AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಷ್ಟು ಮದ್ವೆಯಾಗಿದ್ದೀರಿ, ಯಾರೊಂದಿಗೆ ಸಂಸಾರ ಮಾಡ್ತಿದ್ದೀರಾ? RTI ಅಡಿಯಲ್ಲಿ ಲೇಡಿ ಅಧಿಕಾರಿಯ ಮಾಹಿತಿ ಕೇಳಿದ ಭೂಪ

ಇಲ್ಲೋರ್ವ ಆರ್​ಟಿಐ ಕಾರ್ಯಕರ್ತ ಸರ್ಕಾರಿ ಮಹಿಳಾ ಅಧಿಕಾರಿಯ ಖಾಸಗಿ ವಿವರ ಕೇಳಿ ಜೈಲುಪಾಲಾಗಿದ್ದಾನೆ.

ಎಷ್ಟು ಮದ್ವೆಯಾಗಿದ್ದೀರಿ, ಯಾರೊಂದಿಗೆ ಸಂಸಾರ ಮಾಡ್ತಿದ್ದೀರಾ? RTI ಅಡಿಯಲ್ಲಿ ಲೇಡಿ ಅಧಿಕಾರಿಯ ಮಾಹಿತಿ ಕೇಳಿದ ಭೂಪ
Mulbagal Police Arrests RTI activist
TV9 Web
| Edited By: |

Updated on: Oct 02, 2022 | 3:45 PM

Share

ಕೋಲಾರ: ಮಾಹಿತಿ ಹಕ್ಕು ಅಧಿನಿಯಮ (Right to Information Act) ಜಾರಿಗೆ ಬಂದಾಗಿನಿಂದ ಸಾವಿರಾರು ನಾಗರಿಕರು ಅದರ ಉಪಯೋಗ ಪಡೆದಿದ್ದಾರೆ. ಅನೇಕ ವರ್ಷಗಳಿಂದ ದೊರೆಯದಿದ್ದ ಮಾಹಿತಿ, ದಾಖಲೆ ಇತ್ಯಾದಿ ಕೇವಲ ಒಂದು ಅರ್ಜಿ ಸಲ್ಲಿಸಿದ ಕೂಡಲೆ ದೊರಕಿದೆ. ಅಲ್ಲದೇ ಮಾಹಿತಿ ಹಕ್ಕು ಅಡಿಯಲ್ಲಿ ದಾಖಲಾದ ಅರ್ಜಿಗಳಿಗೆ ಉತ್ತರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸಂಸ್ಥೆಗಳ ಕಾರ್ಯವೈಖರಿ ಸಾಕಷ್ಟು ಬದಲಾಗಿದೆ.

ಇಲಾಖೆಯಲ್ಲಿ ಸ್ವಲ್ಪಮಟ್ಟಿಗೆ ಪಾರದರ್ಶಕತೆ ಕಂಡು ಬಂದಿದೆ. ಬಹಳ ಮುಖ್ಯವಾಗಿ ಸರ್ಕಾರದ ಕಚೇರಿಗಳಲ್ಲಿ ಕಡತಗಳನ್ನು ವೈಜ್ಞಾನಿಕವಾಗಿ ಮತ್ತು ವ್ಯವಸ್ಥಿತವಾಗಿ ಇಡುವ ಸಂಸ್ಕೃತಿ ಆರಂಭವಾಗಿದೆ. ಇದೆಲ್ಲವೂ ಮೆಚ್ಚಬೇಕಾದ್ದೆ. ಆದ್ರೆ, ಇದರ ಜೊತೆಗೆ ಮಾಹಿತಿ ಹಕ್ಕು ದುರುಪಯೋಗದ ಬಗ್ಗೆ ಅಲ್ಲಲ್ಲಿ ಮಾತು ಕೇಳಿಬರುತ್ತಿವೆ. ಇದಕ್ಕೊಂದು ತಾಜಾ ಉದಾಹರಣ ಈ ಸುದ್ದಿ..

ಹೌದು…. ಕೋಲಾರದ(Kolar) ಆರ್​ಟಿಐ ಕಾರ್ಯಕರ್ತನೊಬ್ಬ ( RTI Activist) ಮಹಿಳಾ ಅಧಿಕಾರಿಯ ವೈಯಕ್ತಿಕ ವಿಚಾರದ ಬಗ್ಗೆ‌ ಮಾಹಿತಿ ಕೇಳಿ ಈಗ ಜೈಲುಪಾಲಾಗಿದ್ದಾನೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮಂಡಿಕಲ್ ಗ್ರಾಮದ ಆರ್​ಟಿಐ ಕಾರ್ಯಕರ್ತ ನಾಗರಾಜ್​ ಎನ್ನುವರು ಮಹಿಳಾ ಅಧಿಕಾರಿಯ ವೈಯಕ್ತಿಕ ಜೀವನದ ಬಗ್ಗೆ ಮಾಹಿತಿ ಕೇಳಿದ್ದಾನೆ. ಈ ಹಿನ್ನೆಲೆಯಲ್ಲಿ ಅಧಿಕಾರಿಯ ದೂರಿನ ಮೇರೆಗೆ ಪೊಲೀಸರು ನಾಗರಾಜ್​ನನ್ನು ಅರೆಸ್ಟ್ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: Crime: ಹೀಗೊಬ್ಬ ಕಮರ್ಷಿಯಲ್ ಕಳ್ಳ; ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿಯದ ಆರೋಪಿ

ಎಷ್ಟು ಮದುವೆಯಾಗಿದ್ದೀರಿ? ಯಾರೊಂದಿಗೆ ಡೈವೋರ್ಸ್​ ಆಗಿದೆ? ಯಾರೊಂದಿಗೆ ಸಂಸಾರ ಮಾಡ್ತಿದ್ದೀರಾ?, ಎಲ್ಲಿ ಮದುವೆಯಾಗಿದೆ? ಲಗ್ನ ಪತ್ರಿಕೆ, ಕಲ್ಯಾಣ ಮಂಟಪದ ವಿವರ ಸಹ ಕೇಳಿದ್ದ. ಅಲ್ಲದೇ ಮೊದಲ ಗಂಡಂದಿರು ಅಧಿಕಾರಿಯನ್ನು ಬಿಡಲು ಕಾರಣ ಏನು? ಯಾವ ಇಲಾಖೆಯಲ್ಲಿ ಇವರೆಲ್ಲಾ ಕೆಲಸ‌ ಮಾಡುತ್ತಿದ್ದಾರೆ? ಎಲ್ಲಾ ಮಾಹಿತಿ ತುರ್ತಾಗಿ ನೀಡುವಂತೆ ನಾಗರಾಜ್ ಆರ್​ಟಿಐ ಅರ್ಜಿ ಸಲ್ಲಿಸಿದ್ದ. ಇದರಿಂದ ಕೋಪಗೊಂಡಿರುವ ಆ ಮಳಿಳಾ ಅಧಿಕಾರಿ ಆರ್​ಟಿಐ ಕಾರ್ಯಕರ್ತನ ವಿರುದ್ಧ ದೂರು ದಾಖಲಿಸಿದ್ದಾರೆ.

ಮಹಿಳಾ ಅಧಿಕಾರಿ ದೂರಿನ ಮೇರೆಗೆ ಮುಳಬಾಗಲು ನಗರ ಪೊಲೀಸರು ನಾಗರಾಜ್​ನನ್ನು ಬಂಧಿಸಿದ್ದಾರೆ. ಯಾವ ಮಾಹಿತಿ ಕೇಳಬೇಕು. ಯಾವುದನ್ನು ಕೇಳಬಾರದು ಎನ್ನುವ ಸಾಮಾನ್ಯ ಜ್ಞಾನ ಇರಬೇಕು. ಇಲ್ಲ ಅಂದ್ರೆ ಹೀಗೆ ಜೈಲು ಸೇರಬೇಕಾಗುತ್ತದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ