AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mira Road Murder:‘ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಭಯದಿಂದ ಮೃತದೇಹವನ್ನು ತುಂಡು ಮಾಡಿದೆ’: ಆರೋಪಿ ಮನೋಜ್ ಸಾಹ್ನಿ ಹೇಳಿಕೆ

ಮುಂಬೈ ಪೊಲೀಸರು ಸಾಹ್ನಿ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸರಸ್ವತಿ ರೆಡ್ಡಿ ಎಂದು ಗುರುತಿಸಲಾದ 32 ವರ್ಷದ ಲಿವ್-ಇನ್ ಸಂಗಾತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದಾರೆ.

Mira Road Murder:‘ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಭಯದಿಂದ ಮೃತದೇಹವನ್ನು ತುಂಡು ಮಾಡಿದೆ’: ಆರೋಪಿ ಮನೋಜ್ ಸಾಹ್ನಿ ಹೇಳಿಕೆ
ಆರೋಪ ಮನೋಜ್ ಸಾಹ್ನಿ
TV9 Web
| Edited By: |

Updated on:Jun 08, 2023 | 7:10 PM

Share

ಮುಂಬೈ: ಆಕೆ ಆತ್ಮಹತ್ಯೆ (Suicide) ಮಾಡಿಕೊಂಡಿದ್ದರಿಂದ ಭಯದಿಂದ ಆಕೆಯ ಮೃತದೇಹವನ್ನು ತುಂಡು ತುಂಡು ಮಾಡಿದೆ ಎಂದು ಮುಂಬೈನ ಮೀರಾ ರೋಡ್‌ನಲ್ಲಿ (Mira Road) ತನ್ನ ಲಿವ್-ಇನ್ ಸಂಗಾತಿಯನ್ನು ಕೊಂದ (Mumbai Murder Case) ಮನೋಜ್ ಸಾಹ್ನಿ(Manoj Sahni) ಹೇಳಿಕೆ ನೀಡಿದ್ದಾನೆ. ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ನನಗೆ ಹೆದರಿಕೆ ಆಯ್ತು. ಹೀಗಾಗಿ, ಆಕೆಯ ಮೃತದೇಹವನ್ನು ವಿಲೇವಾರಿ ಮಾಡುವುದಕ್ಕಾಗಿ ತುಂಡು ತುಂಡು ಮಾಡಿದೆ ಎಂದು ಆತ ಪೊಲೀಸರಿಗೆ ಹೇಳಿದ್ದಾನೆ. ಪತ್ತೆಯಾದ ದೇಹದ ಭಾಗಗಳನ್ನು ಆರೋಪಿಗಳ ಹೇಳಿಕೆಯ ನಂತರ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು. ನಂತರ ವೈದ್ಯಕೀಯವಾಗಿ ಸತ್ಯಾಂಶ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ ಪೊಲೀಸರು ಸಾಹ್ನಿ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸರಸ್ವತಿ ರೆಡ್ಡಿ ಎಂದು ಗುರುತಿಸಲಾದ 32 ವರ್ಷದ ಲಿವ್-ಇನ್ ಸಂಗಾತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದಾರೆ. ಅಪರಾಧದ ಹಿಂದಿನ ಉದ್ದೇಶವು ಇನ್ನೂ ಖಚಿತವಾಗಿಲ್ಲ ಎಂದು TV9 ಭಾರತವರ್ಷ್ ವರದಿ ಮಾಡಿದೆ.

ಸಂತ್ರಸ್ತೆಯ ನೆರೆಹೊರೆಯವರು ಸಾಹ್ನಿ ಇದ್ದಕ್ಕಿದ್ದಂತೆ ನಾಯಿಗಳಿಗೆ ಆಹಾರವನ್ನು ನೀಡುತ್ತಿರುವುದು ಕಂಡುಬಂದಿದೆ ಎಂದು ಹೇಳಿದರೆ.ಯಾಕೆಂದರೆ ಅವರು  ಹಿಂದೆಂದೂ ಈ ರೀತಿ ನೋಡಿರಲಿಲ್ಲ,

ಸಾಹ್ನಿ ತನ್ನ ಲಿವ್-ಇನ್ ಸಂಗಾತಿಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ ಬೀದಿ ನಾಯಿಗಳಿಗೆ ತಿನ್ನಿಸುತ್ತಿದ್ದ ಎಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಆತ ಮೃತ ದೇಹದ ತುಂಡುಗಳನ್ನು ಒಳಚರಂಡಿಗೆ ವಿಲೇವಾರಿ ಮಾಡಿರಬಹುದು ಎಂದು ಅವರು ಶಂಕಿಸಿದ್ದಾರೆ.

ಇದನ್ನೂ ಓದಿ: Mumbai Crime: ಲಿವ್-ಇನ್ ಸಂಗಾತಿಯ ಕೊಂದು, ದೇಹವನ್ನು 13 ಭಾಗ ಮಾಡಿ, ಕುಕ್ಕರ್​ನಲ್ಲಿ ಬೇಯಿಸಿದ ವ್ಯಕ್ತಿಯ ಬಂಧನ

ಪೊಲೀಸ್ ಅಧಿಕಾರಿಗಳು ಅಪರಾಧ ಸ್ಥಳದಲ್ಲಿ ಹುಡುಕಾಟ ನಡೆಸುತ್ತಿರುವಾಗ ರಕ್ತ ಮತ್ತು ದೇಹದ ಭಾಗಗಳಿಂದ ತುಂಬಿದ ಎರಡು ಬಕೆಟ್‌ಗಳನ್ನು ಪತ್ತೆ ಮಾಡಿದರು. ಫ್ಲಾಟ್ ಆಕಾಶದೀಪ್ ಕೋಆಪರೇಟಿವ್ ಹೌಸಿಂಗ್ ಸೊಸೈಟಿಯ ಮಲಗುವ ಕೋಣೆಯಲ್ಲಿ ಮರ ಕತ್ತರಿಸುವ ಯಂತ್ರ ಮತ್ತು ಮಹಿಳೆಯ ಕೂದಲು ಪತ್ತೆಯಾಗಿದೆ. ಆರೋಪಿ ಸಾಹ್ನಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಮತ್ತಷ್ಟು ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Thu, 8 June 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ