋಟಾ ಜತೆಗೆ ವಾದಿಕಾ ಜತ್ಲಾ ವಿವಾಹವಾಗಿತ್ತು. ಕೆಲ ತಿಂಗಳ ಬಳಿಕ ಈ ಕುಟುಂಬ ಅಮೆರಿಕದಿಂದ ಬೆಂಗಳೂರಿಗೆ ಬಂದು ನೆಲೆಸಿತ್ತು.

ಇವರಿಗೆ 2 ವರ್ಷದ ಮಗುವಿದೆ. ಆದರೆ ವಾದಿಕಾ ಜತ್ಲಾಗೆ ಪತಿ ಹಾಗೂ ಅವನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಅಲ್ಲದೆ ಪತಿ ಹರಿಪ್ರಸಾದ್ ಪತ್ನಿಯನ್ನು ಅನುಮಾನಿಸುತ್ತಿದ್ದ. 3 ತಿಂಗಳ ಹಿಂದೆ ಪತ್ನಿ ಮತ್ತು ಮಗುವನ್ನು ಬಿಟ್ಟುಹೋಗಿದ್ದ. ಆದರೆ ಈಗ ತಾಯಿ, ಮಗುವಿಗೆ ಆಹಾರ ನೀಡದೆ ಮನೆಯಿಂದ ಹೊರ ಹಾಕಿ ಅಮಾನವೀಯವಾಗಿ ವರ್ತಿಸಿದ್ದಾರೆ. ಕೊರೆಯುವ ಚಳಿಯಲ್ಲಿ ಮನೆ ಹೊರಭಾಗದ ಕಾರಿಡಾರ್ ನಲ್ಲೆ ಮಗು ಸಮೇತ ಟೆಕ್ಕಿ ಪತ್ನಿ ರಾತ್ರಿ ಕಳೆದಿದ್ದಾರೆ. ಮಾವ ಸುದರ್ಶನ್ ತೋಟಾ, ಅತ್ತೆ ಸುಗುತಾದೇವಿ ಸೇರಿದಂತೆ ನಾಲ್ವರ ವಿರುದ್ಧ ವಾದಿಕಾ ರಾಮಮೂರ್ತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ವರದಕ್ಷಿಣೆ ಕಿರುಕುಳ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ

Published On - 7:01 am, Sun, 11 October 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ