AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಹಳಿಗೆ ಸಿಲುಕಿ ಮಹಿಳೆಯ ಕಾಲು ಕಟ್; ಪೈಲಟ್ ಸಮಯಪ್ರಜ್ಞೆಯಿಂದ ಉಳಿಯಿತು ಜೀವ

ಮುಂಬೈನಲ್ಲಿ ಮಹಿಳೆಯೊಬ್ಬರ ಪ್ರಾಣ ಉಳಿಸಲು ಲೋಕೊ ಪೈಲಟ್ ರೈಲನ್ನು ಹಳಿಯ ಮೇಲೆ ರಿವರ್ಸ್ ಓಡಿಸಿರುವ ಘಟನೆ ನಡೆದಿದೆ. ಆದರೆ, ಈ ಅಪಘಾತದಲ್ಲಿ ಮಹಿಳೆಯ ಎರಡೂ ಕಾಲುಗಳಿಗೆ ತೀವ್ರ ಪೆಟ್ಟಾಗಿ ಕಟ್ ಆಗಿದೆ. ರೈಲು ನಿಲ್ದಾಣ ಪ್ರವೇಶಿಸಿದ ಕೂಡಲೇ ಮಹಿಳೆ ಕಾಲು ಜಾರಿ ರೈಲು ಹಳಿ ಮೇಲೆ ಬಿದ್ದಿದ್ದಾಳೆ ಎನ್ನಲಾಗಿದೆ. ಆಗಲೇ ರೈಲು ಅವಳ ಮೇಲೆ ಹಾದು ಹೋಗಿದೆ.

ರೈಲ್ವೆ ಹಳಿಗೆ ಸಿಲುಕಿ ಮಹಿಳೆಯ ಕಾಲು ಕಟ್; ಪೈಲಟ್ ಸಮಯಪ್ರಜ್ಞೆಯಿಂದ ಉಳಿಯಿತು ಜೀವ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jul 08, 2024 | 4:54 PM

Share

ಮುಂಬೈ: ಮುಂಬೈನ ಬೇಲಾಪುರ ನಿಲ್ದಾಣದಲ್ಲಿ ಇಂದು (ಸೋಮವಾರ) ರೈಲಿಗಾಗಿ ಕಾಯುತ್ತಿದ್ದ ಮಹಿಳೆಯೊಬ್ಬರು ಜಾರಿ ಬಿದ್ದು, ರೈಲು ಮತ್ತು ಹಳಿಯ ಮಧ್ಯದಲ್ಲಿ ಸಿಲುಕಿದ್ದಾರೆ. ಇದಾದ ಇದರಿಂದ ಆಕೆಯ ಕಾಲಿಗೆ ತೀವ್ರ ಗಾಯಗಳಾಗಿವೆ. ಒಂದುವೇಳೆ ರೈಲು ಮುಂದೆ ಚಲಿಸಿದ್ದರೆ ಆಕೆಯ ಪ್ರಾಣ ಹೋಗುತ್ತಿತ್ತು. ಆದ್ದರಿಂದ ಆಕೆಯ ಜೀವ ಉಳಿಸಲು ಲೊಕೊ ಪೈಲಟ್ ರೈಲನ್ನು ಹಿಮ್ಮುಖವಾಗಿ ಚಲಿಸಿದ್ದಾರೆ. ಆಗ ಆ ಮಹಿಳೆಯನ್ನು ಹಳಿಯಿಂದ ಮೇಲೆತ್ತಿ ಆಕೆಯ ಜೀವವನ್ನು ಉಳಿಸಲಾಯಿತು.

ಮಾಹಿತಿಯ ಪ್ರಕಾರ, ಪನ್ವೇಲ್​ನಿಂದ ರೈಲ್ವೆ ಸ್ಟೇಷನ್​ಗೆ ಹೋಗುತ್ತಿದ್ದಾಗ ಬೇಲಾಪುರ ಸಿಬಿಡಿ ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಮಹಿಳೆಯೊಬ್ಬರು ಕಾಲು ಜಾರಿ ರೈಲು ಹಳಿ ಮೇಲೆ ಬಿದ್ದಿದ್ದಾರೆ. ಅಷ್ಟರಲ್ಲಿ ರೈಲಿನ ಮೊದಲ ಮಹಿಳಾ ಕೋಚ್ ಆಕೆಯನ್ನು ದಾಟಿ ಹೋಯಿತು. ಇದು ಪ್ರಯಾಣಿಕರು ಮತ್ತು ರೈಲ್ವೆ ಆಡಳಿತದಲ್ಲಿ ಆತಂಕ ಮೂಡಿಸಿತು. ನಂತರ ರೈಲ್ವೆ ಪೈಲಟ್ ರೈಲನ್ನು ಹಿಂದಕ್ಕೆ ಸರಿಸಿದ್ದರಿಂದ ಆ ಮಹಿಳೆಯ ಪ್ರಾಣ ಉಳಿಯಿತು. ಆದರೆ ಆ ಮಹಿಳೆಯ ಎರಡೂ ಕಾಲುಗಳು ಕಟ್ ಆಗಿವೆ.

ಇದನ್ನೂ ಓದಿ: Kanchanjungha Express: ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು

ಪನ್ವೇಲ್‌ನಿಂದ ಥಾಣೆಗೆ ತೆರಳುತ್ತಿದ್ದ ರೈಲು ಬೇಲಾಪುರ ನಿಲ್ದಾಣದ ಮೂರನೇ ಪ್ಲಾಟ್‌ಫಾರ್ಮ್‌ಗೆ ಬರುತ್ತಿತ್ತು. ಅಲ್ಲಿ ಒಬ್ಬರು ಮಹಿಳೆ ರೈಲಿಗಾಗಿ ಕಾಯುತ್ತಾ ನಿಂತಿದ್ದರು. ರೈಲು ಬರುವಾಗ 50 ವರ್ಷದ ಮಹಿಳೆಯೊಬ್ಬರು ರೈಲು ಹಳಿ ಮೇಲೆ ಜಾರಿ ಬಿದ್ದರು. ಅಷ್ಟರಲ್ಲಾಗಲೇ ರೈಲು ಮಹಿಳೆಯ ಮೇಲೆ ಹಾದು ಹೋಗಿತ್ತು. ಆ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ