AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ತನ್ನ 2 ವರ್ಷದ ಮಗುವನ್ನು ಹತ್ಯೆ ಮಾಡಿ, ನದಿಗೆ ಎಸೆದ ಪಾಪಿ ತಂದೆ

ತಂದೆಯೇ ತನ್ನ ಎರಡು ವರ್ಷದ ಮಗುವನ್ನು ಕೊಲೆ ಮಾಡಿ, ನದಿಗೆ ಎಸೆದಿರುವ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ.

Mumbai: ತನ್ನ 2 ವರ್ಷದ ಮಗುವನ್ನು ಹತ್ಯೆ ಮಾಡಿ, ನದಿಗೆ ಎಸೆದ ಪಾಪಿ ತಂದೆ
ಮಗು
ನಯನಾ ರಾಜೀವ್
|

Updated on: Apr 20, 2023 | 8:25 AM

Share

ತಂದೆಯೇ ತನ್ನ ಎರಡು ವರ್ಷದ ಮಗುವನ್ನು ಕೊಲೆ ಮಾಡಿ, ನದಿಗೆ ಎಸೆದಿರುವ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. 22 ವರ್ಷದ ವ್ಯಕ್ತಿಯು ವಿವಾಹೇತರ ಸಂಬಂಧ ಹೊಂದಿದ್ದು, ಆ ಮಹಿಳೆಯನ್ನು ಮದುವೆಯಾಗಲು ಮಗು ಅಡ್ಡಿಬರಬಾರದು ಎನ್ನುವ ಕಾರಣಕ್ಕೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಏಕೆಂದರೆ ಆ ಮಹಿಳೆಯು ಮಗುವನ್ನು ಬಿಟ್ಟು ಆ ವ್ಯಕ್ತಿ ತನ್ನ ಜತೆಗೆ ಬರಬೇಕೆಂದು ಬಯಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಶಾಹು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಬುಧವಾರ ಮುಂಜಾನೆ ಕೇಮ್ಕಾರ್ ಚೌಕ್ ಬಳಿಯ ಮಾಹಿಮ್-ಸಿಯಾನ್ ಕ್ರೀಕ್ ಲಿಂಕ್ ರಸ್ತೆಯಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಪ್ಲಾಸ್ಟಿಕ್ ಚೀಲದಲ್ಲಿ ಶವವಿದ್ದು, ಮಗುವಿನ ತಲೆ ಮತ್ತು ಬಲ ಮಣಿಕಟ್ಟಿನಲ್ಲಿ ಗಾಯದ ಗುರುತುಗಳಿದ್ದವು. ತಕ್ಷಣಕ್ಕೆ ಮಗು ಯಾರೆಂದು ಪತ್ತೆ ಹಚ್ಚಲು ಕಷ್ಟವಾಗಿತ್ತು. ಆದರೆ ಮಗುವನ್ನು ಹುಡುಕುತ್ತಿದ್ದ ಸಂಬಂಧಿಕರು ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ್ದರು, ಬಳಿಕ ಶವವನ್ನು ಅವರಿಗೆ ತೋರಿಸಿದಾಗ ಗುರುತು ಹಿಡಿದಿದ್ದಾರೆ.

ಮತ್ತಷ್ಟು ಓದಿ: ಧಾರವಾಡ: ಎರಡು ಗುಂಪಿನ ನಡುವೆ ಜಗಳ ಬಿಡಿಸಿ ಕಳಿಸಿದ್ದ ಗ್ರಾಮ‌ ಪಂಚಾಯಿತಿ ಉಪಾಧ್ಯಕ್ಷನನ್ನ ಚಾಕುವಿನಿಂದ ಇರಿದು ಕೊಲೆ

ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಬಾಲಕನ ಸಂಬಂಧಿಕರೊಂದಿಗೆ ವಿಚಾರಣೆ ನಡೆಸಿದಾಗ, ಆತನ ತಂದೆ ಧಾರಾವಿ ಕೊಳೆಗೇರಿಯಲ್ಲಿ ನೆಲೆಸಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ತೆರಳಿ ಆತನನ್ನು ಬಂಧಿಸಿದ್ದಾರೆ.

ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಟೈಲರ್ ಆಗಿ ಕೆಲಸ ಮಾಡುವ ಆರೋಪಿ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದನು. ಆಕೆ ತನ್ನನ್ನು ಮದುವೆಯಾಗಲು ಬಯಸಿದರೆ ತನ್ನ ಹೆಂಡತಿ ಮತ್ತು ಮಗನನ್ನು ಬಿಟ್ಟು ಬಾ ಎಂದು ಷರತ್ತು ಹಾಕಿದ್ದಳು. ನಂತರ ಆರೋಪಿಗಳು ಅವರನ್ನು ಕೊಲ್ಲಲು ಯೋಜನೆ ರೂಪಿಸಿದ್ದರು. ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಆಸೆ ತೋರಿಸಿ ಮಗುವನ್ನು ಕರೆದುಕೊಂಡು ಹೋಗಿ ಹತ್ಯೆ ಮಾಡಿ ಬಳಿಕ ನದಿಗೆ ಎಸೆದಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ