AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಲವರ್ ಜೊತೆ ಮಾತಾಡಿದ್ದಕ್ಕೆ ಯುವಕನ ಕಗ್ಗೊಲೆ; ಹಂತಕನನ್ನು ಪತ್ತೆಹಚ್ಚಿದ್ದೇ ಒಂದು ರೋಚಕ ಕತೆ

Crime News Today | ಆರೋಪಿಗಳನ್ನು ಹಿಡಿಯಲು 170 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡಿರುವ ಪೊಲೀಸರು 230ಕ್ಕೂ ಹೆಚ್ಚು ಜನರ ಬಳಿ ಮಾಹಿತಿ ಕಲೆಹಾಕಿದ್ದಾರೆ. ಕೊಲೆ ನಡೆದ 5 ದಿನಗಳ ಬಳಿಕ ಹಂತಕರು ಸಿಕ್ಕಿಬಿದ್ದಿದ್ದಾರೆ.

Murder: ಲವರ್ ಜೊತೆ ಮಾತಾಡಿದ್ದಕ್ಕೆ ಯುವಕನ ಕಗ್ಗೊಲೆ; ಹಂತಕನನ್ನು ಪತ್ತೆಹಚ್ಚಿದ್ದೇ ಒಂದು ರೋಚಕ ಕತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 12, 2021 | 7:30 PM

Share

ನವದೆಹಲಿ: ಆತನ ಪ್ರೀತಿಸುತ್ತಿದ್ದ ಹುಡುಗಿಯೊಂದಿಗೆ ಮಾತನಾಡಿದ ಒಂದೇ ಒಂದು ತಪ್ಪಿಗೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ತನ್ನ ಮಾಜಿ ಪ್ರೇಯಸಿಯೊಂದಿಗೆ ಕ್ಲೋಸ್ ಆಗಿದ್ದ ಯುವಕನನ್ನು ಕೊಲೆ ಮಾಡಿದ್ದ ಇಬ್ಬರು ಯುವಕರನ್ನು ಹಿಡಿಯಲು ಪೊಲೀಸರು ಬರೋಬ್ಬರಿ 600 ಕಿ.ಮೀ. ಸಂಚರಿಸಿದ್ದಾರೆ. ಆ ಕೊಲೆಗಾರರು ಸೆರೆ ಸಿಕ್ಕಿದ್ದು ಹೇಗೆಂಬ ರೋಚಕ ಕತೆ ಇಲ್ಲಿದೆ…

ಆಗಸ್ಟ್​ 4ರಂದು ನಡೆದಿದ್ದ ಕೊಲೆಯ ಬಗ್ಗೆ ಪೊಲೀಸರಿಗೆ ಫೋನ್ ಬಂದಿತ್ತು. ಹಂತಕರಿಗಾಗಿ ಉತ್ತರ ಪ್ರದೇಶದ 6 ಜಿಲ್ಲೆಗಳನ್ನು ಸುತ್ತಿದ ಪೊಲೀಸರು ಕೊನೆಗೂ ಇಬ್ಬರು ಆರೋಪಿಗಳನ್ನು ಹಿಡಿದಿದ್ದಾರೆ. ಮಂಗೋಲಿ ಏರಿಯಾದಲ್ಲಿ ನಡೆದಿದ್ದ ಕೊಲೆಯ ಆರೋಪಿಗಳನ್ನು ಬಂಧಿಸಲಾಗಿದೆ. ತಾನು ಪ್ರೀತಿಸುತ್ತಿದ್ದ ಯುವತಿಯೊಂದಿಗೆ ಆಗಾಗ ಮಾತನಾಡುತ್ತಿದ್ದ ಆ ಯುವಕನಿಂದಲೇ ತಮ್ಮಿಬ್ಬರ ಬ್ರೇಕಪ್ ಆಗಿರಬಹುದು ಎಂದು ಅನುಮಾನಗೊಂಡ ಯುವಕ ತನ್ನ ತಮ್ಮನ ಜೊತೆ ಸೇರಿ ಆ ಯುವಕನ್ನೇ ಕೊಲೆ ಮಾಡಲು ನಿರ್ಧರಿಸಿದ್ದ. ಆದರೆ, ಆ ಯುವಕ ನನಗೆ ಒಂದೆರಡು ಬಾರಿ ಸಿಕ್ಕು ಪರಿಚಿತನಾಗಿದ್ದ, ಆತನ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದು ಹಂತಕನ ಮಾಜಿ ಪ್ರೇಯಸಿ ಹೇಳಿದ್ದಾಳೆ. ಕೊಲೆಗಾರನ ಅನುಮಾನದಿಂದ ಅಮಾಯಕ ಯುವಕನ ಜೀವ ಹೋಗಿದೆ.

23 ವರ್ಷದ ಯುವಕನೊಬ್ಬನನ್ನು ಇಬ್ಬರು ಬೈಕ್​ನಲ್ಲಿ ಬಂದು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆಂದು ಪ್ರತ್ಯಕ್ಷದರ್ಶಿ ಹೇಳಿಕೆ ನೀಡಿದ್ದರು. ಅಲ್ಲಿದ್ದ ಪಾರ್ಕ್​ನಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆ ಇಬ್ಬರ ಮುಖ ಸೆರೆಯಾಗಿತ್ತು. ಆ ಇಬ್ಬರು ಉತ್ತರ ಪ್ರದೇಶದ ನಿವಾಸಿಗಳೆಂಬುದು ಪೊಲೀಸರಿಗೆ ತನಿಖೆ ಬಳಿಕ ಗೊತ್ತಾಗಿತ್ತು. ಅವರನ್ನು ಹಿಡಿಯಲು ಉತ್ತರ ಪ್ರದೇಶಕ್ಕೆ ಹೊರಟ ದೆಹಲಿ ಪೊಲೀಸರಿಗೆ ಆ ಆರೋಪಿಯ ಮನೆಯವರು ಅವರಿಬ್ಬರೂ ಕೆಲವು ತಿಂಗಳಿಂದ ಮನೆಗೆ ಬಂದೇ ಇಲ್ಲ ಎಂದು ಹೇಳಿದ್ದರು. ಅವರ ಸುಳಿವು ಹಿಡಿದು 600 ಕಿ.ಮೀ. ಸುತ್ತಾಡಿದ ಪೊಲೀಸರು ಕೊನೆಗೂ ಆರೋಪಿಗಳನ್ನು ಬಂಧಿಸಿದ್ದಾರೆ.

ಇಬ್ಬರು ಆರೋಪಿಗಳ ಮೊಬೈಲ್ ನೆಟ್​ವರ್ಕ್ ಆಧರಿಸಿ ಫಾಲೋ ಮಾಡಿದ ಪೊಲೀಸರ ಕಣ್ತಪ್ಪಿಸಿ ಹಲವು ಬಾರಿ ಆರೋಪಿಗಳು ತಪ್ಪಿಸಿಕೊಂಡರು. ಕೊನೆಗೆ ಬಸ್​ವೊಂದರಲ್ಲಿ ಬೇರೆ ಊರಿಗೆ ಪರಾರಿಯಾಗುತ್ತಿದ್ದ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳನ್ನು ಹಿಡಿಯಲು 170 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡಿರುವ ಪೊಲೀಸರು 230ಕ್ಕೂ ಹೆಚ್ಚು ಜನರ ಬಳಿ ಮಾಹಿತಿ ಕಲೆಹಾಕಿದ್ದಾರೆ. ಕೊಲೆ ನಡೆದ 5 ದಿನಗಳ ಬಳಿಕ ಹಂತಕರು ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: Crime News: ಪ್ರೀತಿಗಾಗಿ ಗೆಳೆಯನ ತಲೆಯನ್ನೇ ಕತ್ತರಿಸಿದ 17 ವರ್ಷದ ಯುವಕ; ತ್ರಿಕೋನ ಪ್ರೇಮಕತೆಯ ದುರಂತ ಅಂತ್ಯ

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ

(Murder After 600 km chase Delhi Police Arrested Murder accused Who Killed Man for Speaking with his Lover)

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!