AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮನೆಗೆ ಬರಲ್ಲ ಎಂದ ಹೆಂಡತಿಯ ಮೇಲೆ ಆ್ಯಸಿಡ್ ಎರಚಿದ ಗಂಡ

Shocking News: ಮನೆಗೆ ಬರಲು ಒಪ್ಪದ ಹೆಂಡತಿಯ ಮೇಲೆ ಕೋಪಗೊಂಡ ಗಂಡನೊಬ್ಬ ಆಕೆಯ ಮೇಲೆ ಆ್ಯಸಿಡ್ ಎರಚಿರುವ ಘಟನೆ ನಡೆದಿದೆ. ಬಾಂದ್ರಾದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಪತ್ನಿ ತನ್ನ ಬಳಿಗೆ ಮರಳಲು ನಿರಾಕರಿಸಿದಾಗ ಆಕೆಯ ಮೇಲೆ ಆಸಿಡ್ ಎರಚಿದ್ದಾನೆ. ಈ ವೇಳೆ ಆತನ ಮಗನಿಗೂ ಸುಟ್ಟ ಗಾಯಗಳಾಗಿವೆ.

Crime News: ಮನೆಗೆ ಬರಲ್ಲ ಎಂದ ಹೆಂಡತಿಯ ಮೇಲೆ ಆ್ಯಸಿಡ್ ಎರಚಿದ ಗಂಡ
ಹೆಂಡತಿಯ ಮೇಲೆ ಆ್ಯಸಿಡ್ ಎರಚಿದ ಗಂಡ
ಸುಷ್ಮಾ ಚಕ್ರೆ
|

Updated on: Jul 24, 2024 | 11:54 AM

Share

ಬಾಂದ್ರಾ: ಬಾಂದ್ರಾದ ಬೆಹ್ರಾಮ್ ಪದಾ ಪ್ರದೇಶದಲ್ಲಿ ಇಂದು ಮುಂಜಾನೆ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ಹೆಂಡತಿ ತನಗೆ ವಿಚ್ಛೇದನ ನೀಡಿದ್ದರ ಬಗ್ಗೆ ಅಸಮಾಧಾನಗೊಂಡ ಪತಿ ತನ್ನ ಹೆಂಡತಿಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ಸಂಬಂಧ ನಿರ್ಮಲ್ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 2 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ನಿರ್ಮಲ್ ನಗರ ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಸಂತ್ರಸ್ತೆಯ ಪತ್ನಿ ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದರೆ, ಆಕೆಯ ಪತಿ ಆಟೋ ರಿಕ್ಷಾ ಚಾಲಕ ಮತ್ತು ಮದ್ಯವ್ಯಸನಿಯಾಗಿದ್ದ. 6 ವರ್ಷಗಳ ಹಿಂದೆ ವಿವಾಹವಾದ ಇಶ್ರತ್ ಶೇಖ್ ಮತ್ತು ಅಂಜುಮ್ ಶೇಖ್ ಬಾಂದ್ರಾ ಪೂರ್ವದ ಬೆಹ್ರಾಮ್ ಪದಾದಲ್ಲಿ ನೆಲೆಸಿದ್ದಾರೆ. ಇತ್ತೀಚೆಗೆ, ಅವರ ನಡುವೆ ಜಗಳ ಉಂಟಾಗಿತ್ತು. ಇದು ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನದ ಪ್ರಕರಣಕ್ಕೆ ಕಾರಣವಾಯಿತು. 5 ದಿನಗಳ ಹಿಂದೆ ನ್ಯಾಯಾಲಯವು ಅವರ ವಿಚ್ಛೇದನದ ತೀರ್ಪು ನೀಡಿತು.

ಇದನ್ನೂ ಓದಿ: Shocking Video: ನಾಯಿಯನ್ನು ಹಗ್ಗದಲ್ಲಿ ಕಟ್ಟಿ ಟೆರೇಸ್‌ನಿಂದ ನೇತಾಡಿಸಿದ ಯುವಕ; ಶಾಕಿಂಗ್ ವಿಡಿಯೋ ವೈರಲ್

‘ನೀನು ನನ್ನವಳಲ್ಲದಿದ್ದರೆ ಯಾರವಳೂ ಆಗಲು ಬಿಡುವುದಿಲ್ಲ’ ಎಂದು ಆತ ತನ್ನ ಪತ್ನಿಯ ಮೇಲೆ ಆಸಿಡ್ ಎರಚಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಸೋಮವಾರ ಮುಂಜಾನೆ 5 ಗಂಟೆಗೆ ಅಂಜುಮ್ ಶೇಖ್ ಮತ್ತು ಅವರ 12 ವರ್ಷದ ಮಗ ರೈಸ್ ತಮ್ಮ ಮನೆಯ ಬಾಗಿಲಿನ ಬಳಿ ಕುಳಿತಿದ್ದಾಗ ಆಸಿಡ್ ದಾಳಿ ನಡೆದಿದೆ. ಇಶ್ರತ್ ಶೇಖ್ ಅವರ ಮೇಲೆ ಆಸಿಡ್ ಎರಚಿದರು, ಇದರ ಪರಿಣಾಮವಾಗಿ ಅಂಜುಮ್ ಅವರ ಬೆನ್ನು, ಹೊಟ್ಟೆ ಮತ್ತು ಕೈಗಳಿಗೆ ಸುಟ್ಟಗಾಯಗಳು ಉಂಟಾಗಿದ್ದರೆ ಮಗನ ಬೆನ್ನಿನ ಮೇಲೆ ಕೂಡ ಸುಟ್ಟ ಗಾಯಗಳಾಗಿವೆ. ಇಬ್ಬರಿಗೂ ಆರಂಭದಲ್ಲಿ ಭಾಭಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಆದರೆ, ನಂತರ ಚಿಂಚಪೋಕ್ಲಿಯ ಕಸ್ತೂರ್​ಬಾ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಇದನ್ನೂ ಓದಿ: Crime News: ಚಲಿಸುತ್ತಿದ್ದ ಕಾರಿನಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಆಕೆಯ ಅಪ್ಪನಿಗೆ ವಿಡಿಯೋ ಕಳಿಸಿ ಬ್ಲಾಕ್​ಮೇಲ್

ದಾಳಿಯ ನಂತರ ಅಂಜುಮ್ ಶೇಖ್ (24) ಮತ್ತು ರೈಸ್ ಶೇಖ್ (12) ಸ್ಥಿತಿ ಸ್ಥಿರವಾಗಿದೆ. ಆರೋಪಿ ಇಶ್ರತ್ ಶೇಖ್ ನನ್ನು ನಿರ್ಮಲ್ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆತನನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದಾಳಿಯ ನಂತರ ತಲೆಮರೆಸಿಕೊಂಡಿದ್ದ ಇಶ್ರತ್ ನನ್ನು ನಿನ್ನೆ ತಡರಾತ್ರಿ ನಿರ್ಮಲ್ ನಗರ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ