AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ: ತಾಯಿಯ ಜೊತೆ 2 ವರ್ಷದ ಮಗುವನ್ನೂ ಹೊರದಬ್ಬಿದ ಕಿರಾತಕರು..

ಬೆಂಗಳೂರು: 2 ವರ್ಷದ ಮಗುವಿನ ಜೊತೆ ಮಹಿಳೆಯನ್ನು ಹೊರಹಾಕಿ ಪತಿ ವರದಕ್ಷಿಣೆ ಕಿರುಕುಳ ನೀಡಿರುವ ಅಮಾನವೀಯ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಪತಿಯ ಕುಟುಂಬಸ್ಥರ ವಿರುದ್ಧ ಪತ್ನಿ ವಾದಿಕಾ ಜತ್ಲಾ ದೂರು ನೀಡಿದ್ದಾರೆ. ನಿನ್ನೆ ಇದೇ ರೀತಿ ವರದಕ್ಷಿಣೆಗಾಗಿ ಪತ್ನಿಯನ್ನೇ ಸುಡಲು ಯತ್ನಿಸಿದ್ದ ಪತಿ ಬಗ್ಗೆ ಕೇಳಿದ್ವಿ. ಈಗ ಇಂತಹದ್ದೇ ಮತ್ತೊಂದು ಘಟನೆ ಮರುಕಳಿಸಿದೆ. ಪತಿರಾಯ ಚಳಿ, ಮಳೆಯನ್ನು ಲೆಕ್ಕಿಸದೆ ತನ್ನ 2 ವರ್ಷದ ಪುಟ್ಟ ಕಂದಮ್ಮನ ಜೊತೆ ತಾಯಿಯನ್ನೂ ಮನೆಯಿಂದ ಆಚೆ ಹಾಕಿದ್ದಾನೆ. ಹೈದರಾಬಾದ್ ಮೂಲದ ಈ […]

ವರದಕ್ಷಿಣೆ ಕಿರುಕುಳ: ತಾಯಿಯ ಜೊತೆ 2 ವರ್ಷದ ಮಗುವನ್ನೂ ಹೊರದಬ್ಬಿದ ಕಿರಾತಕರು..
ಆಯೇಷಾ ಬಾನು
ಆಯೇಷಾ ಬಾನು|

Updated on:Oct 11, 2020 | 7:03 AM

Share

ಬೆಂಗಳೂರು: 2 ವರ್ಷದ ಮಗುವಿನ ಜೊತೆ ಮಹಿಳೆಯನ್ನು ಹೊರಹಾಕಿ ಪತಿ ವರದಕ್ಷಿಣೆ ಕಿರುಕುಳ ನೀಡಿರುವ ಅಮಾನವೀಯ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಪತಿಯ ಕುಟುಂಬಸ್ಥರ ವಿರುದ್ಧ ಪತ್ನಿ ವಾದಿಕಾ ಜತ್ಲಾ ದೂರು ನೀಡಿದ್ದಾರೆ.

ನಿನ್ನೆ ಇದೇ ರೀತಿ ವರದಕ್ಷಿಣೆಗಾಗಿ ಪತ್ನಿಯನ್ನೇ ಸುಡಲು ಯತ್ನಿಸಿದ್ದ ಪತಿ ಬಗ್ಗೆ ಕೇಳಿದ್ವಿ. ಈಗ ಇಂತಹದ್ದೇ ಮತ್ತೊಂದು ಘಟನೆ ಮರುಕಳಿಸಿದೆ. ಪತಿರಾಯ ಚಳಿ, ಮಳೆಯನ್ನು ಲೆಕ್ಕಿಸದೆ ತನ್ನ 2 ವರ್ಷದ ಪುಟ್ಟ ಕಂದಮ್ಮನ ಜೊತೆ ತಾಯಿಯನ್ನೂ ಮನೆಯಿಂದ ಆಚೆ ಹಾಕಿದ್ದಾನೆ. ಹೈದರಾಬಾದ್ ಮೂಲದ ಈ ಕುಟುಂಬ ಬೆಂಗಳೂರಲ್ಲಿ ನೆಲೆಸಿದೆ. ಕೆಲ ವರ್ಷಗಳ ಹಿಂದಷ್ಟೇ ಹರಿಪ್ರಸಾದ್ ತೋಟಾ ಜತೆಗೆ ವಾದಿಕಾ ಜತ್ಲಾ ವಿವಾಹವಾಗಿತ್ತು. ಕೆಲ ತಿಂಗಳ ಬಳಿಕ ಈ ಕುಟುಂಬ ಅಮೆರಿಕದಿಂದ ಬೆಂಗಳೂರಿಗೆ ಬಂದು ನೆಲೆಸಿತ್ತು.

ಇವರಿಗೆ 2 ವರ್ಷದ ಮಗುವಿದೆ. ಆದರೆ ವಾದಿಕಾ ಜತ್ಲಾಗೆ ಪತಿ ಹಾಗೂ ಅವನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಅಲ್ಲದೆ ಪತಿ ಹರಿಪ್ರಸಾದ್ ಪತ್ನಿಯನ್ನು ಅನುಮಾನಿಸುತ್ತಿದ್ದ. 3 ತಿಂಗಳ ಹಿಂದೆ ಪತ್ನಿ ಮತ್ತು ಮಗುವನ್ನು ಬಿಟ್ಟುಹೋಗಿದ್ದ. ಆದರೆ ಈಗ ತಾಯಿ, ಮಗುವಿಗೆ ಆಹಾರ ನೀಡದೆ ಮನೆಯಿಂದ ಹೊರ ಹಾಕಿ ಅಮಾನವೀಯವಾಗಿ ವರ್ತಿಸಿದ್ದಾರೆ. ಕೊರೆಯುವ ಚಳಿಯಲ್ಲಿ ಮನೆ ಹೊರಭಾಗದ ಕಾರಿಡಾರ್ ನಲ್ಲೆ ಮಗು ಸಮೇತ ಟೆಕ್ಕಿ ಪತ್ನಿ ರಾತ್ರಿ ಕಳೆದಿದ್ದಾರೆ. ಮಾವ ಸುದರ್ಶನ್ ತೋಟಾ, ಅತ್ತೆ ಸುಗುತಾದೇವಿ ಸೇರಿದಂತೆ ನಾಲ್ವರ ವಿರುದ್ಧ ವಾದಿಕಾ ರಾಮಮೂರ್ತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ವರದಕ್ಷಿಣೆ ಕಿರುಕುಳ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ

Published On - 7:01 am, Sun, 11 October 20

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​