ಹಾಸನದಲ್ಲಿ ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆ

ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ಹಾಸನ ತಾಲೂಕಿನ ಚಿಕ್ಕಗೇಣಗೆರೆಯ ರಮೇಶ್ ಎಂಬಾತನನ್ನ ಹಂತಕರು ರಾತ್ರಿ ಮಾರಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ. ಘಟನೆ ಹಿನ್ನೆಲೆ:  ಆರು ತಿಂಗಳ ಹಿಂದೆ ನಡೆದಿದ್ದ ಘಟನೆಯಲ್ಲಿ ಮೃತಪಟ್ಟ ರಮೇಶ್ ನ ಪತ್ನಿ ತೇಜಾ, ಕೊಟ್ಟ ಹಣ ವಾಪಸ್ ಕೇಳಿದ್ದ ಕಾರಣಕ್ಕೆ ಸೈನಿಕರೊಬ್ಬರ ಪತ್ನಿಯನ್ನ ಕೊಂದು ಜೈಲು ಸೇರಿದ್ದಳು. ಇದಕ್ಕೆ ರಮೇಶ ಸಹ ಕುಮ್ಮಕ್ಕು ನೀಡಿದ್ದ ಎಂದು ಆತನಿಗೆ […]

ಹಾಸನದಲ್ಲಿ ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆ
ಸಾಧು ಶ್ರೀನಾಥ್​

Updated on: Sep 30, 2019 | 2:58 PM

ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ಹಾಸನ ತಾಲೂಕಿನ ಚಿಕ್ಕಗೇಣಗೆರೆಯ ರಮೇಶ್ ಎಂಬಾತನನ್ನ ಹಂತಕರು ರಾತ್ರಿ ಮಾರಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ.

ಘಟನೆ ಹಿನ್ನೆಲೆ:
 ಆರು ತಿಂಗಳ ಹಿಂದೆ ನಡೆದಿದ್ದ ಘಟನೆಯಲ್ಲಿ ಮೃತಪಟ್ಟ ರಮೇಶ್ ನ ಪತ್ನಿ ತೇಜಾ, ಕೊಟ್ಟ ಹಣ ವಾಪಸ್ ಕೇಳಿದ್ದ ಕಾರಣಕ್ಕೆ ಸೈನಿಕರೊಬ್ಬರ ಪತ್ನಿಯನ್ನ ಕೊಂದು ಜೈಲು ಸೇರಿದ್ದಳು. ಇದಕ್ಕೆ ರಮೇಶ ಸಹ ಕುಮ್ಮಕ್ಕು ನೀಡಿದ್ದ ಎಂದು ಆತನಿಗೆ ಸಾರ್ವಜಕನಿಕರು ಈ ಹಿಂದೆ ಥಳಿಸಿದ್ದರು.

ಆದರೆ ರಮೇಶ್ ಮೇಲಿನ ಆರೋಪ ಸಾಬೀತಾಗಿರಲಿಲ್ಲ. ಘಟನೆ ನಡೆದ ಆರು ತಿಂಗಳ ಬಳಿಕ ಈಗ ರಮೇಶ್ ಭೀಕರವಾಗಿ ಕೊಲೆಯಾಗಿದ್ದಾನೆ. ರಮೇಶ್ ಪತ್ನಿ ಕೊಲೆ ಆರೋಪದಲ್ಲಿ ಇನ್ನೂ ಜೈಲಲ್ಲೇ ಇದ್ದಾಳೆ. ಈ ಸಂಬಂಧ ಹಾಸನ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:54 pm, Mon, 30 September 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us