AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಪೆರೋಲ್​ ಮೇಲೆ ಬಿಡುಗಡೆಗೊಂಡಿದ್ದ ಕೊಲೆ ಆರೋಪಿಯಿಂದ ಬಾಲಕಿ ಮೇಲೆ ಅತ್ಯಾಚಾರ

ಪೆರೋಲ್​ ಮೇಲೆ ಬಿಡುಗಡೆಗೊಂಡಿದ್ದ ಕೊಲೆ ಆರೋಪಿಯೊಬ್ಬ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. ಆರೋಪಿ ಸಂಜಯ್ ಪ್ರಕಾಶ ಮಾನೆಯನ್ನು ಬಂಧಿಸಲಾಗಿದೆ, ಮಾನೆ 2011ರಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಎರಡು ತಿಂಗಳ ಹಿಂದಷ್ಟೇ ಪೆರೋಲ್ ಮೇಲೆ ಹೊರಬಂದಿದ್ದ.

ಮಹಾರಾಷ್ಟ್ರ: ಪೆರೋಲ್​ ಮೇಲೆ ಬಿಡುಗಡೆಗೊಂಡಿದ್ದ ಕೊಲೆ ಆರೋಪಿಯಿಂದ ಬಾಲಕಿ ಮೇಲೆ ಅತ್ಯಾಚಾರ
ಅಪರಾಧ
ನಯನಾ ರಾಜೀವ್
|

Updated on: Aug 25, 2024 | 3:00 PM

Share

ಪೆರೋಲ್​ ಮೇಲೆ ಬಿಡುಗಡೆಗೊಂಡಿದ್ದ ಕೊಲೆ ಆರೋಪಿಯೊಬ್ಬ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. ಆರೋಪಿ ಸಂಜಯ್ ಪ್ರಕಾಶ ಮಾನೆಯನ್ನು ಬಂಧಿಸಲಾಗಿದೆ, ಮಾನೆ 2011ರಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಎರಡು ತಿಂಗಳ ಹಿಂದಷ್ಟೇ ಪೆರೋಲ್ ಮೇಲೆ ಹೊರಬಂದಿದ್ದ.

ರಾತ್ರಿ 9.30ರ ಸುಮಾರಿಗೆ ಅಂಗಡಿಗೆಂದು ಹೊರಟಿದ್ದ ಬಾಲಕಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಬಲವಂತವಾಗಿ ಮನೆಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾನೆ. ಈ ಘಟನೆಯನ್ನು ಬಾಲಕಿ ತನ್ನ ತಾಯಿಗೆ ತಿಳಿಸಿದ್ದು, ದೂರು ದಾಖಲಾಗಿದೆ. ಎರಡು ಗಂಟೆಯೊಳಗೆ ಆತನನ್ನು ಸೆರೆ ಹಿಡಿಯಲಾಗಿದೆ.

ಕಳೆದ ತಿಂಗಳು ಮಾನೆ ಬಾಲಕಿಗೆ ಕಿರುಕುಳ ನೀಡಿದ್ದ, ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್​ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಓದಿ: Crime News: ಪಿಯುಸಿ ವಿದ್ಯಾರ್ಥಿನಿ ಮೇಲೆ ಶಾಲಾ ಬಸ್ ಚಾಲಕನಿಂದ ನಿರಂತರ ಅತ್ಯಾಚಾರ

ಮತ್ತೊಂದು ಘಟನೆ ಪಾಲ್ಗಢದ ಖಾಸಗಿ ಶಾಲೆಯೊಂದರ ಕ್ಯಾಂಟೀನ್​ನಲ್ಲಿ ಏಳು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಉತ್ತರ ಪ್ರದೇಶದ 16 ವರ್ಷದ ಬಾಲಕ ಎಂದು ಹೇಳಲಾಗಿದೆ. ಆತನನ್ನು ಬಂಧಿಸಿ ರಿಮಾಂಡ್​ ಹೋಮ್​ಗೆ ಕಳುಹಿಸಲಾಗಿದೆ.

ಎರಡನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಗುರುವಾರ ಶಾಲೆಯ ಕ್ಯಾಂಟೀನ್​ಗೆ ಹೋಗಲು ನಿರಾಕರಿಸಿದಾಗ ಮತ್ತು ಅಲ್ಲಿ ಕೆಲಸ ಮಾಡುವ ವ್ಯಕ್ತಿ ಕಿರುಕುಳ ನೀಡುತ್ತಿದ್ದಾರೆ ಎಂದು ತರಗತಿ ಶಿಕ್ಷಕರಿಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿ 15 ದಿನಗಳಲ್ಲಿ ಮೂನಾಲ್ಕು ಬಾರಿ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ