
ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ಹಾಸನ ತಾಲೂಕಿನ ಚಿಕ್ಕಗೇಣಗೆರೆಯ ರಮೇಶ್ ಎಂಬಾತನನ್ನ ಹಂತಕರು ರಾತ್ರಿ ಮಾರಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ.
ಘಟನೆ ಹಿನ್ನೆಲೆ:
ಆದರೆ ರಮೇಶ್ ಮೇಲಿನ ಆರೋಪ ಸಾಬೀತಾಗಿರಲಿಲ್ಲ. ಘಟನೆ ನಡೆದ ಆರು ತಿಂಗಳ ಬಳಿಕ ಈಗ ರಮೇಶ್ ಭೀಕರವಾಗಿ ಕೊಲೆಯಾಗಿದ್ದಾನೆ. ರಮೇಶ್ ಪತ್ನಿ ಕೊಲೆ ಆರೋಪದಲ್ಲಿ ಇನ್ನೂ ಜೈಲಲ್ಲೇ ಇದ್ದಾಳೆ. ಈ ಸಂಬಂಧ ಹಾಸನ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Published On - 2:54 pm, Mon, 30 September 19