AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಹಳಿಗೆ ಸಿಲುಕಿ ಮಹಿಳೆಯ ಕಾಲು ಕಟ್; ಪೈಲಟ್ ಸಮಯಪ್ರಜ್ಞೆಯಿಂದ ಉಳಿಯಿತು ಜೀವ

ಮುಂಬೈನಲ್ಲಿ ಮಹಿಳೆಯೊಬ್ಬರ ಪ್ರಾಣ ಉಳಿಸಲು ಲೋಕೊ ಪೈಲಟ್ ರೈಲನ್ನು ಹಳಿಯ ಮೇಲೆ ರಿವರ್ಸ್ ಓಡಿಸಿರುವ ಘಟನೆ ನಡೆದಿದೆ. ಆದರೆ, ಈ ಅಪಘಾತದಲ್ಲಿ ಮಹಿಳೆಯ ಎರಡೂ ಕಾಲುಗಳಿಗೆ ತೀವ್ರ ಪೆಟ್ಟಾಗಿ ಕಟ್ ಆಗಿದೆ. ರೈಲು ನಿಲ್ದಾಣ ಪ್ರವೇಶಿಸಿದ ಕೂಡಲೇ ಮಹಿಳೆ ಕಾಲು ಜಾರಿ ರೈಲು ಹಳಿ ಮೇಲೆ ಬಿದ್ದಿದ್ದಾಳೆ ಎನ್ನಲಾಗಿದೆ. ಆಗಲೇ ರೈಲು ಅವಳ ಮೇಲೆ ಹಾದು ಹೋಗಿದೆ.

ರೈಲ್ವೆ ಹಳಿಗೆ ಸಿಲುಕಿ ಮಹಿಳೆಯ ಕಾಲು ಕಟ್; ಪೈಲಟ್ ಸಮಯಪ್ರಜ್ಞೆಯಿಂದ ಉಳಿಯಿತು ಜೀವ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jul 08, 2024 | 4:54 PM

Share

ಮುಂಬೈ: ಮುಂಬೈನ ಬೇಲಾಪುರ ನಿಲ್ದಾಣದಲ್ಲಿ ಇಂದು (ಸೋಮವಾರ) ರೈಲಿಗಾಗಿ ಕಾಯುತ್ತಿದ್ದ ಮಹಿಳೆಯೊಬ್ಬರು ಜಾರಿ ಬಿದ್ದು, ರೈಲು ಮತ್ತು ಹಳಿಯ ಮಧ್ಯದಲ್ಲಿ ಸಿಲುಕಿದ್ದಾರೆ. ಇದಾದ ಇದರಿಂದ ಆಕೆಯ ಕಾಲಿಗೆ ತೀವ್ರ ಗಾಯಗಳಾಗಿವೆ. ಒಂದುವೇಳೆ ರೈಲು ಮುಂದೆ ಚಲಿಸಿದ್ದರೆ ಆಕೆಯ ಪ್ರಾಣ ಹೋಗುತ್ತಿತ್ತು. ಆದ್ದರಿಂದ ಆಕೆಯ ಜೀವ ಉಳಿಸಲು ಲೊಕೊ ಪೈಲಟ್ ರೈಲನ್ನು ಹಿಮ್ಮುಖವಾಗಿ ಚಲಿಸಿದ್ದಾರೆ. ಆಗ ಆ ಮಹಿಳೆಯನ್ನು ಹಳಿಯಿಂದ ಮೇಲೆತ್ತಿ ಆಕೆಯ ಜೀವವನ್ನು ಉಳಿಸಲಾಯಿತು.

ಮಾಹಿತಿಯ ಪ್ರಕಾರ, ಪನ್ವೇಲ್​ನಿಂದ ರೈಲ್ವೆ ಸ್ಟೇಷನ್​ಗೆ ಹೋಗುತ್ತಿದ್ದಾಗ ಬೇಲಾಪುರ ಸಿಬಿಡಿ ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಮಹಿಳೆಯೊಬ್ಬರು ಕಾಲು ಜಾರಿ ರೈಲು ಹಳಿ ಮೇಲೆ ಬಿದ್ದಿದ್ದಾರೆ. ಅಷ್ಟರಲ್ಲಿ ರೈಲಿನ ಮೊದಲ ಮಹಿಳಾ ಕೋಚ್ ಆಕೆಯನ್ನು ದಾಟಿ ಹೋಯಿತು. ಇದು ಪ್ರಯಾಣಿಕರು ಮತ್ತು ರೈಲ್ವೆ ಆಡಳಿತದಲ್ಲಿ ಆತಂಕ ಮೂಡಿಸಿತು. ನಂತರ ರೈಲ್ವೆ ಪೈಲಟ್ ರೈಲನ್ನು ಹಿಂದಕ್ಕೆ ಸರಿಸಿದ್ದರಿಂದ ಆ ಮಹಿಳೆಯ ಪ್ರಾಣ ಉಳಿಯಿತು. ಆದರೆ ಆ ಮಹಿಳೆಯ ಎರಡೂ ಕಾಲುಗಳು ಕಟ್ ಆಗಿವೆ.

ಇದನ್ನೂ ಓದಿ: Kanchanjungha Express: ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು

ಪನ್ವೇಲ್‌ನಿಂದ ಥಾಣೆಗೆ ತೆರಳುತ್ತಿದ್ದ ರೈಲು ಬೇಲಾಪುರ ನಿಲ್ದಾಣದ ಮೂರನೇ ಪ್ಲಾಟ್‌ಫಾರ್ಮ್‌ಗೆ ಬರುತ್ತಿತ್ತು. ಅಲ್ಲಿ ಒಬ್ಬರು ಮಹಿಳೆ ರೈಲಿಗಾಗಿ ಕಾಯುತ್ತಾ ನಿಂತಿದ್ದರು. ರೈಲು ಬರುವಾಗ 50 ವರ್ಷದ ಮಹಿಳೆಯೊಬ್ಬರು ರೈಲು ಹಳಿ ಮೇಲೆ ಜಾರಿ ಬಿದ್ದರು. ಅಷ್ಟರಲ್ಲಾಗಲೇ ರೈಲು ಮಹಿಳೆಯ ಮೇಲೆ ಹಾದು ಹೋಗಿತ್ತು. ಆ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು