AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಬಂದೂಕು ತೋರಿಸಿ ಉದ್ಯಮಿ ಅಪಹರಣ, ಶಿಂಧೆ ಬಣದ ಶಾಸಕರ ಪುತ್ರನ ವಿರುದ್ಧ ಎಫ್‌ಐಆರ್

ಉದ್ಯಮಿಯೊಬ್ಬರನ್ನು ಅಪಹರಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ (ಶಿಂಧೆ ಬಣದ) ಶಾಸಕ ಪ್ರಕಾಶ್ ಸುರ್ವೆ ಅವರ ಪುತ್ರ ರಾಜ್ ಸುರ್ವೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮುಂಬೈ: ಬಂದೂಕು ತೋರಿಸಿ ಉದ್ಯಮಿ ಅಪಹರಣ, ಶಿಂಧೆ ಬಣದ ಶಾಸಕರ ಪುತ್ರನ ವಿರುದ್ಧ ಎಫ್‌ಐಆರ್
Image Credit source: Amarujala.com
ನಯನಾ ರಾಜೀವ್
|

Updated on: Aug 10, 2023 | 11:01 AM

Share

ಉದ್ಯಮಿಯೊಬ್ಬರನ್ನು ಅಪಹರಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ (ಶಿಂಧೆ ಬಣದ) ಶಾಸಕ ಪ್ರಕಾಶ್ ಸುರ್ವೆ ಅವರ ಪುತ್ರ ರಾಜ್ ಸುರ್ವೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಷಯ ಬಯಲಿಗೆ ಬಂದ ನಂತರ ರಾಜಕೀಯ ಪಡಸಾಲೆಯಲ್ಲಿ ಸಂಚಲನ ಮೂಡಿದೆ. ನಿನ್ನೆ ಗೋರೆಗಾಂವ್ ಪೂರ್ವ ಪ್ರದೇಶದಿಂದ ಉದ್ಯಮಿ ರಾಜ್‌ಕುಮಾರ್ ಸಿಂಗ್ ಅವರನ್ನು ಅಪಹರಿಸಿದ್ದಕ್ಕಾಗಿ ರಾಜ್ ಸುರ್ವೆ ಸೇರಿದಂತೆ ಐವರು ಆರೋಪಿಗಳನ್ನು ಹೆಸರಿಸಿರುವುದಾಗಿ ಮುಂಬೈ ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ 10-12 ಅಪರಿಚಿತರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಮುಂಬೈನ ಗೋರೆಗಾಂವ್‌ನಲ್ಲಿರುವ ಗ್ಲೋಬಲ್ ಮ್ಯೂಸಿಕ್ ಜಂಕ್ಷನ್ ಕಚೇರಿಗೆ ಸುಮಾರು 10 ರಿಂದ 15 ಜನರು ಏಕಾಏಕಿ ತಲುಪಿ ಸಂಗೀತ ಕಂಪನಿಯ ಸಿಇಒ ರಾಜ್‌ಕುಮಾರ್ ಸಿಂಗ್ ಅವರನ್ನು ಅಪಹರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಯಲ್ಲಿ ಇದು ಸೆರೆಯಾಗಿದೆ.

ಮತ್ತಷ್ಟು ಓದಿ: ವೈರಲ್ ನ್ಯೂಸ್​: ಕಾಲೇಜಿನಿಂದ ಬರುವಾಗ ಯುವತಿಯ ಅಪಹರಣ, ಆ ಮೇಲೆ ಆಗಿದ್ದೇನು?

ಕೆಲವು ಯುವಕರು ಉದ್ಯಮಿಯನ್ನು ಹಿಂಸಿಸುತ್ತಿರುವುದನ್ನು ಮತ್ತು ಬಲವಂತವಾಗಿ ವ್ಯಕ್ತಿಯನ್ನು ಕರೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು.

ಕೆಲವರು ಕಚೇರಿಗೆ ನುಗ್ಗಿ ತನ್ನನ್ನು ದಹಿಸರ್‌ನಲ್ಲಿರುವ ಶಾಸಕ ಪ್ರಕಾಶ್ ಸುರ್ವೆ ಅವರ ಕಚೇರಿಗೆ ಕರೆದೊಯ್ದರು ಎಂದು ರಾಜ್‌ಕುಮಾರ್ ಸಿಂಗ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಶಾಸಕರ ಪುತ್ರ ರಾಜ್‌ ಸುರ್ವೆ ಮತ್ತಿತರರು ಇದ್ದರು, ಬಂದೂಕು ತೋರಿಸಿ ಪಾಟ್ನಾದ ಮನೋಜ್ ಮಿಶ್ರಾ ಅವರಿಗೆ ನೀಡಲಾದ ವ್ಯಾಪಾರ ಸಾಲವನ್ನು ಮರುಪಾವತಿಸುವಂತೆ ಒತ್ತಾಯಿಸಿದರು. ನಂತರ ಈ ಬಗ್ಗೆ ಯಾರೊಂದಿಗೂ ಮಾತನಾಡದಂತೆ ಬೆದರಿಕೆ ಹಾಕಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು