AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದಿಂದ ತೆಗೆದಿದಕ್ಕೆ ಮುಂಬೈ ಮೂಲದ ಉದ್ಯಮಿಯನ್ನು ಕೊಲೆ ಮಾಡಲು ಯತ್ನ

ಬೆಂಗಳೂರಿನಲ್ಲಿ ಕುದುರೆ ತರಬೇತುದಾರ ಜಸ್ವೀರ್ ಸಿಂಗ್ ಮತ್ತು ಅವನ ಸಹೋದರ ಸನ್ನಿ, ಸಹಾಯಕ ಬಿಲ್ಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಮುಂಬೈ ಮೂಲದ ಉದ್ಯಮಿ ಸುಚಿತ್ ಜಯರಾಜ್ ಷಾ ಅವರ ಮೇಲೆ ಹಲ್ಲೆ ಮಾಡಿ, ಕೊಲೆ ಮಾಡಲು ಯತ್ನಿಸಿದ್ದರು. ಹಣದ ವಿಚಾರದಲ್ಲಿ ಉದ್ಯಮಿ ಜಸ್ವೀರ್‌ನನ್ನು ಕೆಲಸದಿಂದ ತೆಗೆದಿದ್ದರಿಂದ ಈ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲಸದಿಂದ ತೆಗೆದಿದಕ್ಕೆ ಮುಂಬೈ ಮೂಲದ ಉದ್ಯಮಿಯನ್ನು ಕೊಲೆ ಮಾಡಲು ಯತ್ನ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jun 28, 2025 | 7:52 PM

Share

ಬೆಂಗಳೂರು, ಜೂನ್​ 28: ಕೆಲಸದಿಂದ ತೆಗದು ಹಾಕಿದ್ದಕ್ಕೆ ಮಾಲೀಕನನ್ನೇ ಕೊಲೆ ಮಾಡಲು ಯತ್ನಿಸಿದ್ದ ಆರೋಪಿಗಳನ್ನು ಹಲಸೂರು ಪೊಲೀಸ್ ಠಾಣೆ (Halasuru Police Station) ಪೊಲೀಸರು ಬಂಧಿಸಿದ್ದಾರೆ. ಕುದುರೆ ತರಬೇತುದಾರ ಜಸ್ವೀರ್ ಸಿಂಗ್, ಈತನ ತಮ್ಮ ಸನ್ನಿ, ಹಾಗೂ ಸಹಾಯಕ ಬಿಲ್ಲಾ ಬಂಧಿತ ಆರೋಪಿಗಳು. ಆರೋಪಿಗಳು ಮುಂಬೈ ಮೂಲದ ಉದ್ಯಮಿ (Mumbai based businessman) ಸುಚಿತ್ ಜಯರಾಜ್ ಷಾ ಅವರನ್ನು ಕೊಲೆ ಮಾಡಲು ಯತ್ನಿಸಿದ್ದರು.

ಮುಂಬೈ ಮೂಲದ ಉದ್ಯಮಿ ಸುಚಿತ್ ಜಯರಾಜ್ ಷಾ ಅವರಿಗೆ ಕುದುರೆ ರೇಸ್ ಹವ್ಯಾಸ ಇತ್ತು. ಹೀಗಾಗಿ ಸುಚಿತ್ ಜಯರಾಜ್ ಷಾ ಅವರು ರೇಸ್ ಕುದುರೆ ಖರೀದಿಸಿದ್ದರು. ಈ ಕುದುರೆಗೆ ತರಬೇತುದಾರರಾಗಿ ಆರೋಪಿ ಜಸ್ವೀರ್ ಸಿಂಗ್​ನನ್ನು ನೇಮಕ ಮಾಡಿಕೊಂಡಿದ್ದರು. ಜಸ್ವೀರ್ ಸಿಂಗ್ ತರಬೇತು ನೀಡಿದ್ದ ಕುದುರೆಗಳು ಸಾಕಷ್ಟು ರೇಸ್​ಗಳಲ್ಲಿ ಗೆದಿದ್ದವು.

ಇದೇ ವೇಳೆ ಸುಚಿತ್ ಜಯರಾಜ್ ಷಾ ಪಂಜಾಬ್ ಸ್ಟಡ್ ಫಾರ್ಮ್​ನಿಂದ ಕುದುರೆ ಖರೀದಿ ಮಾಡಿದ್ದರು. ಈ ವ್ಯವಹಾರದಲ್ಲಿ ಕುದುರೆ ತರಬೇತುದಾರ ಜಸ್ವೀರ್ ಸಿಂಗ್ ಉದ್ಯಮಿ ಸುಚಿತ್​ ಅವರಿಗೆ ಸುಮಾರು 1.5 ಲಕ್ಷ ಹಣ ಕೊಡಬೇಕಿತ್ತು.

ಇದನ್ನೂ ಓದಿ
Image
3ನೇ ಪತ್ನಿಯ ಕೊಲೆ ಮಾಡಿ ಬಸ್ಸಲ್ಲಿ ಲಗೇಜ್ ಎಂದು‌ ಕಳುಹಿಸಿದ್ದವ ಅರೆಸ್ಟ್
Image
ಹೆತ್ತಕರುಳಿಗೆ ಕೊಳ್ಳಿ ಇಟ್ಟು ಎಸ್ಕೇಪ್ ಆಗಿದ್ದ ಕಟುಕ ಮಗ ಉಡುಪಿಯಲ್ಲಿ ಸಿಕ್ಕ
Image
ಕಲಬುರಗಿ ತ್ರಿಬಲ್ ಮರ್ಡರ್ ಪ್ರಕರಣ: ಮಹಿಳೆ ಶಪಥಕ್ಕಾಗಿ ಬಿತ್ತು‌ 3 ಹೆಣ!
Image
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!

ಈ ಹಣದ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದೆ. ಅದಕ್ಕೆ ಉದ್ಯಮಿ ಸುಚಿತ್ ಜಯರಾಜ್ ಷಾ ಅವರು ಜಸ್ವೀರ್​ ಸಿಂಗ್​ನನ್ನು ಕೆಲಸದಿಂದ ತೆಗೆದಿದ್ದಾರೆ. ಕೆಲಸದಿಂದ ತೆಗೆದಿದಕ್ಕೆ ಮಾಲೀಕ ಸುಚಿತ್ ಮೇಲೆ ಜಸ್ವೀರ್ ಸೇಡು ಇಟ್ಟುಕೊಂಡಿದ್ದನು. ಕಳೆದ ವಾರ ರೇಸ್ ಇದೆ ಅಂತ ಬೆಂಗಳೂರಿಗೆ ಸ್ನೇಹಿತನ ಜೊತೆ ಬಂದಿದ್ದ ಸುಚಿತ್ ಜಯರಾಜ್ ಷಾ ಪ್ರತಿಷ್ಠಿತ ಹೋಟೇಲ್​ನಲ್ಲಿ ಉಳಿದುಕೊಂಡಿದ್ದರು.

ಈ ವಿಚಾರ ತಿಳಿದು ಜಸ್ವೀರ್ ಸಿಂಗ್, ಉದ್ಯಮಿ ಸುಚಿತ್ ಜಯರಾಜ್ ಷಾ ಉಳಿದುಕೊಂಡಿದ್ದ ಹೊಟೇಲ್​ಗೆ ತನ್ನ ಸಹೋದರ‌ ಸನ್ನಿ ಹಾಗೂ ಸಹಾಯಕ ಬಿಲ್ಲಾನನ್ನು ಕಳಿಸಿದ್ದನು. ಮಾತನಾಡಬೇಕು ಅಂತ ಸುಚಿತ್ ಅವರನ್ನು ಸನ್ನಿ ರಿಸ್ಪೆಷನ್​ಗೆ ಕರೆಸಿಕೊಂಡಿದ್ದನು. ರಿಸ್ಪೆಷನ್​ಗೆ ಬಂದ ಸುಚಿತ್​ ಅವರನ್ನು ಸನ್ನಿ ಹಾಗೂ ಬಿಲ್ಲಾ ವಾಹನ ಪಾರ್ಕಿಂಗ್​ ಜಾಗಕ್ಕೆ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಏಕಾಏಕಿ ಶಾಪ್​ಗೆ ನುಗ್ಗಿ 2 ಕೋಟಿ ರೂ ದೋಚಿದ ದುಷ್ಕರ್ಮಿ

ಅಲ್ಲಿ, ನನ್ನ ಅಣ್ಣ ಜಸ್ವೀರ್​ ಗೌರವ ಹಾಳು ಮಾಡುತ್ತೀಯಾ ಅಂತ ಇಬ್ಬರೂ ಸೇರಿಕೊಂಡು ಸುಚಿತ್ ಜಯರಾಜ್ ಷಾ ಅವರ ಮೇಲೆ ಹಲ್ಲೆ ಮಾಡಿ, ಸ್ಕೂಡೈವರ್​ನಿಂದ ಚುಚ್ಚಲು ಯತ್ನಿಸಿದ್ದಾರೆ. ಆದರೆ, ಸುಚಿತ್ ಅವರು ತಪ್ಪಿಸಿಕೊಂಡಿದ್ದಾರೆ. ಇದೇ ವೇಳೆ ಸ್ಥಳಕ್ಕೆ ಬಂದ ಹೋಟೆಲ್ ಸಿಬ್ಬಂದಿಯನ್ನು ನೋಡಿ ಆರೋಪಿಗಳಾದ ಸನ್ನಿ ಹಾಗೂ ಬಿಲ್ಲಾ ಪರಾರಿಯಾಗಿದ್ದಾರೆ.

ಚಿಕಿತ್ಸೆ ಪಡೆದ ಬಳಿಕ ಸುಚಿತ್ ಜಯರಾಜ್ ಷಾ ಅವರು ಆರೋಪಿಗಳಾದ ಜಸ್ವೀರ್ ಸಿಂಗ್, ಸನ್ನಿ, ಹಾಗೂ ಬಿಲ್ಲನ ವಿರುದ್ಧ ದೂರು ನೀಡಿದ್ದಾರೆ. ದೂರು ಆಧಾರದ ಮೇಲೆ ಹಲಸೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್