Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಹಳಿಗೆ ಸಿಲುಕಿ ಮಹಿಳೆಯ ಕಾಲು ಕಟ್; ಪೈಲಟ್ ಸಮಯಪ್ರಜ್ಞೆಯಿಂದ ಉಳಿಯಿತು ಜೀವ

ಮುಂಬೈನಲ್ಲಿ ಮಹಿಳೆಯೊಬ್ಬರ ಪ್ರಾಣ ಉಳಿಸಲು ಲೋಕೊ ಪೈಲಟ್ ರೈಲನ್ನು ಹಳಿಯ ಮೇಲೆ ರಿವರ್ಸ್ ಓಡಿಸಿರುವ ಘಟನೆ ನಡೆದಿದೆ. ಆದರೆ, ಈ ಅಪಘಾತದಲ್ಲಿ ಮಹಿಳೆಯ ಎರಡೂ ಕಾಲುಗಳಿಗೆ ತೀವ್ರ ಪೆಟ್ಟಾಗಿ ಕಟ್ ಆಗಿದೆ. ರೈಲು ನಿಲ್ದಾಣ ಪ್ರವೇಶಿಸಿದ ಕೂಡಲೇ ಮಹಿಳೆ ಕಾಲು ಜಾರಿ ರೈಲು ಹಳಿ ಮೇಲೆ ಬಿದ್ದಿದ್ದಾಳೆ ಎನ್ನಲಾಗಿದೆ. ಆಗಲೇ ರೈಲು ಅವಳ ಮೇಲೆ ಹಾದು ಹೋಗಿದೆ.

ರೈಲ್ವೆ ಹಳಿಗೆ ಸಿಲುಕಿ ಮಹಿಳೆಯ ಕಾಲು ಕಟ್; ಪೈಲಟ್ ಸಮಯಪ್ರಜ್ಞೆಯಿಂದ ಉಳಿಯಿತು ಜೀವ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Jul 08, 2024 | 4:54 PM

ಮುಂಬೈ: ಮುಂಬೈನ ಬೇಲಾಪುರ ನಿಲ್ದಾಣದಲ್ಲಿ ಇಂದು (ಸೋಮವಾರ) ರೈಲಿಗಾಗಿ ಕಾಯುತ್ತಿದ್ದ ಮಹಿಳೆಯೊಬ್ಬರು ಜಾರಿ ಬಿದ್ದು, ರೈಲು ಮತ್ತು ಹಳಿಯ ಮಧ್ಯದಲ್ಲಿ ಸಿಲುಕಿದ್ದಾರೆ. ಇದಾದ ಇದರಿಂದ ಆಕೆಯ ಕಾಲಿಗೆ ತೀವ್ರ ಗಾಯಗಳಾಗಿವೆ. ಒಂದುವೇಳೆ ರೈಲು ಮುಂದೆ ಚಲಿಸಿದ್ದರೆ ಆಕೆಯ ಪ್ರಾಣ ಹೋಗುತ್ತಿತ್ತು. ಆದ್ದರಿಂದ ಆಕೆಯ ಜೀವ ಉಳಿಸಲು ಲೊಕೊ ಪೈಲಟ್ ರೈಲನ್ನು ಹಿಮ್ಮುಖವಾಗಿ ಚಲಿಸಿದ್ದಾರೆ. ಆಗ ಆ ಮಹಿಳೆಯನ್ನು ಹಳಿಯಿಂದ ಮೇಲೆತ್ತಿ ಆಕೆಯ ಜೀವವನ್ನು ಉಳಿಸಲಾಯಿತು.

ಮಾಹಿತಿಯ ಪ್ರಕಾರ, ಪನ್ವೇಲ್​ನಿಂದ ರೈಲ್ವೆ ಸ್ಟೇಷನ್​ಗೆ ಹೋಗುತ್ತಿದ್ದಾಗ ಬೇಲಾಪುರ ಸಿಬಿಡಿ ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಮಹಿಳೆಯೊಬ್ಬರು ಕಾಲು ಜಾರಿ ರೈಲು ಹಳಿ ಮೇಲೆ ಬಿದ್ದಿದ್ದಾರೆ. ಅಷ್ಟರಲ್ಲಿ ರೈಲಿನ ಮೊದಲ ಮಹಿಳಾ ಕೋಚ್ ಆಕೆಯನ್ನು ದಾಟಿ ಹೋಯಿತು. ಇದು ಪ್ರಯಾಣಿಕರು ಮತ್ತು ರೈಲ್ವೆ ಆಡಳಿತದಲ್ಲಿ ಆತಂಕ ಮೂಡಿಸಿತು. ನಂತರ ರೈಲ್ವೆ ಪೈಲಟ್ ರೈಲನ್ನು ಹಿಂದಕ್ಕೆ ಸರಿಸಿದ್ದರಿಂದ ಆ ಮಹಿಳೆಯ ಪ್ರಾಣ ಉಳಿಯಿತು. ಆದರೆ ಆ ಮಹಿಳೆಯ ಎರಡೂ ಕಾಲುಗಳು ಕಟ್ ಆಗಿವೆ.

ಇದನ್ನೂ ಓದಿ: Kanchanjungha Express: ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು

ಪನ್ವೇಲ್‌ನಿಂದ ಥಾಣೆಗೆ ತೆರಳುತ್ತಿದ್ದ ರೈಲು ಬೇಲಾಪುರ ನಿಲ್ದಾಣದ ಮೂರನೇ ಪ್ಲಾಟ್‌ಫಾರ್ಮ್‌ಗೆ ಬರುತ್ತಿತ್ತು. ಅಲ್ಲಿ ಒಬ್ಬರು ಮಹಿಳೆ ರೈಲಿಗಾಗಿ ಕಾಯುತ್ತಾ ನಿಂತಿದ್ದರು. ರೈಲು ಬರುವಾಗ 50 ವರ್ಷದ ಮಹಿಳೆಯೊಬ್ಬರು ರೈಲು ಹಳಿ ಮೇಲೆ ಜಾರಿ ಬಿದ್ದರು. ಅಷ್ಟರಲ್ಲಾಗಲೇ ರೈಲು ಮಹಿಳೆಯ ಮೇಲೆ ಹಾದು ಹೋಗಿತ್ತು. ಆ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು