AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದೊಳಗೆ ಮುನ್ನಿ ಬದ್ನಾಮ್ ಹಾಡಿಗೆ ಮೈ ಬಳುಕಿಸಿದ ಯುವತಿಗೆ ಸಂಕಷ್ಟ: ಇದು ಬೇಕಿತ್ತಾ?

ದೇವಸ್ಥಾನದೊಳಗೆ ಮುನ್ನಿ ಬದ್ನಾಮ್ ಹಾಡಿಗೆ ಮೈ ಬಳುಕಿಸಿದ ವಿಡಿಯೋ ಹಾಕಿಕೊಂಡಿದ್ದ ಯುವತಿಗೆ ಸಂಕಷ್ಟ ಎದುರಾಗಿದೆ.

ದೇವಸ್ಥಾನದೊಳಗೆ ಮುನ್ನಿ ಬದ್ನಾಮ್ ಹಾಡಿಗೆ ಮೈ ಬಳುಕಿಸಿದ ಯುವತಿಗೆ ಸಂಕಷ್ಟ: ಇದು ಬೇಕಿತ್ತಾ?
Neha
TV9 Web
| Edited By: |

Updated on:Oct 04, 2022 | 10:58 PM

Share

ಭೋಪಾಲ್: ಕೆಲವರು ಮನಸ್ಸಿನ ನೆಮ್ಮದಿಗಾಗಿ ದೇವಸ್ಥಾನಕ್ಕೆ ಹೋಗ್ತಾರೆ. ಇನ್ನು ಕೆಲವರು ಭಕ್ತಿ, ತಮ್ಮ ಕಷ್ಟಗಳನ್ನ ಪರಿಹರಿಸುವಂತೆ ದೇವರ ಮೊರೆ ಹೋಗ್ತಾರೆ, ಆದ್ರೆ, ಇಲ್ಲೋರ್ವ ಯುವತಿ ದೇವಸ್ಥಾನದಲ್ಲಿ ಐಟಂ ಸಾಂಗ್​ಗೆ ಮೈ ಬಳುಕಿಸಿ ಸಂಕಷ್ಟಕ್ಕೆ ಸಿಲುಕಿದ್ದಾಳೆ.

ಹೌದು…ಮಧ್ಯಪ್ರದೇಶದ (Madhya Pradesh) ಛತ್ತರ್‌ಪುರ ಜಿಲ್ಲೆಯಲ್ಲಿ ದೇವಸ್ಥಾನವೊಂದರ ಆವರಣದಲ್ಲಿ ಐಟಮ್ ಸಾಂಗ್‍ವೊಂದಕ್ಕೆ ಡ್ಯಾನ್ಸ್ ಮಾಡಿದ್ದ ಯುವತಿ ವಿರುದ್ಧ ಇದೀಗ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಎಷ್ಟು ಮದ್ವೆಯಾಗಿದ್ದೀರಿ, ಯಾರೊಂದಿಗೆ ಸಂಸಾರ ಮಾಡ್ತಿದ್ದೀರಾ? RTI ಅಡಿಯಲ್ಲಿ ಲೇಡಿ ಅಧಿಕಾರಿಯ ಮಾಹಿತಿ ಕೇಳಿದ ಭೂಪ

ನೇಹಾ ಎಂಬಾಕೆ ದೇವಸ್ಥಾನದಲ್ಲಿ ಮುನ್ನಿ ಬದ್ನಾಮ್ ಹುಯಿ ಎಂಬ ಹಾಡಿಗೆ ದೇವಸ್ಥಾನದ ಮೆಟ್ಟಿಲಿನಲ್ಲಿ ಡ್ಯಾನ್ಸ್ ಮಾಡಿದ್ದಳು. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಳು. ಆದರೆ ಈ ವೀಡಿಯೋ ವೈರಲ್‌ ಆಗುತ್ತಿದ್ದಂತೆ ಬಜರಂಗದಳದ ಕೆಲವು ಕಾರ್ಯಕರ್ತರು ವಿರೋಧವನ್ನು ವ್ಯಕ್ತಪಡಿಸಿದ್ದರು. ಜೊತೆಗೆ ದೇವಸ್ಥಾನದೊಳಗೆ ಈ ರೀತಿಯ ರೀಲ್ಸ್‌ ಮಾಡಿ ಧಾರ್ಮಿಕ ಭಾವನೆಗೆ ದ್ರೋಹ ಬಗೆದಿದ್ದಾಳೆ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಯುವತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ತಕ್ಷಣವೇ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ಇಷ್ಟೇ ಅಲ್ಲ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿರುವ ಯುವತಿ ವಿರುದ್ಧ ಕ್ರಮಕ್ಕೆ ಆದೇಶಿಸಿದ್ದಾರೆ. ಇತ್ತ ವಿವಾದ ಹೆಚ್ಚಾಗುತ್ತಿದ್ದಂತೆ ಯುವತಿ ವಿಡಿಯೋ ಡಿಲೀಟ್ ಮಾಡಿದ್ದಾಳೆ. ಆದರೆ ಹಿಂದೂ ಸಂಘಟನೆಗಳ ಯುವತಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.

ಆಕ್ರೋಶ, ಟೀಕೆಗಳು ಹೆಚ್ಚಾಗುತ್ತಿದ್ದಂತೆಯೇಯುವತಿ ತನ್ನ ವೀಡಿಯೋವನ್ನು ಡಿಲೀಟ್ ಮಾಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾಳೆ. ತನ್ನ ಇನ್ಸ್​ಸ್ಟಾಗ್ರಾಮ್​ ಖಾತೆಯಲ್ಲಿ ಕ್ಷಮೆ ಕೇಳಿದ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾಳೆ. ಈ ಯುವತಿ ಇನ್ಸ್​ಸ್ಟಾಗ್ರಾಮನಲ್ಲಿ ಫುಲ್ ಆ್ಯಕ್ಟೀವ್ ಆಗಿದ್ದು, ಈಕೆಗೆ 4 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಇದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:57 pm, Tue, 4 October 22

Follow Us
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?