ಮುಂಬೈ: ಬಂದೂಕು ತೋರಿಸಿ ಉದ್ಯಮಿ ಅಪಹರಣ, ಶಿಂಧೆ ಬಣದ ಶಾಸಕರ ಪುತ್ರನ ವಿರುದ್ಧ ಎಫ್‌ಐಆರ್

ಉದ್ಯಮಿಯೊಬ್ಬರನ್ನು ಅಪಹರಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ (ಶಿಂಧೆ ಬಣದ) ಶಾಸಕ ಪ್ರಕಾಶ್ ಸುರ್ವೆ ಅವರ ಪುತ್ರ ರಾಜ್ ಸುರ್ವೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮುಂಬೈ: ಬಂದೂಕು ತೋರಿಸಿ ಉದ್ಯಮಿ ಅಪಹರಣ, ಶಿಂಧೆ ಬಣದ ಶಾಸಕರ ಪುತ್ರನ ವಿರುದ್ಧ ಎಫ್‌ಐಆರ್
Image Credit source: Amarujala.com

Updated on: Aug 10, 2023 | 11:01 AM

ಉದ್ಯಮಿಯೊಬ್ಬರನ್ನು ಅಪಹರಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ (ಶಿಂಧೆ ಬಣದ) ಶಾಸಕ ಪ್ರಕಾಶ್ ಸುರ್ವೆ ಅವರ ಪುತ್ರ ರಾಜ್ ಸುರ್ವೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಷಯ ಬಯಲಿಗೆ ಬಂದ ನಂತರ ರಾಜಕೀಯ ಪಡಸಾಲೆಯಲ್ಲಿ ಸಂಚಲನ ಮೂಡಿದೆ.
ನಿನ್ನೆ ಗೋರೆಗಾಂವ್ ಪೂರ್ವ ಪ್ರದೇಶದಿಂದ ಉದ್ಯಮಿ ರಾಜ್‌ಕುಮಾರ್ ಸಿಂಗ್ ಅವರನ್ನು ಅಪಹರಿಸಿದ್ದಕ್ಕಾಗಿ ರಾಜ್ ಸುರ್ವೆ ಸೇರಿದಂತೆ ಐವರು ಆರೋಪಿಗಳನ್ನು ಹೆಸರಿಸಿರುವುದಾಗಿ ಮುಂಬೈ ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ 10-12 ಅಪರಿಚಿತರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಮುಂಬೈನ ಗೋರೆಗಾಂವ್‌ನಲ್ಲಿರುವ ಗ್ಲೋಬಲ್ ಮ್ಯೂಸಿಕ್ ಜಂಕ್ಷನ್ ಕಚೇರಿಗೆ ಸುಮಾರು 10 ರಿಂದ 15 ಜನರು ಏಕಾಏಕಿ ತಲುಪಿ ಸಂಗೀತ ಕಂಪನಿಯ ಸಿಇಒ ರಾಜ್‌ಕುಮಾರ್ ಸಿಂಗ್ ಅವರನ್ನು ಅಪಹರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಯಲ್ಲಿ ಇದು ಸೆರೆಯಾಗಿದೆ.

ಮತ್ತಷ್ಟು ಓದಿ: ವೈರಲ್ ನ್ಯೂಸ್​: ಕಾಲೇಜಿನಿಂದ ಬರುವಾಗ ಯುವತಿಯ ಅಪಹರಣ, ಆ ಮೇಲೆ ಆಗಿದ್ದೇನು?

ಕೆಲವು ಯುವಕರು ಉದ್ಯಮಿಯನ್ನು ಹಿಂಸಿಸುತ್ತಿರುವುದನ್ನು ಮತ್ತು ಬಲವಂತವಾಗಿ ವ್ಯಕ್ತಿಯನ್ನು ಕರೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು.

ಕೆಲವರು ಕಚೇರಿಗೆ ನುಗ್ಗಿ ತನ್ನನ್ನು ದಹಿಸರ್‌ನಲ್ಲಿರುವ ಶಾಸಕ ಪ್ರಕಾಶ್ ಸುರ್ವೆ ಅವರ ಕಚೇರಿಗೆ ಕರೆದೊಯ್ದರು ಎಂದು ರಾಜ್‌ಕುಮಾರ್ ಸಿಂಗ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಶಾಸಕರ ಪುತ್ರ ರಾಜ್‌ ಸುರ್ವೆ ಮತ್ತಿತರರು ಇದ್ದರು, ಬಂದೂಕು ತೋರಿಸಿ ಪಾಟ್ನಾದ ಮನೋಜ್ ಮಿಶ್ರಾ ಅವರಿಗೆ ನೀಡಲಾದ ವ್ಯಾಪಾರ ಸಾಲವನ್ನು ಮರುಪಾವತಿಸುವಂತೆ ಒತ್ತಾಯಿಸಿದರು. ನಂತರ ಈ ಬಗ್ಗೆ ಯಾರೊಂದಿಗೂ ಮಾತನಾಡದಂತೆ ಬೆದರಿಕೆ ಹಾಕಿದ್ದರು.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us